ಭದ್ರಾವತಿಯ ವಿಶ್ವೇಶ್ವರಯ್ಯ ಉಕ್ಕು ಮತ್ತು ಕಬ್ಬಿಣ ಕಾರ್ಖಾನೆ ಮುಚ್ಚುವ ನಿರ್ಧಾರದ ಬೆನ್ನಲ್ಲೇ ಗುತ್ತಿಗೆ ಕಾರ್ಮಿಕರು ಆರಂಭಿಸಿದ ಪ್ರತಿಭಟನೆ ಗುರುವಾರಕ್ಕೆ (ಫೆ.24) 37ನೇ ದಿನಕ್ಕೆ ಕಾಲಿಟ್ಟಿದೆ.
ವಿಐಎಸ್ಎಲ್ ಮುಚ್ಚುವ ಕೇಂದ್ರ ಸರ್ಕಾರದ ನಿರ್ಧಾರದಿಂದ ಆಕ್ರೋಶ ಗೊಂಡಿರುವ ಗುತ್ತಿಗೆ ಕಾರ್ಮಿಕರು ಗುರುವಾರ ಕರೆ ನೀಡಿರುವ ಭದ್ರಾವತಿ ಬಂದ್ಗೆ ಉತ್ತಮ ಬೆಂಬಲ ವ್ಯಕ್ತವಾಗಿದೆ.
ಕಾರ್ಖಾನೆ ಜತೆಗೆ ತಮ್ಮನ್ನು ಉಳಿಸಿ ಎಂದು ಆಗ್ರಹಿಸಿ ವಿಐಎಸ್ಎಲ್ ಕಾರ್ಮಿಕರು ಕಳೆದ 37 ದಿನಗಳಿಂದ ಪ್ರತಿಭಟನೆ ಮಾಡುತ್ತಿದ್ದಾರೆ. ಇತ್ತೀಚೆಗಷ್ಟೇ ಶಿವಮೊಗ್ಗ ಚಲೋ ನಡೆಸಿದ್ದ ಗುತ್ತಿಗೆ ಕಾರ್ಮಿಕರು, ಶಿವಮೊಗ್ಗ ನಗರದಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನಾ ಸಭೆ ನಡೆಸಿದ್ದರು. ಕಾರ್ಖಾನೆ ಅಪ್ಪಿಕೋ ಚಳವಳಿ, ಪಂಜಿನ ಮೆರವಣಿಗೆ ನಡೆಸಿದ್ದ ಕಾರ್ಮಿಕರು, ವಿಐಎಸ್ಎಲ್ ಕಾರ್ಖಾನೆ ಎದುರು ನಿರಂತರ ಪ್ರತಿಭಟನಾ ಧರಣಿ ನಡೆಸುತ್ತಿದ್ದಾರೆ.
ಬೈಕ್ ಮೂಲಕ ರ್ಯಾಲಿ
ಗುರುವಾರ ಭದ್ರಾವತಿ ಪಟ್ಟಣ ಬಂದ್ ಕರೆಗೆ ಸಾರ್ವಜನಿಕರಿಂದಲೂ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಮುಂಜಾನೆಯಿಂದಲೇ ವ್ಯಾಪಾರಿಗಳು ತಮ್ಮ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಬಂದ್ಗೆ ಬೆಂಬಲ ವ್ಯಕ್ತಪಡಿಸಿದರು. ಗುತ್ತಿಗೆ ಕಾರ್ಮಿಕ ಸಂಘ ಕರೆ ನೀಡಿದ ಈ ಬಂದ್ಗೆ ಸಿಐಟಿಯು ಸೇರಿದಂತೆ ವಿವಿಧ ಸಂಘಟನೆಗಳು ಬೆಂಬಲ ನೀಡಿವೆ. ವಕೀಲರ ಸಂಘದ ಸದಸ್ಯರು ರಂಗಪ್ಪ ಸರ್ಕಲ್ನಲ್ಲಿ ಮಾನವ ಸರಪಳಿ ನಿರ್ಮಿಸಿ ಬೆಂಬಲ ವ್ಯಕ್ತಪಡಿಸಿದ್ದರೆ, ಹಲವು ಸಂಘಟನೆಗಳ ಸದಸ್ಯರು ಬೆಳಗ್ಗೆಯಿಂದಲೇ ರಸ್ತೆಗಿಳಿದು ಪ್ರತಿಭಟನೆ ನಡೆಸಿದರು. ಪ್ರಮುಖ ವೃತ್ತಗಳಿಗೆ ತೆರಳಿ ಕಾರ್ಮಿಕ ಸಂಘಟನೆಗಳು ಟೈರ್ಗೆ ಬೆಂಕಿ ಹಚ್ಚಿ ತಮ್ಮ ಆಕ್ರೋಶ ಹೊರ ಹಾಕಿದರು.
ಪ್ರಧಾನಿಗೆ ಕಪ್ಪು ಬಾವುಟ ಪ್ರದರ್ಶನ
ಈ ಸಂದರ್ಭದಲ್ಲಿ ಮಾತನಾಡಿದ ಕಾರ್ಮಿಕ ಮುಖಂಡರು, ನಮಗೆ ನ್ಯಾಯ ದೊರಕದೇ ಇದ್ದಲ್ಲಿ ಫೆ. 27ರಂದು ಶಿವಮೊಗ್ಗಕ್ಕೆ ಬರುವ ಪ್ರಧಾನಿ ಅವರನ್ನು ಕುಟುಂಬ ಸದಸ್ಯರ ಜತೆ ಕಪ್ಪುಬಾವುಟ ಪ್ರದರ್ಶಿಸಿ ಪ್ರತಿಭಟಿಸುವುದಾಗಿ ಎಚ್ಚರಿಸಿದ್ದಾರೆ. ಚುನಾವಣೆಯ ಹೊಸ್ತಿಲಲ್ಲಿ ವಿಐಎಸ್ಎಲ್ ಕಾರ್ಖಾನೆ ಮುಚ್ಚುವ ನಿರ್ಧಾರ ಕೇಂದ್ರ ಸರ್ಕಾರ ಕೈಗೊಂಡಿರುವುದು ರಾಜ್ಯ ಬಿಜೆಪಿಗೆ ನುಂಗಲಾರದ ತುತ್ತಾಗಿದೆ. ಕಾಂಗ್ರೆಸ್, ಜೆಡಿಎಸ್ ಕೂಡ ಹೋರಾಟಕ್ಕೆ ಬೆಂಬಲ ಸೂಚಿಸಿದ್ದು, ಪ್ರತಿಭಟನೆಯ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.
ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ A school bus lost control…
ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ Congress leaders in Sagar have hit…
ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ Summa S.…
ರಿಪ್ಪನ್ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in…
ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…
ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…