ಶಿವಮೊಗ್ಗದ ವಿಮಾನ ನಿಲ್ದಾಣ ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಗೆ ಕಾರ್ಖಾನೆ ಉಳಿಸುವಂತೆ ಮನವಿ ನೀಡಲೇಬೇಕು ಎಂದು ನಿರ್ಧರಿಸಿದ್ದ ಸಾವಿರಾರು ವಿಐಎಸ್ ಎಲ್ ಗುತ್ತಿಗೆ ನೌಕರರ ಕಾರ್ಯಕರ್ತರನ್ನು ಬಿಳಕಿ ಕ್ರಾಸ್ ಬಳಿ ಪೊಲೀಸರು ತಡೆದಿದ್ದಾರೆ.
ಪೊಲೀಸರು ತಡೆದರೂ ಗದ್ದೆಯಲ್ಲಿ ಎದ್ದು ಬಿದ್ದು ಓಡಿ ಶಿವಮೊಗ್ಗ ವಿಮಾನ ನಿಲ್ದಾಣದ ಕಡೆ ಹೋರಾಟಗಾರರು ತೆರಳುತಿದ್ದಾರೆ.
ಇಂದು ಬೆಳಗ್ಗಿನ ಜಾವವೇ ಸಂಘದ 40 ಕ್ಕೂ ಹೆಚ್ಚು ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಆದರೆ ಇಂದು ಬೆಳಿಗ್ಗೆ ಭದ್ರಾವತಿ ಶಾಸಕ ಬಿ ಕೆ ಸಂಗಮೇಶ್ ನೇತೃತ್ವದಲ್ಲಿ ಬೈಕ್ ರ್ಯಾಲಿ ಮೂಲಕ ಹೊರಟ ನೌಕರರ ಸಂಘದ ಉಳಿದ ಕಾರ್ಯಕರ್ತರನ್ನು ಬಿಳಕಿ ಕ್ರಾಸ್ ಬಳಿ ತಡೆಯಲಾಗಿದೆ.
ಬ್ಯಾರಿಕೇಡ್ ನ್ನು ತಡೆದು ಮುನ್ನುಗ್ಗಲು ಯತ್ನಿಸಿದ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ತಿಕ್ಕಾಟ ನಡೆದಿದೆ. ಕೆಲ ಕಾರ್ಮಿಕರು ಗದ್ದೆಗಳಲ್ಲಿ ಓಡಿ ಹೋಗಿ ವಿಮಾನ ನಿಲ್ದಾಣದ ಉದ್ಘಾಟನೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದಾರೆ. ಬಿಳಿಕಿ ಕ್ರಾಸ್ ಬಳಿ ಪೊಲೀಸರು ತಡೆದರೂ ಪ್ರವಾಹದ ರೀತಿಯಲ್ಲಿ ಬಂದಿದ್ದ ಕಾರ್ಮಿಕರು ನುಗ್ಗಿ ಸಾಗಲು ಯತ್ನಿಸಿದ್ದಾರೆ.
ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ A school bus lost control…
ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ Congress leaders in Sagar have hit…
ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ Summa S.…
ರಿಪ್ಪನ್ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in…
ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…
ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…