ರಿಪ್ಪನ್ಪೇಟೆ : ಇಲ್ಲಿನ ಸಮೀಪದ ಬಾಳೂರು ಗ್ರಾಮ ಪಂಚಾಯತಿ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಶಿವಮ್ಮ ಪಧ್ಮನಾಭ ರವರು ಆಯ್ಕೆಯಾಗಿದ್ದಾರೆ.
ಕಳೆದ ಡಿ.14 ರಂದು ಬಿಜೆಪಿ ಬೆಂಬಲಿತರಾಗಿದ್ದ ಬಾಳೂರು ಗ್ರಾಪಂ ಅಧ್ಯಕ್ಷೆ ಲೀಲಾವತಿ ದೊಡ್ಡಯ್ಯ ವೈಯಕ್ತಿಕ ಕಾರಣಗಳಿಂದ ರಾಜೀನಾಮೆ ನೀಡಿದ್ದರು.ಈ ಹಿನ್ನಲೆಯಲ್ಲಿ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ನಡೆದ ಆಯ್ಕೆ ಪ್ರಕ್ರಿಯೆಯ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಶಿವಮ್ಮ ಪದ್ಮನಾಭ ಜಯಭೇರಿ ಬಾರಿಸುವ ಮೂಲಕ ಬಿಜೆಪಿಗೆ ಭಾರಿ ಮುಖಭಂಗವಾಗಿದೆ.
9 ಜನ ಸದಸ್ಯರಲ್ಲಿ ಕಾಂಗ್ರೆಸ್ ಬೆಂಬಲಿತ ಶಿವಮ್ಮ ಪದ್ಮನಾಭ ರವರು 5 ಮತ ಪಡೆದರೆ ಬಿಜೆಪಿ ಬೆಂಬಲಿತ ಅಭ್ಯರ್ಥಿ 4 ಮತ ಪಡೆದಿದ್ದಾರೆ.
ಚುನಾವಣಾಧಿಕಾರಿಯಾಗಿ ಹೊಸನಗರ ತಾಲೂಕ್ ಕರ್ನಾಟಕ ಲೋಕೋಪಯೋಗಿ ಇಲಾಖೆಯ ಅಧಿಕಾರಿ ರಾಮಚಂದ್ರಪ್ಪ ಪಾಲ್ಗೊಂಡಿದ್ದರು.
ಬಾಳೂರು ಗ್ರಾಪಂ ಅಧ್ಯಕ್ಷರಾಗಿ ಆಯ್ಕೆಯಾದ ಶಿವಮ್ಮ ಪದ್ಮನಾಭ ರವರನ್ನು ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ ಅಭಿನಂದಿಸಿದರು.
ನಂತರ ಮಾತನಾಡಿದ ಬೇಳೂರು ಶಾಸಕ ಹರತಾಳು ಹಾಲಪ್ಪ ರವರ ದುರಾಡಳಿತದಿಂದ ಬೇಸತ್ತು ಜನಪ್ರತಿನಿಧಿಗಳು ಹಾಗೂ ಜನಸಾಮಾನ್ಯರು ಬಿಜೆಪಿ ಪಕ್ಷವನ್ನು ತಿರಸ್ಕರಿಸುತಿದ್ದಾರೆ. ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕರು ಗಣಪತಿ ಕೆರೆ ಬಿಟ್ಟರೆ ಬೇರೆ ಏನನ್ನೂ ಅಭಿವೃದ್ಧಿ ಮಾಡಿಲ್ಲ ಎಂದರು.
ಬಡವರಿಗೆ ನೀಡುವ ಮನೆಗಳಲ್ಲು ರಾಜಕೀಯ ನಡೆಸಿ ಕೇವಲ ಅವರ ಬೆಂಬಲಿಗರಿಗೆ ಮಾತ್ರ ಪ್ರಾತಿನಿಧ್ಯ ನೀಡುವ ಮೂಲಕ ಅಧಿಕಾರ ದುರುಪಯೋಗ ಮಾಡಿಕೊಂಡಿದ್ದು ಮುಂದಿನ ದಿನಗಳಲ್ಲಿ ಜನ ಅವರಿಗೆ ತಕ್ಕ ಉತ್ತರ ನೀಡಲಿದ್ದಾರೆ ಎಂದರು.
ಈ ಸಂಧರ್ಭದಲ್ಲಿ ಕೆಂಚನಾಲ ಗ್ರಾಪಂ ಅಧ್ಯಕ್ಷ ಉಬೇದುಲ್ಲಾ ಷರೀಫ್, ಅರಸಾಳು ಗ್ರಾಪಂ ಮಾಜಿ ಅಧ್ಯಕ್ಷ ಉಮಾಕರ್ , ಮುಖಂಡರಾದ ಎಂ ಎಂ ಪರಮೇಶ್ ,ಹಾಲುಗುಡ್ಡೆ ದೇವರಾಜ್ ಗೌಡ ,ಸಂತೋಷ್ ಸಿ ವೈ ,ರಾಜು ಗೌಡ,ಷಣ್ಮುಖ ಕೆ ಹೆಚ್,ಗಣಪತಿ ,ಫ್ಯಾನ್ಸಿ ರಮೇಶ್ ,ಶಿವು ವಡಾಹೊಸಳ್ಳಿ ,ಉಲ್ಲಾಸ್ ,ಚಂದ್ರು ಮಳವಳ್ಳಿ,ಶ್ರೀಧರ್ ,ವಿಜಯ್ ಹಾಗೂ ಇನ್ನಿತರರಿದ್ದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್