ಬ್ಯಾಂಕ್ ಕಳ್ಳತನಕ್ಕೆ ವಿಫಲ ಯತ್ನ – ಸರಣಿ ಕಳ್ಳತನ ಆರೋಪದಲ್ಲಿ ಕಬಾಬ್ ಗಣೇಶ್ ಬಂಧನ|theft

ಶಿವಮೊಗ್ಗ ಜಿಲ್ಲೆಯ ಹೊಸನಗರ ಪ್ರತಿಷ್ಟಿತ ಬ್ಯಾಂಕ್‌ಗಳಲ್ಲಿ ಒಂದಾಗಿರುವ ಪಿಎಲ್‌ಡಿ ಬ್ಯಾಂಕ್ ಮುಂಭಾಗದ ಎರಡು ಬೀಗಗಳನ್ನು ಒಡೆದು ಕಳ್ಳತನಕ್ಕೆ ವಿಫಲ ಯತ್ನ ನಡೆಸಿರುವ ಘಟನೆ ನಡೆದಿದೆ.




ಹೊಸನಗರ ತಾಲೂಕಿನ ಕಾಳಿಕಾಪುರದ ಕಬಾಬ್ ಗಣೇಶ್ ಕಳ್ಳತನಕ್ಕೆ ಯತ್ನಿಸಿ ಸಿಕ್ಕಿ ಹಾಕಿಕೊಂಡಿರುವ ಆರೋಪಿಯಾಗಿದ್ದಾನೆ.

ಹೊಸನಗರ ತಾಲ್ಲೂಕಿನಲ್ಲಿ ಸುಮಾರು ಎರಡು ತಿಂಗಳುಗಳಿಂದ ಕಪಿಲ ಫೈನಾನ್ಸ್, ವೀರಶೈವ ಪತ್ತಿನ ಸಹಕಾರ ಸಂಘ, ರಕ್ಷಿತಾ ಫೈನಾನ್ಸ್, ಪುನಃ ವೀರಶೈವ ಪತ್ತಿನ ಸಹಕಾರ ಸಂಘ, ನಗರ ನೀಲಕಂಠೇಶ್ವರ ಸೊಸೈಟಿ, ಪುರಪ್ಪೆಮನೆ ಸೊಸೈಟಿಗಳಲ್ಲಿ 15 ದಿನಗಳಿಗೊಮ್ಮೆ ಸಹಕಾರ ಸಂಸ್ಥೆಗಳ ಬೀಗ ಒಡೆದು ಹಣ ದೋಚಿಕೊಂಡು ಹೋಗುತ್ತಿದ್ದರು ಹೊಸನಗರ ತಾಲ್ಲೂಕಿನ ಪೊಲೀಸರು ಕಳ್ಳರನ್ನು ಪತ್ತೆ ಮಾಡಲು ಕಷ್ಟಕರವಾಗುತ್ತಿತ್ತು. ಎಷ್ಟೇ ಸಿ.ಸಿ ಕ್ಯಾಮೆರಾಗಳಿದ್ದರೂ ಯಾವುದೇ ಸುಳಿವು ನೀಡದಂತೆ ಹಣ ದೋಚಿಕೊಂಡು ಹೋಗುತ್ತಿದ್ದರು.




ಶನಿವಾರ ಬೆಳಿಗ್ಗೆ ಸುಮಾರು 4:10 ರ ಸಂದರ್ಭದಲ್ಲಿ ಶ್ರೀ ಚೌಡಮ್ಮ ರಸ್ತೆಯಲ್ಲಿರುವ ಪಿಎಲ್‌ಡಿ ಬ್ಯಾಂಕ್‌ನ ಮುಂಭಾಗದ ಬಾಗಿಲಿನ ಬೀಗ ಒಡೆಯುವ ಸಂದರ್ಭದಲ್ಲಿ ಶಬ್ದವಾಗಿದೆ ಅಲ್ಲೇ ಸಮೀಪವಿದ್ದ ಡಿಸಿಸಿ ಬ್ಯಾಂಕ್ ರಾತ್ರಿ ಕಾವಲುಗಾರ ವಿನಯ್ ಪೂಜಾರಿ ಹಾಗೂ ಗಣಪತಿ ಬ್ಯಾಂಕ್ ರಾತ್ರಿ ಕಾವಲುಗಾರರ ಸುರೇಶ ಬಿ ಒಟ್ಟು ಸೇರಿ ಶಬ್ದ ಬಂದ ಬ್ಯಾಂಕ್ ಕಡೆಗೆ ಹೋಗಿರುವ ಸಂದರ್ಭದಲ್ಲಿ ಎದುರುಗಡೆಯ ಪಿಎಲ್‌ಡಿ ಬ್ಯಾಂಕ್‌ನ ಬೀಗ ಮುರಿದಿರುವುದು ಕಣ್ಣಿಗೆ ಬಿದ್ದಿದೆ. ತಕ್ಷಣ ಪಿಎಲ್‌ಡಿ ಬ್ಯಾಂಕ್ ಪಿಗ್ಮಿ ಸಂಗ್ರಹಕಾರರಾದ ರಾಜು ಶೆಟ್ಟಿಯವರಿಗೆ ಸಮೀಪದ ಊರಿನವರೆ ಆದ ಲಕ್ಷ್ಮಣ ಆಚಾರಿಯವರಿಗೆ ಫೋನ್ ಮಾಡಿ ಪಿಎಲ್‌ಡಿ ಬ್ಯಾಂಕ್‌ಗೆ ಕಳ್ಳರು ನುಗ್ಗಿದ್ದಾರೆ ತಕ್ಷಣ ಬನ್ನಿ ಎಂದು ತಿಳಿಸಿದ್ದಾರೆ ಎಂದು ಹೇಳಲಾಗಿದೆ‌.

ತಕ್ಷಣ ನಾಲ್ಕು ಜನರು ಒಟ್ಟಾಗಿ ಹೊಸನಗರ ಪೊಲೀಸ್ ಠಾಣೆಗೆ ಹಾಗೂ 112ಗೆ ಕರೆ ಮಾಡಿದ್ದಾರೆ ಪೊಲೀಸರು ಬರುವ ಕೆಲವೇ ಸೆಕೆಂಡ್‌ಗಳಲ್ಲಿ ಕಳ್ಳ ಬ್ಯಾಂಕ್‌ನಿಂದ ಹೊರಬಂದು ಇವರನ್ನು ತಪ್ಪಿಸಿಕೊಂಡು ಓಡಿ ಹೋಗಿದ್ದಾನೆ. ಆದರೆ ಈ ನಾಲ್ವರು ಕಳ್ಳನನ್ನು ಬೆನ್ನು ಬಿಡದಂತೆ ಓಡಿ ಹೋಗಿದ್ದಾರೆ ಇಡೀ ಪೇಟೆ ಒಂದು ಸುತ್ತು ಓಡುವಾಗ ಕಳ್ಳನಿಗೆ ಸುಸ್ತಾಗಿ ತಾನು ಧರಿಸಿದ್ದ ಹೆಲ್ಮೆಟ್ ತೆಗೆದಿದ್ದಾನೆ. ತಕ್ಷಣ ಪಿಗ್ಮಿ ಕಲೆಕ್ಟರ್ ರಾಜುಶೆಟ್ಟಿಗೆ ಕಳ್ಳ ಬೇರೆ ಯಾರು ಅಲ್ಲ ಕಬಾಬ್ ಗಣೇಶ ಎಂದು ಪರಿಚಯ ಸಿಕ್ಕಿದ್ದು ಓಡಿಸುವುದನ್ನು ಬಿಟ್ಟು ಅಷ್ಟೊತ್ತಿಗೆ 112 ಪೊಲೀಸ್ ಸಿಬ್ಬಂದಿ ಬಂದಿದ್ದಾರೆ. ತಕ್ಷಣ ಕಳ್ಳನೆಂದು ಹೇಳಲಾದ ಕಬಾಬ್ ಗಣೇಶ್‌ರವರ ಮನೆಗೆ ಹೋದಾಗ ಅಲ್ಲಿ ಅವರ ಪತ್ನಿ ನಮ್ಮ ಗಂಡ ಬೆಂಗಳೂರಿಗೆ ಹೋಗಿದ್ದಾರೆ ಅವರಿಲ್ಲ ಎಂಬ ಉತ್ತರ ಬಂದಿದೆ. ಅವರು ನಡೆದ ಘಟನೆಯನ್ನು ವಿವರಿಸಿ ಸಂಧಾನ ಮಾಡುವುದಾಗಿ ಅವರ ಪತ್ನಿಗೆ ಭರವಸೆ ನೀಡಿದ ನಂತರ ಅವರು ಕೊಡಚಾದ್ರಿ ಕಾಲೇಜ್ ಬಳಿ ಇದ್ದಾರೆ ಎಂಬ ಉತ್ತರ ನೀಡಿದ್ದು ಪೋಲೀಸರು ಹಾಗೂ ರಾಜುಶೆಟ್ಟಿಯವರ ಸಹಾಯದಿಂದ ಕಳ್ಳನನ್ನು ಬಂಧಿಸಲು ಪೊಲೀಸರಿಗೆ ಸಹಕಾರಿಯಾಗಿದೆ‌.




ಹೊಸನಗರ ಫೈನಾನ್ಸ್ ಹಾಗೂ ಸೊಸೈಟಿಗಳಲ್ಲಿ ಈತನೇ ಕಳ್ಳತನ ಮಾಡಿರಬಹುದೆನ್ನುವ ಶಂಕೆ ?

ಹೊಸನಗರದ ಕಪಿಲ ಫೈನಾನ್ಸ್, ರಕ್ಷಿತಾ ಫೈನಾನ್ಸ್, ವೀರಶೈವ ಪತ್ತಿನ ಸಹಕಾರ ಸಂಘ, ನಗರ ನೀಲಕಂಠೇಶ್ವರ ಸೊಸೈಟಿ ಹಾಗೂ ಪುರಪ್ಪೆಮನೆ ಸೊಸೈಟಿಗಳಲ್ಲಿ ಈತ ಮತ್ತು ಈತನ ಸಂಗಡಿಗರು ಕಳ್ಳತನ ಮಾಡಿರಬಹುದೆಂದು ಶಂಕಿಸಲಾಗಿದ್ದು ಎಲ್ಲವನ್ನು ಬಾಗಿಲು ಒಡೆದಿರುವುದು ಬೀಗ ಮುರಿದಿರುವುದು ಒಳ ನುಗ್ಗಿರುವುದು ಒಂದೇ ರೀತಿಯಿದ್ದು ಈತನನ್ನು ಪೊಲೀಸ್ ಭಾಷೆಯಲ್ಲಿ ವಿಚಾರಿಸಿದರೆ ಖಂಡಿತ ಎಲ್ಲ ಕಳ್ಳತನ ಬಾಯಿ ಬಿಡುವುದರ ಜೊತೆಗೆ ಇವರ ಇವರ ಜೊತೆಗೆ ಯಾರ‍್ಯಾರು ಇರಬಹುದು ಎಂಬುದನ್ನು ಬಾಯಿ ಬಿಡಿಸಬೇಕಾಗಿದ್ದು ಸಂಪೂರ್ಣ ಮಾಹಿತಿ ಪೊಲೀಸ್ ತನಿಖೆಯಿಂದ ಹೊರಬರಲಿದೆ.

ಸುಮಾರು ಎರಡು ತಿಂಗಳುಗಳಿಂದ ಪೊಲೀಸ್ ಇಲಾಖೆ ರಾತ್ರಿ ವೇಳೆಯಲ್ಲಿ ನಿದ್ದೆ ಮಾಡದೇ ತಾಲ್ಲೂಕಿನಲ್ಲಿ ಕಳ್ಳತನ ಮಾಡುವವರನ್ನು ಪತ್ತೆ ಹಚ್ಚುವಲ್ಲಿ ಮಗ್ನರಾಗಿದ್ದು ಅಂತು-ಇಂತು ಕಳ್ಳ ಸಿಕ್ಕಿರುವುದರಿಂದ ಪೊಲೀಸರು ನಿಟ್ಟುಸಿರು ಬಿಟ್ಟಿದ್ದಾರೆ.




ಹೊಸನಗರ ಸರ್ಕಲ್ ಇನ್ಸ್‌ಪೆಕ್ಟರ್ ಗಿರೀಶ್‌ರವರ ಮಾರ್ಗದರ್ಶನದಲ್ಲಿ ಸಬ್‌ಇನ್ಸ್ಪೇಕ್ಟರ್ ನೀಲರಾಜ್ ನರಲಾರ ಹಾಗೂ ಸಿಬ್ಬಂದಿಗಳು ಈ ಪ್ರಕರಣವನ್ನು ಬೇಧಿಸಿ ಕೇಸ್ ದಾಖಲಿಸಿಕೊಂಡು ತನಿಖೆ ಕಾರ್ಯ ಕೈಗೊಂಡಿದ್ದಾರೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

Ranks Institute–ಜೆಸಿಐ ಹೊಸನಗರ ಡೈಮಂಡ್‌ ಆಯೋಜನೆಯಲ್ಲಿ ‘Gen Z Connect’ ಯಶಸ್ವಿ

ರ‍್ಯಾಂಕ್ಸ್ ಇನ್ಸ್ಟಿಟ್ಯೂಟ್–ಜೆಸಿಐ ಹೊಸನಗರ ಡೈಮಂಡ್‌ ಸಹಯೋಗದಲ್ಲಿ ‘Gen Z Connect’ ತರಬೇತಿ ಯಶಸ್ವಿ Ranks Institute–JCI Hosanagara Diamond Hosts…

19 hours ago

ಬೆಳ್ಳೂರು GHPSನಲ್ಲಿ ಸ್ವಾತಂತ್ರ್ಯ ಸಂಭ್ರಮ: ಶಾಲೆಗೆ ಕೊಡುಗೆಗಳ ಮಹಾಪೂರ!

ಬೆಳ್ಳೂರು GHPSನಲ್ಲಿ ಸ್ವಾತಂತ್ರ್ಯ ಸಂಭ್ರಮ: ಶಾಲೆಗೆ ಕೊಡುಗೆಗಳ ಮಹಾಪೂರ! Satish Ripponpete donated a TV to GHPS Bellur…

22 hours ago

ಗರ್ತಿಕೆರೆಯಲ್ಲಿ ಮಾರಣಾಂತಿಕ ಹಲ್ಲೆ: ಅಟ್ಟಹಾಸ ಮೆರೆದಿದ್ದ ಆರೋಪಿಯ ಹೆಡೆಮುರಿ ಕಟ್ಟಿದ ಪೊಲೀಸರು

ಗರ್ತಿಕೆರೆಯಲ್ಲಿ ಮಾರಣಾಂತಿಕ ಹಲ್ಲೆ: ಅಟ್ಟಹಾಸ ಮೆರೆದಿದ್ದ ಆರೋಪಿಯ ಹೆಡೆಮುರಿ ಕಟ್ಟಿದ ಪೊಲೀಸರು Police arrest Raghavendra alias Apple Raghu…

23 hours ago

ಅಕ್ರಮ ಗೋ ಸಾಗಾಟ ತಡೆಯಲು ಹೋದ ಬಜರಂಗದಳ ಕಾರ್ಯಕರ್ತರ ಮೇಲೆ ಭೀಕರ ಹಲ್ಲೆ – ಬಿ ವೈ ವಿಜಯೇಂದ್ರ ಆಕ್ರೋಶ

ಅಕ್ರಮ ಗೋ ಸಾಗಾಟ ತಡೆಯಲು ಹೋದ ಬಜರಂಗದಳ ಕಾರ್ಯಕರ್ತರ ಮೇಲೆ ಭೀಕರ ಹಲ್ಲೆ - ಬಿ ವೈ ವಿಜಯೇಂದ್ರ ಆಕ್ರೋಶ…

23 hours ago

ಗರ್ತಿಕೆರೆಯಲ್ಲಿ ವ್ಯಕ್ತಿಯ ಮೇಲೆ ಕಬ್ಬಿಣದ ರಾಡ್ ನಿಂದ ಮಾರಣಾಂತಿಕ ಹಲ್ಲೆ; ತಲೆಯ ಮೇಲೆ ಕಾಲಿಟ್ಟು ಅಟ್ಟಹಾಸ ಮೆರೆದ ಭೂಫ

ಗರ್ತಿಕೆರೆಯಲ್ಲಿ ವ್ಯಕ್ತಿಯ ಮೇಲೆ ಕಬ್ಬಿಣದ ರಾಡ್ ನಿಂದ ಮಾರಣಾಂತಿಕ ಹಲ್ಲೆ; ತಲೆಯ ಮೇಲೆ ಕಾಲಿಟ್ಟು ಅಟ್ಟಹಾಸ ಮೆರೆದ ಭೂಫ A…

1 day ago

ಚುಂಚಾದ್ರಿ ಮಹಿಳಾ ಒಕ್ಕಲಿಗರ ವೇದಿಕೆಯಿಂದ ಸ್ವಾತಂತ್ರ್ಯ ದಿನಾಚರಣೆ

ಚುಂಚಾದ್ರಿ ಮಹಿಳಾ ಒಕ್ಕಲಿಗರ ವೇದಿಕೆಯಿಂದ ಸ್ವಾತಂತ್ರ್ಯ ದಿನಾಚರಣೆ Ripponpete Chunchadri Mahila Okkaligar Vedike celebrated the 80th Independence…

1 day ago