ಶಿವಮೊಗ್ಗ : ಒಂದು ವರ್ಷ 2 ತಿಂಗಳ ಹಿಂದೆ ಮದುವೆಯಾಗಿದ್ದ ನವ ವಿವಾಹಿತೆ ಅನುಮಾನಸ್ಪದವಾಗಿ ಸಾವನ್ನಪ್ಪಿದ್ದು ಇದು ಆತ್ಮಹತ್ಯೆ ಎಂದು ಗಂಡನ ಮನೆಯ ಕಡೆಯವರು ಹೇಳಿದರೆ ಯುವತಿಯ ತವರು ಮನೆಯವರು ಇದು ಕೊಲೆ ಎಂದು ಆರೋಪಿಸಿದ್ದಾರೆ.
ಸೋಮವಾರ ಸಂಜೆ ನಗರದ ಪ್ರತಿಷ್ಠಿತ ದೇವಸ್ಥಾನಕ್ಕೆ ವಾಲಗ ಊದಲು ಪತಿ ಚಂದ್ರಶೇಖರ್ ಸಿದ್ದರಾಗುತ್ತಿದ್ದು ಆ ವೇಳೆ ಯಾವುದೊ ವಿಚಾರದಲ್ಲಿ ಗಲಾಟೆ ಮಾಡಿಕೊಂಡಿದ್ದಾರೆ. ಸ್ನಾನದ ಮನೆಗೆ ಪತಿ ಹೋದಾಗ ಪತ್ನಿ ಧನ್ಯಶ್ರೀ ನೇಣು ಹಾಕಿಕೊಂಡಿದ್ದಾರೆ ಎಂದು ಗಂಡನ ಮನೆಯವರು ಹೇಳಿದ್ದಾರೆ.
ಧನ್ಯಶ್ರೀ(23) ಎನ್ ಆರ್ ಪುರದ ಯುವತಿ ಆಗಿದ್ದು, ಆರ್ ಎಂಎಲ್ ನಗರದ ಸ್ವಂತ ಮನೆಯಲ್ಲಿ ಈ ಘಟನೆ ನಡೆದಿದೆ. ಬೆಡ್ ರೂಮ್ ನಲ್ಲಿ ಸೀರೆಗೆ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ ಎಂದು ಪತಿಯ ಮನೆಯವರು ತಿಳಿಸಿದ್ದಾರೆ.
ಆದರೆ ಧನ್ಯಶ್ರೀ ತವರು ಮನೆಯವರು ಇದು ಕೊಲೆ ಎಂದು ಬಣ್ಣಿಸಿದೆ. ವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆಮಾಡಿಕೊಂಡಿರುವುದು ನಮಗೆ ತೋರಿಸಿಲ್ಲ. ಹಾಗಾಗಿ ಇವರ ಮಾನಸಿಕ ಕಿರುಕುಳದಿಂದ ಸಾವನ್ನಪ್ಪಿದ್ದಾಳೆ ಎಂದು ಧನ್ಯಶ್ರೀ ಕುಟುಂಬ ಆಗ್ರಹಿಸಿದೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್