ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ತಮ್ಮ ಹೆಸರು ಇಡುವುದು ಬೇಡ ಎಂದು ಮತ್ತೊಮ್ಮೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ನಿರಾಕರಿಸಿದ್ದಾರೆ. ಈ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ ಶಿವಮೊಗ್ಗಕ್ಕೆ ಬಂದಾಗ, ವಿಮಾನ ನಿಲ್ಧಾಣಕ್ಕೆ ಬಿಎಸ್ವೈ ಹೆಸರನ್ನು ಇಟ್ಟು ದೆಹಲಿಗೆ ಪ್ರಸ್ತಾವನೆ ಕಳಿಸಲಾಗುವುದು ಎಂದು ತಿಳಿಸಿದ್ದರು.
ಇದರ ಬೆನ್ನಲ್ಲೆ ಇದೀಗ ಶಿವಮೊಗ್ಗ ಏರ್ಪೋರ್ಟ್ಗೆ ತಮ್ಮ ಹೆಸರಿಡದಂತೆ ಬಿ.ಎಸ್.ಯಡಿಯೂರಪ್ಪ ಅವರು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ. ವಿಮಾನ ನಿಲ್ದಾಣಕ್ಕೆ ತಮ್ಮ ಹೆಸರು ಇಡಲು ಮಾಡಿದ ನಿರ್ಧಾರವನ್ನು ಪುನರ್ ಪರಿಶೀಲಿಸುವಂತೆ ಹಾಗೂ ನಾಡಿನ ಅಭಿವೃದ್ಧಿಗೆ ಶ್ರಮಿಸಿದ ಮಹನೀಯರ ಹೆಸರಿಡುವಂತೆ ಮನವಿ ಮಾಡಿದ್ದಾರೆ.
ಪತ್ರದ ಸಾರಾಂಶ:
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನನ್ನ ಹೆಸರಿಡುವುದಾಗಿ ನೀವು ಘೋಷಣೆ ಮಾಡಿರುತ್ತೀರಿ. ನೀವು ನನ್ನ ಮೇಲಿಟ್ಟಿರುವ ಈ ವಿಶೇಷ ಪ್ರೀತಿ, ಅಭಿಮಾನಕ್ಕೆ ಧನ್ಯವಾದ. ಇದಕ್ಕಾಗಿ ಜಿಲ್ಲೆಯ ಎಲ್ಲ ಶಾಸಕರು, ವಿಧಾನಪ ರಿಷತ್ ಸದಸ್ಯರು, ಸಂಘ-ಸಂಸ್ಥೆಗಳಿಗೂ ನಾನು ಈ ಸಂದರ್ಭದಲ್ಲಿ ಧನ್ಯವಾದ ಸಲ್ಲಿಸುತ್ತೇನೆ.
ಈ ರಾಷ್ಟ್ರ ಈ ಹಾಗೂ ರಾಜ್ಯದ ಅಭಿವೃದ್ಧಿಗೆ ಅನೇಕ ಮಹನೀಯರು ಹಾಗೂ ದೇಶಭಕ್ತರು ಕೊಡುಗೆ ನೀಡಿದ್ದಾರೆ. ಅವರಿಗೆ ಹೋಲಿಸಿದರೆ ನ್ನದು ಅಳಿಲು ಸೇವೆ. ಜನರು ಕೊಟ್ಟ ಅವಕಾಶವನ್ನು ಬಳಸಿಕೊಂಡು ಜಿಲ್ಲೆಯ ಜನರ ಸೇವೆ ಮಾಡಿದ್ದೇನೆ ಎಂಬ ಧನ್ಯತಾ ಭಾವ ಮಾತ್ರ ನನ್ನದು. ಈ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣಕ್ಕೆ ಗಣ್ಯರ ಹೆಸರನ್ನು ಇಡಬೇಕು. ನನ್ನ ಹೆಸರನ್ನು ಇಡುವುದು ಸೂಕ್ತವಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.
ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು ರಿಪ್ಪನ್ ಪೇಟೆ : ಬಾಳಿನ…
ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ BJP leaders in Sagar have…
ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…
ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…
ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…
ರಿಪ್ಪನ್ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…