ಲೋ ಶುಗರ್ ಹಾಗೂ ಗ್ರೋತ್ ಆರ್ಗನ್ ಸಮಸ್ಯೆಯಿಂದ ಬಳಲುತ್ತಿದ್ದ 5 ವರ್ಷದ ಬಾಲಕನಿಗೆ ನಿರಂತರ ಚಿಕಿತ್ಸೆಗೆ ವ್ಯವಸ್ಥೆ ಮಾಡುವ ಮೂಲಕ ಸಂಸದ ಬಿ.ವೈ. ರಾಘವೇಂದ್ರ ಮಾನವೀಯತೆ ಮೆರೆದಿದ್ದಾರೆ.
ಶಿವಮೊಗ್ಗ ತಾಲ್ಲೂಕಿನ ಇಟ್ಟಿಗೆ ಹಳ್ಳಿ ಗ್ರಾಮದಲ್ಲಿ ಗಾರೆ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ರಾಘವೇಂದ್ರ ಹಾಗೂ ಅಶ್ವಿನಿ ದಂಪತಿಗೆ ಇಬ್ಬರು ಮಕ್ಕಳು.
ಮೊದಲನೆಯವನು ಎಲ್ಲರಂತೆಯೇ ಇದ್ದರೂ ಎರಡನೆಯ ಮಗು ಶ್ರೇಯಸ್ಗೆ 6 ತಿಂಗಳಿನಿಂದಲೇ ವಿಚಿತ್ರ ಸಮಸ್ಯೆ ಕಾಣಿಸಿಕೊಂಡಿತ್ತು. ಲೋ ಶುಗರ್ನಿಂದ ಬಳಲುತ್ತಿದ್ದ. ಜೊತೆಗೆ ಗ್ರೋತ್ ಆರ್ಗನ್ ಸಮಸ್ಯೆ ಕೂಡ ಕಾಣಿಸಿಕೊಂಡಿತ್ತು. ಇದು ಮಗುವಿನ ಬೆಳವಣಿಗೆ ಕುಂಠಿತಗೊಳಿಸುತ್ತಿದ್ದಲ್ಲದೆ, ಪ್ರಾಣಾಪಾಯವೂ ಇತ್ತು.ವೈದ್ಯರಿಗೆ ಮಗುವಿನ ಸಮಸ್ಯೆ ಏನೆಂದು ಗುರುತಿಸಲು ಮೂರು ವರ್ಷಗಳು ಬೇಕಾಯ್ತು. ನಂತರ ಪ್ರತಿ ತಿಂಗಳೂ ಹತ್ತಾರು ಸಾವಿರ ರೂ.ಗಳ ಮೆಡಿಸಿನ್ ಮತ್ತು ಚಿಕಿತ್ಸಾವೆಚ್ಚ ಭರಿಸಬೇಕಾಗಿತ್ತು. ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದ ಕುಟುಂಬಕ್ಕೆ ದುಬಾರಿ ಚಿಕಿತ್ಸಾ ವೆಚ್ಚ ಭರಿಸುವುದೇ ಅಸಾಧ್ಯ ಎನ್ನುವಂತಾಗಿತ್ತು. ಸದ್ಯ ಮಗುವಿಗೆ 5 ವರ್ಷ 4 ತಿಂಗಳಾಗಿದ್ದು, ಇನ್ನು ಚಿಕಿತ್ಸೆ ಕೊಡಿಸುವುದು ಅಸಾಧ್ಯ ಎನ್ನುವಂತಹ ಪರಿಸ್ಥಿತಿ ಎದುರಾಗಿದ್ದು, ಈ ಬಗ್ಗೆ ಸ್ಥಳೀಯ ಬಿಜೆಪಿ ಮುಖಂಡರು ಸಂಸದ ಬಿ.ವೈ. ರಾಘವೇಂದ್ರ ಅವರ ಗಮನ ಸೆಳೆದಿದ್ದಾರೆ.
ಸಮಸ್ಯೆಯನ್ನು ಅರಿತುಕೊಂಡ ಸಂಸದರು ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ, ಮಗುವಿಗೆ 18 ವರ್ಷವಾಗುವವರೆಗೂ ಸರ್ಕಾರದಿಂದಲೇ ಚಿಕಿತ್ಸಾ ವೆಚ್ಚ ಭರಿಸಲು ಕ್ರಮ ಕೈಗೊಂಡಿದ್ದಾರೆ.
ಶುಕ್ರವಾರ ಬೆಳಿಗ್ಗೆ ಮಗುವಿಗೆ ಸರ್ಕಾರದಿಂದ ಮೊದಲ ಔಷಧಿಗಳನ್ನು ಒದಗಿಸಲಾಗಿದ್ದು, ಸಂಸದರ ಬಿ.ವೈ. ರಾಘವೇಂದ್ರ ಮಗುವಿಗೆ ಔಷಧಿ ನೀಡಿ, ಶೀಘ್ರದಲ್ಲೇ ಮಗು ಎಲ್ಲ ಮಕ್ಕಳಂತೆ ಆರೋಗ್ಯವಾಗಿರಲಿ ಎಂದು ಹಾರೈಸಿದರು.
ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ತಮ್ಮಡಿಹಳ್ಳಿ ನಾಗರಾಜ್, ಬಿಜೆಪಿ ರೈತಮೋರ್ಚಾ ಪ್ರಧಾನಕಾರ್ಯದರ್ಶಿ ಇಟ್ಟಿಗೆಹಳ್ಳಿ ನಾಗೇಂದ್ರ, ಪ್ರಮುಖರಾದ ಸತೀಶ್, ಚೇತನ್ ಮತ್ತಿತರರಿದ್ದರು.
ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಕೃತಜ್ಞತೆ ಸಲ್ಲಿಸಿರುವ ಮಗುವಿನ ಪೋಷಕರಾದ ರಾಘವೇಂದ್ರ ಹಾಗೂ ಅಶ್ವಿನಿ ದಂಪತಿ ಸಂಕಷ್ಟದ ಸಂದರ್ಭದಲ್ಲಿ ಸ್ಪಂದಿಸಿ, ಮಗುವಿಗೆ ಚಿಕಿತ್ಸೆ ವ್ಯವಸ್ಥೆ ಮಾಡಿಸುವ ಮೂಲಕ ತಮ್ಮ ಬದುಕಲ್ಲಿ ಭರವಸೆ ಮೂಡಿಸಿದ್ದಾರೆ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ರ್ಯಾಂಕ್ಸ್ ಇನ್ಸ್ಟಿಟ್ಯೂಟ್–ಜೆಸಿಐ ಹೊಸನಗರ ಡೈಮಂಡ್ ಸಹಯೋಗದಲ್ಲಿ ‘Gen Z Connect’ ತರಬೇತಿ ಯಶಸ್ವಿ Ranks Institute–JCI Hosanagara Diamond Hosts…
ಬೆಳ್ಳೂರು GHPSನಲ್ಲಿ ಸ್ವಾತಂತ್ರ್ಯ ಸಂಭ್ರಮ: ಶಾಲೆಗೆ ಕೊಡುಗೆಗಳ ಮಹಾಪೂರ! Satish Ripponpete donated a TV to GHPS Bellur…
ಗರ್ತಿಕೆರೆಯಲ್ಲಿ ಮಾರಣಾಂತಿಕ ಹಲ್ಲೆ: ಅಟ್ಟಹಾಸ ಮೆರೆದಿದ್ದ ಆರೋಪಿಯ ಹೆಡೆಮುರಿ ಕಟ್ಟಿದ ಪೊಲೀಸರು Police arrest Raghavendra alias Apple Raghu…
ಅಕ್ರಮ ಗೋ ಸಾಗಾಟ ತಡೆಯಲು ಹೋದ ಬಜರಂಗದಳ ಕಾರ್ಯಕರ್ತರ ಮೇಲೆ ಭೀಕರ ಹಲ್ಲೆ - ಬಿ ವೈ ವಿಜಯೇಂದ್ರ ಆಕ್ರೋಶ…
ಗರ್ತಿಕೆರೆಯಲ್ಲಿ ವ್ಯಕ್ತಿಯ ಮೇಲೆ ಕಬ್ಬಿಣದ ರಾಡ್ ನಿಂದ ಮಾರಣಾಂತಿಕ ಹಲ್ಲೆ; ತಲೆಯ ಮೇಲೆ ಕಾಲಿಟ್ಟು ಅಟ್ಟಹಾಸ ಮೆರೆದ ಭೂಫ A…
ಚುಂಚಾದ್ರಿ ಮಹಿಳಾ ಒಕ್ಕಲಿಗರ ವೇದಿಕೆಯಿಂದ ಸ್ವಾತಂತ್ರ್ಯ ದಿನಾಚರಣೆ Ripponpete Chunchadri Mahila Okkaligar Vedike celebrated the 80th Independence…