ಪ್ರೀತಿ ಮತ್ತು ಕ್ಷಮೆಯಿಂದ ಜಗತ್ತನ್ನೇ ಗೆಲ್ಲಬಹುದು – ಧರ್ಮಗುರು ರೋಷನ್ ಪಿಂಟೋ
ರಿಪ್ಪನ್ಪೇಟೆ : ಪ್ರೀತಿ ಮತ್ತು ಕ್ಷಮೆಯಿಂದ ಜಗತ್ತನ್ನೇ ಗೆಲ್ಲಬಹುದು ಎಂದು ತೋರಿಸಿಕೊಟ್ಟ ಪ್ರಭು ಏಸು ಸ್ವಾಮಿಯವರ ಶುಭ ಸಂದೇಶ ಇಂದಿಗೂ ಪ್ರಸ್ತುತ ಎಂದು ಶಿವಮೊಗ್ಗ ಮಲ್ಟಿಪಲ್ ಸೋಷಿಯಲ್ ಸರ್ವಿಸ್ ನಿರ್ದೇಶಕರಾದ ಧರ್ಮಗುರು ರೋಷನ್ ಪಿಂಟೋ ಹೇಳಿದರು.
ಪಟ್ಟಣದ ಗುಡ್ ಶೆಪರ್ಡ್ ಚರ್ಚ್ ನ ವಾರ್ಷಿಕ ಹಬ್ಬದ ಅಂಗವಾಗಿ ರಿಪ್ಪನ್ಪೇಟೆಯ ವಿನಾಯಕ ವೃತ್ತದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಶುಭ ಸಂದೇಶವನ್ನು ನೀಡಿದ ಅವರು ಸಮಾಜದಲ್ಲಿನ ಪ್ರತಿಯೊಬ್ಬರು ಪ್ರೀತಿಯನ್ನು ಹಂಚಿಕೊಂಡು ಕ್ಷಮೆಯಾಚನೆ ನೀಡುವುದರ ಮೂಲಕ ಜಾತಿ ಮತ ಪಂಥಗಳ ಭೇಧವನ್ನು ಮರೆತು ಸದ್ಭಾವನೆಯಿಂದ ಎಲ್ಲಾರಲ್ಲೂ ಬೆರೆತು ಸಹಕಾರ ಮನೋಭಾವನೆಯಿಂದ ಬಾಳ್ವೆಯನ್ನು ಮಾಡಿದರೆ ಪ್ರತಿಯೊಬ್ಬರು ನೆಮ್ಮದಿಯ ಬದುಕನ್ನು ಕಾಣಬಹುದು ಎಂದು ಹೇಳಿದರು.
ಈ ಕಾರ್ಯಕ್ರಮದಲ್ಲಿ ಭದ್ರಾವತಿ ಧರ್ಮಾಧ್ಯಕ್ಷರಾದ ಜೋಸೆಫ್ ಅರಮಚ್ಚಾಡತ್ ,ಆನವಟ್ಟಿ ಧರ್ಮಗುರು ಮ್ಯಾಥ್ಯೂ ಎಂ ಸಿ ಬಿ ಎಸ್ , ಧರ್ಮಗುರು ಲಿಬಿನ್ ಹಾಗೂ ರಿಪ್ಪನ್ಪೇಟೆ ಗುಡ್ ಶೆಪರ್ಡ್ ಧರ್ಮಗುರು ಬಿನೋಯ್ ಉಪಸ್ಥಿತರಿದ್ದರು.ಕಾರ್ಯಕ್ರಮವನ್ನು ಸೆಬಾಸ್ಟಿಯನ್ ಮ್ಯಾಥ್ಯೂಸ್ ನಿರೂಪಿಸಿದರು.
ಇದಕ್ಕೂ ಮುನ್ನ ಗುಡ್ ಶೆಪರ್ಡ್ ಚರ್ಚ್ ನಿಂದ ವಿನಾಯಕ ವೃತ್ತದವರೆಗೆ ಏಸು ಕ್ರಿಸ್ತರ ಪ್ರತಿಮೆಯನ್ನು ಮೆರವಣಿಗೆಯ ಮೂಲಕ ಭಕ್ತಿಗಾನಗಳಿಂದ ತರಲಾಯಿತು.
ಈ ಮೆರವಣಿಗೆಯಲ್ಲಿ ರಿಪ್ಪನ್ಪೇಟೆ ಸೇರಿದಂತೆ ಸಾಗರ ,ಶಿವಮೊಗ್ಗ, ಸಾಗರ,ಹೊಸನಗರದಿಂದ ಆಗಮಿಸಿದ ನೂರಾರು ಭಕ್ತರು ಪಾಲ್ಗೊಂಡಿದರು.
ರಿಪ್ಪನ್ಪೇಟೆ ಗುಡ್ ಶೆಪರ್ಡ್ ಫೋರೋನ ದೇವಾಲಯದ ಧರ್ಮಗುರು ಬಿನೋಯ್ ರವರ ನೇತೃತ್ವದಲ್ಲಿ ಮೂರು ದಿನಗಳ ಕಾಲ ನಡೆದ ಧಾರ್ಮಿಕ ಕಾರ್ಯಕ್ರಮ ,ಮೆರವಣಿಗೆ ಸಾಂಗವಾಗಿ ನಡೆಯಿತು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್