ನಾನು ಸಕ್ರೀಯ ರಾಜಕಾರಣದಿಂದ ನಿವೃತ್ತಿಯಾಗಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ.
ಶಿವಮೊಗ್ಗದ ಫ್ರೀಡಂ ಪಾರ್ಕ್ ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ ನಾನು ಅಧಿವೇಶನದಲ್ಲಿ ಚುನಾವಣೆಗೆ ನಿಲ್ಲುವುದಿಲ್ಲವೆಂದು ಹೇಳಿದ್ದೆ. ಹಾಗೆಂದರೆ ರಾಜಕಾರಣದಿಂದ ದೂರ ಉಳಿಯುವುದಲ್ಲ. ರಾಜಕಾರಣದಲ್ಲಿ ಇದ್ದುಕೊಂಡೇ ಪಕ್ಷ ಅಧಿಕಾರಕ್ಕೆ ತರಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು.
ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರುತ್ತದೆ. ಇದರ ಬಗ್ಗೆ ಯಾವುದೇ ಸಂಶಯವಿಲ್ಲ. ರಾಜ್ಯಾದ್ಯಂತ ಪ್ರವಾಸ ಮಾಡುತ್ತೇನೆ.ವಿದಾಯದ ಬಳಿಕ ಕೆಲವರು ನಾನು ಚುನಾವಣೆಗೆ ನಿಲ್ಲಬೇಕು ಎಂದು ಹೇಳಿರುವ ವಿಚಾರದ ಬಗ್ಗೆ ಮಾತನಾಡಿದ ಬಿಎಸ್ ವೈ ನನಗೆ 70 ವರ್ಷ ದಾಟಿರುವ ಹಿನ್ನೆಲೆಯಲ್ಲಿ ಈ ತೀರ್ಮಾನ ನಾನು ಮಾಡಿದ್ದೇನೆ ಎಂದರು.
ಮತ್ತೊಬ್ಬರಿಗೆ ಅವಕಾಶ ಸಿಗಬೇಕೆಂಬ ನಿಟ್ಟಿನಲ್ಲಿ ಈ ತೀರ್ಮಾನ ಮಾಡಿದ್ದೇನೆ. ಇದು ಹೊರತುಪಡಿಸಿದರೆ, ಬೇರೆನೂ ಕಾರಣವಿಲ್ಲ. ನಾನು ಚುನಾವಣೆ ನಿಲ್ಲದೇ ಇರಬಹುದು.ಆದರೆ, ನಾನು ಸಕ್ರೀಯ ರಾಜಕಾರಣದಲ್ಲಿದ್ದು, ಪಕ್ಷವನ್ನು ಅಧಿಕಾರದಲ್ಲಿ ತರುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಚುನಾವಣೆಗೆ ನಿಲ್ಲಬೇಕೆಂದು ಬಿಜೆಪಿಯವರು ಮಠಾಧೀಶರನ್ನು ಭೇಟಿಯಾಗಿದ್ದಾರೆಂಬ ವಿಚಾರದ ಬಗ್ಗೆಯೂ ಉತ್ತರಿಸಿದ ಬಿಎಸ್ ವೈ ನಾನು ಯಾವ ಮಠಾಧೀಶರನ್ನು ಈ ಹಿನ್ನೆಲೆಯಲ್ಲಿ ಭೇಟಿಯಾಗಿಲ್ಲ. ಮಠಾಧೀಶರನ್ನು ಚುನಾವಣೆಗೆ ನಿಲ್ಲಲು ನಾನು ಯಾರ ಬಳಿಯೂ ಪ್ರಸ್ತಾಪ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.
ನಾಡಿದ್ದು ಸೋಮವಾರ ಉದ್ಘಾಟನೆಗೊಳ್ಳುತ್ತಿರುವ ಶಿವಮೊಗ್ಗ ಏರ್ ಪೋರ್ಟ್ ಗೆ ಪ್ರಧಾನಿ ಮೋದಿಯವರು ಲೋಕಾರ್ಪಣೆ ಮಾಡುತ್ತಿರುವುದು ಖುಷಿ ತಂದಿದೆ. 449 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿದೆ. ಎಲ್ಲರೂ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಾಂತಿ ರೀತಿಯಲ್ಲಿ ಭಾಗಿಯಾಗಿ ಎಂದು ಜನತೆಯಲ್ಲಿ ಮವಿ ಮಾಡಿದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್