ಸೌಮ್ಯ ಪೆರ್ನಾಜೆಗೆ ಗಡಿನಾಡ ದ್ವನಿ ” ಮಧು ಭೂಷಣ” ರಾಜ್ಯ ಪ್ರಶಸ್ತಿ ಪ್ರಧಾನ
ಗಡಿನಾಡ ಧ್ವನಿ ಗಡಿನಾಡ ಶ್ರೇಯೋಭಿವೃದ್ಧಿ ಟ್ರಸ್ಟ್ (ರಿ) ಇದರ ಆರನೇ ಕರ್ನಾಟಕ ಗಡಿನಾಡ ಸಮ್ಮೇಳನದಲ್ಲಿ ಸೌಮ್ಯ ಪೆರ್ನಾಜೆ ರವರಿಗೆ ಮಧುಭೂಷಣ ರಾಜ್ಯ ಪ್ರಶಸ್ತಿ ಪ್ರಧಾನ ಮಾಡಿರುತ್ತಾರೆ.
ಪ್ರಶಸ್ತಿ ಪ್ರಧಾನ ಮಹಾ ಸಮ್ಮೇಳನವು ಗಡಿನಾಡ ಪ್ರದೇಶವಾದ ಒಡ್ಯ ಸಹಕಾರಿ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ 2023 (25) ಫೆಬ್ರವರಿ ರಂದು ನಡೆಯಿತು. ಮಿತ್ರಂಪಾಡಿ ಜಯರಾಮ್ ರೈ ಅಬುದಾಬಿ ಅವರು ಪ್ರಶಸ್ತಿ ಪ್ರಧಾನ ಮಾಡಿದರು. ಮಲಾರ್ ಜಯರಾಮ್ ರೈ ಸಮ್ಮೇಳನಾಧ್ಯಕ್ಷರು ದ.ಕ.ಜಿ ಸಾಹಿತ್ಯ ಪರಿಷತ್ ಪುತ್ತೂರು ಅಧ್ಯಕ್ಷರು ಉಮೇಶ್ ನಾಯಕ್ , ಗಡಿನಾಡ ದ್ವನಿ ಅಧ್ಯಕ್ಷರು ಡಾ. ಹಾಜಿಎಸ್ ಅಬ್ಬುಬಕರ್ ಅರ್ಲಪದವು, ಪ್ರ.ಕಾರ್ಯದರ್ಶಿ ಈಶ್ವರ ಭಟ್ ಕಡಂದೇಲು , ಪ್ರಶಸ್ತಿ ವಿಜೇತ ಜೇನುತಜ್ಞ ಕುಮಾರ್ ಪೆರ್ನಾಜೆ , ಪಿ.ಜಿ ಶಂಕರ್ ನಾರಾಯಣ ಭಟ್ ದೈತೋಟ ,ಮಹಾಬಲೇಶ್ವರ ಗಿಳಿಯಾಲು,ಮುಂತಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವಿವಿಧ ಕ್ಷೇತ್ರಗಳಲ್ಲಿ ನಾಡಿಗೆ ಸಲ್ಲಿಸಿರುವ ಸೇವೆಯನ್ನು ಗುರುತಿಸಿ ನೀಡಲ್ಪಡುವ ರಾಜ್ಯ ಪ್ರಶಸ್ತಿಗೆ ವಿಶ್ವದಲ್ಲಿ ಪ್ರಪ್ರಥಮವಾಗಿ ಜೇನು ಗಡ್ಡ ತೋರಿಸಿಕೊಟ್ಟ ಸಾಧಕಿ ಮಹಿಳೆ ಜೇನು ಕೃಷಿ ವಿಶಿಷ್ಟ ಬರಹಗಳು ಕಲಾಪ್ರಿಯರು ಕಲಾ ಪೋಷಕರಾಗಿ ಗುರುತಿಸಿಕೊಂಡಿರುವ ಸೌಮ್ಯ ಪೆರ್ನಾಜೆ ಇವರನ್ನು ಈಗಾಗಲೇ ಈಶ್ವರಮಂಗಳದಲ್ಲಿ ಗ್ರಾಮದ ಸಾಹಿತ್ಯ ಸಂಭ್ರಮ ಮೂರನೇ ಸರಣಿ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.
ಇವರು ಹವ್ಯಕ ರತ್ನ ರಾಷ್ಟ್ರೀಯ ಪುರಸ್ಕೃತ ಕುಮಾರ್ ಪೆರ್ನಾಜೆ ಅವರ ಪತ್ನಿಯಾಗಿದ್ದು ಇಬ್ಬರು ಮಕ್ಕಳಾದ ನಂದನ್ ಕುಮಾರ್ , ಚಂದನ್ ಕುಮಾರ್ ಇದ್ದಾರೆ. ರಾಮಚಂದ್ರ ಭಟ್, ದೇವಕಿ ದಂಪತಿಗಳ ಸುಪುತ್ರಿಯಾದ ಇವರು ಇನ್ನಷ್ಟು ಹೆಚ್ಚಿನ ಸಾಧನೆಗೈಯಲಿ ಎಂದು ಪೋಸ್ಟ್ ಮ್ಯಾನ್ ಸುದ್ದಿಸಂಸ್ಥೆ ಆಶಿಸುತ್ತದೆ.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್