ಶಿವಮೊಗ್ಗ : ಸ್ನೇಹಿತರೊಂದಿಗೆ ನದಿಗೆ ಈಜಲು ತೆರಳಿದ್ದ ಬಾಲಕ ತುಂಗಾ ನದಿಯ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಯೂಸಫ್ (14) ಮೃತಪಟ್ಟಿರುವ ಯುವಕನಾಗಿದ್ದಾನೆ.
ಯೂಸುಫ್ ಇಂದು ಮೂವರು ಸ್ನೇಹಿತರೊಂದಿಗೆ ನದಿಗೆ ಈಜಲು ಹೋಗಿ ನೀರು ಪಾಲಾಗಿದ್ದನು,ಆತನ ಸ್ನೇಹಿತರು ಸ್ಥಳೀಯರಿಗೆ ಮಾಹಿತಿ ಮುಟ್ಟಿಸಿದ್ದಾರೆ.
ನಂತರ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳೀಯರ ಸಹಕಾರದಿಂದ ಹುಡುಕಾಟ ಆರಂಭಿಸಿದ್ದರು ಸುಮಾರು ಒಂದುವರೆ ಗಂಟೆ ಹುಡುಕಾಟ ನಡೆಸಿದ ನಂತರ ಮೃತದೇಹ ದೊರಕಿದೆ.ತಕ್ಷಣವೇ ಮೆಗ್ಗಾನ್ ಗೆ ಕರೆದೊಯ್ಯಲಾಗಿದೆ. ವೈದ್ಯರು ಆತನ ಸಾವನ್ನ ದೃಢಪಡಿಸಿದ್ದಾರೆ.
ಯುವಕನ ಮೃತದೇಹವನ್ನ ಮೆಗ್ಗಾನ್ ಮರಣೋತ್ತರ ಪರೀಕ್ಷಾ ಕೊಠಡಿಯಲ್ಲಿರಿಸಲಾಗಿದೆ.
ನಗರದ ಟಿಪ್ಪು ನಗರ 5ನೇ ಕ್ರಾಸ್ ಕೆಕೆ ಶೆಡ್ ಹತ್ತಿರ ವಾಸವಾಗಿರುವ ಯೂಸುಫ್ (14) 9ನೇ ತರಗತಿಯ ವಿದ್ಯಾರ್ಥಿಯಾಗಿದ್ದನು.
ತುಂಗ ನಗರ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಸಾವು ಎಂದು ದೂರು ದಾಖಲಿಸಲಾಗಿದೆ.
ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು ರಿಪ್ಪನ್ ಪೇಟೆ : ಬಾಳಿನ…
ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ BJP leaders in Sagar have…
ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…
ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…
ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…
ರಿಪ್ಪನ್ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…