ವಿಮಾನ ನಿಲ್ದಾಣಕ್ಕೆ ಕುವೆಂಪು ಹೆಸರನ್ನು ಕೇಂದ್ರ ಪ್ರಕಟಿಸಲಿ
ರಿಪ್ಪನ್ ಪೇಟೆ :ಶಿವಮೊಗ್ಗದ ಸೋಗಾನೆಯಲ್ಲಿ ಆರಂಭವಾಗಲಿರುವ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪುರವರ ಹೆಸರನ್ನು ಕೇಂದ್ರ ಸರ್ಕಾರ ಉದ್ಘಾಟನೆಯ ದಿನದಂದು ಘೋಷಣೆ ಮಾಡಬೇಕೆಂದು ಹೊಸನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ತ.ಮ. ನರಸಿಂಹ ಆಗ್ರಹಿಸಿದರು.
ಶನಿವಾರ ರಿಪ್ಪನ್ ಪೇಟೆ ಗ್ರಾಮ ಪಂಚಾಯಿತಿಯ ಕುವೆಂಪು ಸಭಾ ಭವನದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು ವಿಮಾನ ನಿಲ್ದಾಣದ ನಾಮ ಫಲಕಗಳಲ್ಲಿ ಕನ್ನಡ ಭಾಷೆಯನ್ನು ನಮೂದಿಸಬೇಕು . ಕನ್ನಡ ನಾಮಫಲಕವನ್ನು ಮಧ್ಯಂತರದಲ್ಲಿ ತೆರವುಗೊಳಿಸುವ ಕಾರ್ಯ ಮಾಡಬಾರದೆಂದು ಹೊಸನಗರ ಕನ್ನಡ ಸಾಹಿತ್ಯ ಪರಿಷತ್ತು ಒತ್ತಾಯಿಸುತ್ತಿದೆ ಎಂದರು.
ಕನ್ನಡ ನಾಡಿನಲ್ಲಿ ಕನ್ನಡದ ನಾಡು ನುಡಿಗೆ ಸಾಧನೆಗೈದ ಅನೇಕ ಶಿವಶರಣೆಯರು ಹಾಗೂ ಹೆಸರಾಂತ ಖ್ಯಾತ ಕವಿಗಳು ,ಸಾಹಿತಿಗಳು ಈ ಕನ್ನಡ ನಾಡಿಗೆ ವಿಶಿಷ್ಟ ಕೊಡುಗೆಗಳನ್ನು ನೀಡಿದ್ದಾರೆ ಇಂತಹ ದಾರ್ಶನಿಕರ ಹೆಸರನ್ನು ವಿವಿಧ ಪ್ರಾಧಿಕಾರಗಳಿಗೆ ಇಡಬೇಕು ಎಂದು ಒತ್ತಾಯಿಸಿದರು. ಸೋಗಾನೆ ವಿಮಾನ ನಿಲ್ದಾಣ ಯಡಿಯೂರಪ್ಪನವರ ಕನಸಿನ ಕೂಸು. ಯಡಿಯೂರಪ್ಪ ರವರ ಹೆಸರನ್ನೇ ವಿಮಾನ ನಿಲ್ದಾಣಕ್ಕೆ ಹೆಸರಿಡಲು ಸರ್ಕಾರದ ತೀರ್ಮಾನವಾದರೂ ಸಹ ತಮ್ಮಹೆಸರ ಬದಲಿಗೆ ಕುವೆಂಪು ಹೆಸರು ಸೂಚಿಸಿದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರವರನ್ನು ಇದೇ ಸಂದರ್ಭದಲ್ಲಿ ಅಭಿನಂದಿಸಿದರು.
ಈಗಾಗಲೇ ಯಡಿಯೂರಪ್ಪನವರ ಸೂಚನೆಯಂತೆ ಸರ್ಕಾರ ರಾಷ್ಟ್ರಕವಿ ಕುವೆಂಪು ಅವರ ಹೆಸರಿಡಲು ತೀರ್ಮಾನ ಮಾಡಿದೆ. ಅದರಂತೆ ಉದ್ಘಾಟನೆ ದಿನ ಘೋಷಣೆಯಾಗಬೇಕೆಂದು ವಿನಂತಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮಂಜುನಾಥ್ ಕಾಮತ್, ಕ ಸಾ ಪ ಹೋಬಳಿ ಘಟಕದ ಕಾರ್ಯದರ್ಶಿ ಪಿಯುಸ್ ರೋಡ್ರಿಗಸ್, ತಾಲೂಕು ಕ ಸಾ ಪ ಸಂಘಟನಾ ಕಾರ್ಯದರ್ಶಿ ಈಶ್ವರಪ್ಪ ಕುಕ್ಕಳಲೆ ಇದ್ದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್