ಶಿವಮೊಗ್ಗ : ಇಂದು ಅದ್ಧೂರಿಯಾಗಿ ನಡೆದ ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿದ್ದ ವ್ಯಕ್ತಿಯೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.
ಸೊರಬ ತಾಲೂಕಿನ ಚಿಮ್ಮನೂರು ಗ್ರಾಮದ ಮಲ್ಲಿಕಾರ್ಜುನಪ್ಪ (50) ಎಂಬವರೇ ಮೃತಪಟ್ಟವರು.
ಸೊರಬದ ಕಡೆಯಿಂದ ಭಾರಿ ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಮತ್ತು ಇತರರು ಕಾರ್ಯಕ್ರಮಕ್ಕೆ ಬಂದಿದ್ದರು. ಮಲ್ಲಿಕಾರ್ಜುನ ಅವರು ಬೆಳಗ್ಗೆ ಗ್ರಾಮಸ್ಥರೊಂದಿಗೆ ಬಸ್ಸಿನಲ್ಲಿ ಬಂದಿದ್ದರು. ಕಾರ್ಯಕ್ರಮ ಮುಗಿಸಿ ವಾಪಸಾಗುವಾಗ ಸೋಗಾನೆ ಗ್ರಾಮದ ಕೆಇಬಿ ಕಚೇರಿ ಹತ್ತಿರ ಮಲ್ಲಿಕಾರ್ಜುನ ಅವರು ಅಸ್ವಸ್ಥರಾದರು.
ಬಾಯಾರಿಕೆಯಿಂದ ನೀರು ಕೇಳಿದ್ದ ಮಲ್ಲಿಕಾರ್ಜುನ ಅವರು ತಕ್ಷಣವೇ ಸಮೀಪದ ಕೋಳಿ ಫಾರಂಗೆ ಹೋಗಿ ನೀರು ಕುಡಿದಿದ್ದರು. ನೀರು ಕುಡಿದು ವಿಶ್ರಾಂತಿ ಪಡೆಯುವಾಗ ಅಲ್ಲೇ ಅಸ್ವಸ್ಥರಾಗಿ ಸಾವು ಸಂಭವಿಸಿತು.
ಗ್ರಾಮಸ್ಥರು ಕೂಡಲೇ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದರು. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಇದೀಗ ಸಾವಿಗೆ ಕಾರಣವಾದ ಅಂಶ ಯಾವುದು ಎನ್ನುವುದರ ಬಗ್ಗೆ ಮಾಹಿತಿ ದೊರೆಯಬೇಕಾಗಿದೆ.
ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ A school bus lost control…
ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ Congress leaders in Sagar have hit…
ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ Summa S.…
ರಿಪ್ಪನ್ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in…
ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…
ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…