ಶಿವಮೊಗ್ಗ : ಇಂದು ಅದ್ಧೂರಿಯಾಗಿ ನಡೆದ ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿದ್ದ ವ್ಯಕ್ತಿಯೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.
ಸೊರಬ ತಾಲೂಕಿನ ಚಿಮ್ಮನೂರು ಗ್ರಾಮದ ಮಲ್ಲಿಕಾರ್ಜುನಪ್ಪ (50) ಎಂಬವರೇ ಮೃತಪಟ್ಟವರು.
ಸೊರಬದ ಕಡೆಯಿಂದ ಭಾರಿ ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಮತ್ತು ಇತರರು ಕಾರ್ಯಕ್ರಮಕ್ಕೆ ಬಂದಿದ್ದರು. ಮಲ್ಲಿಕಾರ್ಜುನ ಅವರು ಬೆಳಗ್ಗೆ ಗ್ರಾಮಸ್ಥರೊಂದಿಗೆ ಬಸ್ಸಿನಲ್ಲಿ ಬಂದಿದ್ದರು. ಕಾರ್ಯಕ್ರಮ ಮುಗಿಸಿ ವಾಪಸಾಗುವಾಗ ಸೋಗಾನೆ ಗ್ರಾಮದ ಕೆಇಬಿ ಕಚೇರಿ ಹತ್ತಿರ ಮಲ್ಲಿಕಾರ್ಜುನ ಅವರು ಅಸ್ವಸ್ಥರಾದರು.
ಬಾಯಾರಿಕೆಯಿಂದ ನೀರು ಕೇಳಿದ್ದ ಮಲ್ಲಿಕಾರ್ಜುನ ಅವರು ತಕ್ಷಣವೇ ಸಮೀಪದ ಕೋಳಿ ಫಾರಂಗೆ ಹೋಗಿ ನೀರು ಕುಡಿದಿದ್ದರು. ನೀರು ಕುಡಿದು ವಿಶ್ರಾಂತಿ ಪಡೆಯುವಾಗ ಅಲ್ಲೇ ಅಸ್ವಸ್ಥರಾಗಿ ಸಾವು ಸಂಭವಿಸಿತು.
ಗ್ರಾಮಸ್ಥರು ಕೂಡಲೇ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದರು. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಇದೀಗ ಸಾವಿಗೆ ಕಾರಣವಾದ ಅಂಶ ಯಾವುದು ಎನ್ನುವುದರ ಬಗ್ಗೆ ಮಾಹಿತಿ ದೊರೆಯಬೇಕಾಗಿದೆ.
ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ಖಂಡಿಸಿ ಶಿಕಾರಿಪುರ ಬಂದ್ , ಬಿಗಿ ಪೊಲೀಸ್ ಬಂದೋಬಸ್ತ್ , ಹೇಗಿದೆ ಪರಿಸ್ಥಿತಿ !?…
ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ: ತಿಪಟೂರಿನಲ್ಲಿ ನಾಳೆ ಅಂತ್ಯಕ್ರಿಯೆ Former Karnataka Education Minister and Tiptur…
ಸಾಗರದಲ್ಲಿ ಬೋರ್ವೆಲ್ ಕೇಬಲ್ ಕಳ್ಳತನದ ಜಾಲ ಪತ್ತೆ: ನಾಲ್ವರ ಬಂಧನ, ಓಮ್ನಿ ಕಾರು ವಶ Sagara Rural Police arrested…
ಶಿವಮೊಗ್ಗದಲ್ಲಿ ಕೌಟುಂಬಿಕ ಕಲಹದ ಬಳಿಕ ಯುವಕನ ಅನುಮಾನಾಸ್ಪದ ಸಾವು A young man identified as Abu Sufiyan Khan…
ಚೆಸ್ನಲ್ಲಿ ಮಿಂಚಿದ ತೀರ್ಥಹಳ್ಳಿಯ ಸಹೋದರಿಯರು: ರಾಜ್ಯಮಟ್ಟಕ್ಕೆ ಆಯ್ಕೆ Thirthahalli sisters Ganavi and Pavani secured first place in…
ರಿಪ್ಪನ್ ಪೇಟೆ : ಕೆಳಜಾತಿ ಮಹಿಳೆ ಅಂಗನವಾಡಿ ಸಹಾಯಕಿಯಾಗಿ ನೇಮಕ – ಮಕ್ಕಳನ್ನು ಕಳುಹಿಸಲು ಗ್ರಾಮಸ್ಥರ ಹಿಂದೇಟು ಆರೋಪ ,…