ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಎಸ್ ಬಂಗಾರಪ್ಪ ಹೆಸರು ಪರಿಗಣಿಸದೇ ಇರುವುದು ಬೇಸರದ ಸಂಗತಿ – ಜಿಲ್ಲಾ ಎಸ್ ಬಂಗಾರಪ್ಪ ಅಭಿಮಾನಿಗಳ ಸಂಘ
ಶಿವಮೊಗ್ಗ : ಈ ನಾಡು ಕಂಡ ಧೀಮಂತ ನಾಯಕ ಎಸ್ ಬಂಗಾರಪ್ಪ. ರಾಜ್ಯದ ಹಿಂದುಳಿದ ವರ್ಗಗಳ ಹಿತಾಸಕ್ತಿ ಕಾಯುವಲ್ಲಿ ಅವರ ಪಾತ್ರ ಮಹತ್ವದ್ದಾಗಿದೆ. ಅವರಿಗೆ ಸೂಕ್ತ ಗೌರವ ನೀಡಲು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸರ್ಕಾರ ಅವರ ಹೆಸರಿಡಬೇಕು ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ಎಸ್ ಬಂಗಾರಪ್ಪ ಅಭಿಮಾನಿ ಸಂಘದ ಜಿಲ್ಲಾಧ್ಯಕ್ಷ ಅಮೀರ್ ಹಂಜಾ ಪತ್ರೀಕಾ ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.
ಬಂಗಾರಪ್ಪ ಶಿವಮೊಗ್ಗ ಜಿಲ್ಲೆಯ ಸಂಪೂರ್ಣ ಅಭಿವೃದ್ಧಿಗೆ ನಾಂದಿ ಹಾಡಿದವರು.ಮೆಗ್ಗಾನ್ ಆಸ್ಪತ್ರೆ ತಂದ ಕೀರ್ತಿ ಅವರದ್ದು,ಶಾಶ್ವತ ಕುಡಿಯುವ ನೀರು ಯೋಜನೆ ಜಾರಿಗೆ ತಂದಿದ್ದರು. ಶಿವಮೊಗ್ಗ ಸ್ಮಾರ್ಟ್ ಸಿಟಿ ಬಗ್ಗೆ ಕನಸು ಕಂಡವರು ಎಂದರೆ ಅದು ಬಂಗಾರಪ್ಪನವರು.
ತುಂಗಾ ಏತಾ ನೀರಾವರಿ ಹಾಗೂ ತುಂಗಾ ಮೇಲ್ದಂಡೆ ಯೋಜನೆ ಜಾರಿಗೆ ತಂದವರು.ಬರಗಾಲದ ಸಂಧರ್ಭದಲ್ಲಿ ಇಡೀ ಜಿಲ್ಲೆಗೆ ಸಿರಿಧಾನ್ಯಗಳನ್ನು ಹಂಚಿದವರು ಅಂತವರ ಹೆಸರನ್ನ ವಿಮಾನ ನಿಲ್ದಾಣಕ್ಕೆ ಹೆಸರಿಡಬೇಕಿತ್ತು ಎಂದು ಹೇಳಿದರು.
ಬಂಗಾರಪ್ಪ ಯಾವುದೇ ಪಕ್ಷ, ಜಾತಿ ನೋಡಿರದ ವ್ಯಕ್ತಿ. ಕಾವೇರಿ ನೀರು ವಿಚಾರ ಬಂದಾಗ ಸುಗ್ರೀವಾಜ್ಞೆ ಹೊರಡಿಸಿದವರು. ರೈತರಿಗೆ ಉಚಿತವಾಗಿ ವಿದ್ಯುತ್ ನೀಡಿದವರು. ಆಶ್ರಯ ಯೋಜನೆ, ಆರಾಧನಾ ಯೋಜನೆ ತಂದರು. 15% ಗ್ರಾಮೀಣ ಕೃಪಾಂಕವನ್ನು ತಂದಿದ್ದಾರೆ. ನೂರಾರು ಯೋಜನೆ ತಂದು ಧೀಮಂತ ನಾಯಕ ಎನಿಸಿಕೊಂಡಿದ್ದ ಬಂಗಾರಪ್ಪನವರ ಹೆಸರನ್ನು ಸೋಗಾನೆಯ ವಿಮಾನ ನಿಲ್ದಾಣಕ್ಕೆ ಇಡಬೇಕು ಎಂದು ಮನವಿ ಮಾಡಲಾಗಿತ್ತು.ಆದರೆ ಅವರ ಹೆಸರನ್ನು ಸರ್ಕಾರ ಪರಿಗಣಿಸದೇ ಇರುವುದು ಬೇಸರದ ಸಂಗತಿಯಾಗಿದೆ ಎಂದು ಹೇಳಿದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್