ಬಡ ಜನರ ಬದುಕಿನಲ್ಲಿ ಬದಲಾವಣೆ ತರಲು ರಥಯಾತ್ರೆ : ಹೆಚ್ ಡಿ ಕುಮಾರಸ್ವಾಮಿ|HDK

ಬಡ ಜನರ ಬದುಕಿನಲ್ಲಿ ಬದಲಾವಣೆ ತರಲು ರಥಯಾತ್ರೆ : ಎಚ್ ಡಿ ಕುಮಾರಸ್ವಾಮಿ

ರಿಪ್ಪನ್ ಪೇಟೆ : ಬಡಜನರ ಬದುಕಿನಲ್ಲಿ ಬದಲಾವಣೆ ತರಲು ರಾಜ್ಯದ 28 ಜಿಲ್ಲೆಗಳಲ್ಲಿ ಪಂಚರತ್ನ ರಥ ಯಾತ್ರೆಯ ಮೂಲಕ ಪ್ರವಾಸ ಕೈಗೊಂಡಿದ್ದೇನೆ. ಇತರೆ ಪಕ್ಷಗಳಲ್ಲಿ ನಾಯಕರುಗಳ ಗುಂಪೆ ಇದೆ ಆದರೆ ನನ್ನದು ಏಕಾಂಗಿ ಹೋರಾಟ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.




ಶುಕ್ರವಾರ ಸಮೀಪದ ಹುಂಚದ ಕಟ್ಟೆ ಗ್ರಾಮದಲ್ಲಿ ಜೆಡಿಎಸ್ ಪಕ್ಷದ ಪಂಚರತ್ನ ರಥಯಾತ್ರೆ ಸಲುವಾಗಿ ಆಗಮಿಸಿದ್ದ ಅವರು ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದರು.

ಇದುವರೆಗೆ 74 ಕ್ಷೇತ್ರಗಳಲ್ಲಿ ಸುತ್ತಾಡಿದ್ದು ದಿನಕ್ಕೆ 35 ರಿಂದ 40 ಹಳ್ಳಿಗಳ ಭೇಟಿ ಮಾಡಿ ಜನರ ಸುಖ-ದುಃಖಗಳನ್ನು ಅರಿಯುವ ಪ್ರಯತ್ನ ಮಾಡುತ್ತಿದ್ದೇನೆ.ಎಲ್ಲಾ ರಾಷ್ಟ್ರೀಯ ಪಕ್ಷಗಳು ಜನರಿಗೆ ದುಡ್ಡು ನೀಡಿ ಜನರನ್ನು ಕರೆಸುತ್ತಾರೆ ಆದರೆ ನನ್ನದು ಜನರು ಇರುವ ಕಡೆ ನಾನೇ ಹೋಗುತ್ತಿದ್ದೇನೆ ಜನರ ನಾಡಿ ಮಿಡಿತ ತಿಳಿಯುತ್ತದೆ ಜೆಡಿಎಸ್ ಬಗ್ಗೆ ಇಡೀ ರಾಜ್ಯದ್ಯಂತ ಒಳ್ಳೆಯ ಒಲವಿದೆ ಈ ಬಾರಿಯ ಚುನಾವಣೆಯಲ್ಲಿ ಜೆಡಿಎಸ್ ಜಯಭೇರಿ ಬಾರಿಸಲಿದೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಖಾತೆ ತೆರೆಯಲಿದೆ ಎಂದರು.




ಅಮಿತ್ ಶಾ ದೇವೇಗೌಡರ ಕುಟುಂಬದಲ್ಲಿ ಎಲ್ಲರೂ ರಾಜಕೀಯ ಮಾಡಿದರೆ ಮನೆ ಕೆಲಸ ಮಾಡುವವರು ಯಾರು? ಎಂದಿದ್ದಾರೆ ಹಾಗಾದರೆ ಅವರ ಪಕ್ಷದ ಯಡಿಯೂರಪ್ಪ ಕುಟುಂಬದಲ್ಲಿ ಎಲ್ಲರೂ ರಾಜಕೀಯ ಮಾಡುವವರೇ ಇದ್ದಾರೆ ಹಾಗಾದರೆ ಅವರ ಮನೆ ಕೆಲಸ ಮಾಡುವವರು ಯಾರು? ಎಂದು ಕುಟುಕಿದರು.

ಶಿವಮೊಗ್ಗ ಜಿಲ್ಲೆಯಲ್ಲಿ ಹಲವು ದಶಕಗಳಿಂದ ಶರಾವತಿ ಮುಳುಗಡೆ ಸಂತ್ರಸ್ತರ ಸಂಕಷ್ಟವನ್ನು ಬಗೆಹರಿಸದ ಸರ್ಕಾರ ಇನ್ನೂ ಹದಿನೈದು ದಿನಗಳಲ್ಲಿ ಬಗೆ ಹರಿಸುತ್ತೆವೆಂದು ವಾಗ್ದಾನ ನೀಡಿರುವುದನ್ನು ಎಷ್ಟರ ಮಟ್ಟಿಗೆ ಫಲಪ್ರದವಾಗುತ್ತದೋ ತಿಳಿಯದು ಆದರೆ ಈಡೇರಿದಲ್ಲಿ ಮೊದಲು ಸರ್ಕಾರಕ್ಕೆ ನಾನು ಅಭಿನಂದಿಸುತ್ತೇನೆಂದರು.
ರಾಜ್ಯದಲ್ಲಿ ಜೆಡಿಎಸ್ ಅಧಿಕಾರ ಹಿಡಿಯುವ ಬಗ್ಗೆ ಆಶಾಭಾವನೆ ಹೊಂದಿದ್ದು ನೂತನ ಸರ್ಕಾರದಲ್ಲಿ ರೈತರಿಗೆ ವಿಶೇಷವಾದಂತಹ ಯೋಜನೆಗಳನ್ನು ರೂಪಿಸಲಾಗುವುದು ಪ್ರಗತಿಪರ ರೈತರನ್ನು ಗುರುತಿಸಿ ಅವರುಗಳ ಸಲಹೆ ಸಹಕಾರ ಪಡೆದು ಉತ್ತಮ ರೈತ ಯೋಜನೆ ಅನುಷ್ಟಾನಗೊಳಿಸುವ ಇರಾದೆ ನಮ್ಮ ಸರ್ಕಾರದಾಗಿದೆ ಎಂದರು.

ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಎಲೆಚುಕ್ಕಿ ರೋಗಕ್ಕೆ ಸರ್ಕಾರ ಕೋಟಿಗಟ್ಟಲೆ ಹಣ ಬಿಡುಗಡೆಗೊಳಿಸುವುದು ಮುಖ್ಯವಲ್ಲ ರೋಗ ನಿಯಂತ್ರಣಕ್ಕೆ ಯೋಜನೆಯಡಿ ಸಂಶೋಧನೆ ಎಷ್ಟು ಫಲಪ್ರದವಾಗಿದೆ ಎಂಬುದರ ಬಗ್ಗೆ ಸರ್ಕಾರಗಳು ಜಾಗೃತವಾಗಬೇಕು ಎಂದರು.

ಕೇಂದ್ರದ ಗೃಹ ಸಚಿವ ಅಮಿತ್ ಶಾ ರವರು ರಾಜ್ಯಕ್ಕೆ ಬಂದು ದೇವೇಗೌಡರ ಕುಟುಂಬ ಪೂರ್ಣ ರಾಜಕಾರಣದಲ್ಲಿ ತೊಡಗಿದರೆ ಅವರ ಮನೆ ಕೆಲಸ ಮಾಡುವವರು ಯಾರು ? ಎಂದು ಪ್ರಶ್ನಿಸಿದ್ದಾರೆ. ಅವರ ಪಕ್ಕದಲ್ಲಿ ಕುಳಿತ ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರನ್ನು ವಿಚಾರಿಸಿದರೆ ಸಾಕಿತ್ತು ಆಗ ಗೊತ್ತಾಗುತ್ತಿತ್ತು ಮನೆಗೆಲಸ ಮಾಡುವವರು ಯಾರು ಎಂಬುದು ಎಂದು ಮಾರ್ಮಿಕವಾಗಿ ಹೇಳಿದರು.

ರೈತರ ಸಾಲ ಮನ್ನಾ ಫಲಾನುಭವಿಗಳಿಗೆ ಸರ್ಕಾರ ಇನ್ನೂ 2800 ಕೋಟಿ ಹಣ ವಿತರಣೆ ಮಾಡಿಲ್ಲ. ಸಾಕಷ್ಟು ರೈತರು ಸಾಲಮನ್ನಾದಿಂದ ವಂಚಿತರಾಗಿದ್ದಾರೆಂದು ಕಳವಳ ವ್ಯಕ್ತಪಡಿಸಿದ ಅವರು, ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ರೈತರ ಬೆಳೆ ಸಾಲ ಮನ್ನಾವಾಗಿದ್ದರೂ ಹೊಸ ಸಾಲಸೌಲಭ್ಯ ದೊರೆಯದೆ ಬೇರೆ ಬ್ಯಾಂಕ್‌ಗಳಲ್ಲಿ ಸಾಲ ಪಡೆಯಲು ಕ್ಲಿಯರೆಸ್ಸ್ ಕೊಡದೆ ಸತಾಯಿಸುತ್ತಿರುವುದರ ಬಗ್ಗೆ ಸರ್ಕಾರ ನಿರ್ಲಕ್ಷ್ಯ ತಾಳಿದೆ ಎಂದು ಕಿಡಿ ಕಾರಿದರು.



ಮುಂಬರುವ ಚುನಾವಣೆಯಲ್ಲಿ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ನಿಯೋಜಿತ ಅಭ್ಯರ್ಥಿ ರಾಜಾರಾಮ್ ಯಡೂರು ಇವರನ್ನು ಅತ್ಯಧಿಕ ಬಹುಮತದಿಂದ ಗೆಲ್ಲಿಸಬೇಕೆಂದು ಈ ಸಂದರ್ಭದಲ್ಲಿ ಸಾರ್ವಜನಿಕರಲ್ಲಿ ಕಾರ್ಯಕರ್ತರಲ್ಲಿ ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಎಂ ಎಲ್ ಸಿ ಬೋಜೇಗೌಡ ,ಜಿಲ್ಲಾಧ್ಯಕ್ಷ ಎಂ ಶ್ರೀಕಾಂತ್,ನಿಯೋಜಿತ ಅಭ್ಯರ್ಥಿ ರಾಜಾರಾಮ್  ಯಡೂರು, ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಆರ್. ಎ. ಚಾಬುಸಾಬ್ ,ಜಿಲ್ಲಾಧ್ಯಕ್ಷ ಶ್ರೀಕಾಂತ್, ಹೊಸನಗರ ತಾಲೂಕು ಅಧ್ಯಕ್ಷ ಎನ್ ವರ್ತೇಶ್, ಜಿಲ್ಲಾ ಉಪಾಧ್ಯಕ್ಷ ಜಿ.ಎಸ್. ವರದರಾಜ್,ಕಟ್ಟೆ ಪ್ರವೀಣ್ , ಇನ್ನು ಮುಂತಾದವರು ಹಾಜರಿದ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

Ranks Institute–ಜೆಸಿಐ ಹೊಸನಗರ ಡೈಮಂಡ್‌ ಆಯೋಜನೆಯಲ್ಲಿ ‘Gen Z Connect’ ಯಶಸ್ವಿ

ರ‍್ಯಾಂಕ್ಸ್ ಇನ್ಸ್ಟಿಟ್ಯೂಟ್–ಜೆಸಿಐ ಹೊಸನಗರ ಡೈಮಂಡ್‌ ಸಹಯೋಗದಲ್ಲಿ ‘Gen Z Connect’ ತರಬೇತಿ ಯಶಸ್ವಿ Ranks Institute–JCI Hosanagara Diamond Hosts…

16 hours ago

ಬೆಳ್ಳೂರು GHPSನಲ್ಲಿ ಸ್ವಾತಂತ್ರ್ಯ ಸಂಭ್ರಮ: ಶಾಲೆಗೆ ಕೊಡುಗೆಗಳ ಮಹಾಪೂರ!

ಬೆಳ್ಳೂರು GHPSನಲ್ಲಿ ಸ್ವಾತಂತ್ರ್ಯ ಸಂಭ್ರಮ: ಶಾಲೆಗೆ ಕೊಡುಗೆಗಳ ಮಹಾಪೂರ! Satish Ripponpete donated a TV to GHPS Bellur…

20 hours ago

ಗರ್ತಿಕೆರೆಯಲ್ಲಿ ಮಾರಣಾಂತಿಕ ಹಲ್ಲೆ: ಅಟ್ಟಹಾಸ ಮೆರೆದಿದ್ದ ಆರೋಪಿಯ ಹೆಡೆಮುರಿ ಕಟ್ಟಿದ ಪೊಲೀಸರು

ಗರ್ತಿಕೆರೆಯಲ್ಲಿ ಮಾರಣಾಂತಿಕ ಹಲ್ಲೆ: ಅಟ್ಟಹಾಸ ಮೆರೆದಿದ್ದ ಆರೋಪಿಯ ಹೆಡೆಮುರಿ ಕಟ್ಟಿದ ಪೊಲೀಸರು Police arrest Raghavendra alias Apple Raghu…

20 hours ago

ಅಕ್ರಮ ಗೋ ಸಾಗಾಟ ತಡೆಯಲು ಹೋದ ಬಜರಂಗದಳ ಕಾರ್ಯಕರ್ತರ ಮೇಲೆ ಭೀಕರ ಹಲ್ಲೆ – ಬಿ ವೈ ವಿಜಯೇಂದ್ರ ಆಕ್ರೋಶ

ಅಕ್ರಮ ಗೋ ಸಾಗಾಟ ತಡೆಯಲು ಹೋದ ಬಜರಂಗದಳ ಕಾರ್ಯಕರ್ತರ ಮೇಲೆ ಭೀಕರ ಹಲ್ಲೆ - ಬಿ ವೈ ವಿಜಯೇಂದ್ರ ಆಕ್ರೋಶ…

21 hours ago

ಗರ್ತಿಕೆರೆಯಲ್ಲಿ ವ್ಯಕ್ತಿಯ ಮೇಲೆ ಕಬ್ಬಿಣದ ರಾಡ್ ನಿಂದ ಮಾರಣಾಂತಿಕ ಹಲ್ಲೆ; ತಲೆಯ ಮೇಲೆ ಕಾಲಿಟ್ಟು ಅಟ್ಟಹಾಸ ಮೆರೆದ ಭೂಫ

ಗರ್ತಿಕೆರೆಯಲ್ಲಿ ವ್ಯಕ್ತಿಯ ಮೇಲೆ ಕಬ್ಬಿಣದ ರಾಡ್ ನಿಂದ ಮಾರಣಾಂತಿಕ ಹಲ್ಲೆ; ತಲೆಯ ಮೇಲೆ ಕಾಲಿಟ್ಟು ಅಟ್ಟಹಾಸ ಮೆರೆದ ಭೂಫ A…

1 day ago

ಚುಂಚಾದ್ರಿ ಮಹಿಳಾ ಒಕ್ಕಲಿಗರ ವೇದಿಕೆಯಿಂದ ಸ್ವಾತಂತ್ರ್ಯ ದಿನಾಚರಣೆ

ಚುಂಚಾದ್ರಿ ಮಹಿಳಾ ಒಕ್ಕಲಿಗರ ವೇದಿಕೆಯಿಂದ ಸ್ವಾತಂತ್ರ್ಯ ದಿನಾಚರಣೆ Ripponpete Chunchadri Mahila Okkaligar Vedike celebrated the 80th Independence…

1 day ago