ರಿಪ್ಪನ್ಪೇಟೆ : ಕಾರಿನಲ್ಲಿ ಬಂದು ಗೋ ಕಳ್ಳತನಕ್ಕೆ ವಿಫಲ ಯತ್ನ – ವೀಡಿಯೋ ವೈರಲ್
ರಿಪ್ಪನ್ಪೇಟೆ : ಕಾರಿನಲ್ಲಿ ಬಂದು ಬೀದಿಯ ಗೋವುಗಳ ಕಳ್ಳತನಕ್ಕೆ ವಿಫಲ ಯತ್ನ ನಡೆಸಲಾಗಿದ್ದು, ಸ್ಥಳೀಯರು ಕೂಗಿದೊಡನೆ ಖದೀಮರು ಪರಾರಿಯಾಗಿರುವ ಘಟನೆ ನಡೆದಿದೆ.
ತೀರ್ಥಹಳ್ಳಿ ರಸ್ತೆಯ ಗಾಂಧಿ ನಗರದಲ್ಲಿ ಕಾರನ್ನು ಗೋವುಗಳ ಹತ್ತಿರ ತಂದು ನಿಲ್ಲಿಸಿ ಹಿಡಿಯಲು ಪ್ರಯತ್ನಿಸಿದ್ದಾರೆ. ಆದರೆ ಗೋವುಗಳು ಕೈಗೆ ಸಿಕ್ಕಿಲ್ಲ.ಈ ಸಂಧರ್ಭದಲ್ಲಿ ಸ್ಥಳೀಯರು ಕೂಗಿದ್ದಾರೆ ನಂತರ ಎಚ್ಚೆತ್ತುಕೊಂಡ ಖದೀಮರು ಓಡಿ ಹೋಗಿದ್ದಾರೆ.
ಈ ಘಟನೆಯನ್ನು ಯಾರೋ ವೀಡಿಯೋ ಮಾಡಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಈ ಬಗ್ಗೆ ಪಟ್ಟಣದ ಹಿಂದೂಪರ ಸಂಘಟನೆಗಳು ಪೊಲೀಸ್ ಠಾಣೆಗೆ ದೂರು ನೀಡಿದ್ದು ಪೊಲೀಸರು ಘಟನೆಯ ಬಗ್ಗೆ ತನಿಖೆ ಕೈಗೊಂಡಿದ್ದಾರೆ.
ತೀರ್ಥಹಳ್ಳಿ ,ಶಿವಮೊಗ್ಗ ,ಉಡುಪಿ ಮತ್ತು ಮಂಗಳೂರು ಕಡೆಗಳಲ್ಲಿ ನಡೆಯುತಿದ್ದ ಇಂತಹ ಕಳ್ಳತನದ ಪ್ರಕರಣಗಳು ರಿಪ್ಪನ್ಪೇಟೆಯಲ್ಲಿ ನಡೆಯುತ್ತಿರುವುದು ಆತಂಕಕಾರಿಯಾದ ಘಟನೆಯಾಗಿದ್ದು ಪೊಲೀಸರು ಕಾರ್ಯಪ್ರವೃತ್ತರಾಗಿ ರಾತ್ರಿ ಸಮಯದಲ್ಲಿ ಸಂಚರಿಸುವ ಐಷಾರಾಮಿ ವಾಹನಗಳನ್ನು ತನಿಖೆ ನಡೆಸಿ ಇಂತಹ ಘಟನೆ ಮರುಕಳಿಸದಂತೆ ಎಚ್ಚರವಹಿಸಬೇಕಾಗಿದೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್