ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ‌ ನರೇಂದ್ರ ಮೋದಿ – ಬಿಎಸ್ ವೈ ಗೆ ಹಸಿರು ಶಾಲು ಹೊದಿಸಿ ವಿಶೇಷ ಸನ್ಮಾನ ಮಾಡಿದ ಮೋದಿ|modi

ಶಿವಮೊಗ್ಗ : ಪ್ರಧಾನಿ ನರೇಂದ್ರ ಮೋದಿ ರವರು ಸೋಗಾನೆಯ ನೂತನ ವಿಮಾನ ನಿಲ್ದಾಣದೊಂದಿಗೆ​ ವಿವಿಧ ಅಭಿವೃದ್ಧಿ ಕಾರ್ಯಗಳಿಗೂ ಚಾಲನೆ ನೀಡಿದ್ದಾರೆ. 7,165 ಕೋಟಿ ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದರು. 995 ಕೋಟಿ ವೆಚ್ಚದ 96 ಕಿ.ಮೀ. ಉದ್ದದ ರೈಲು ಮಾರ್ಗಕ್ಕೆ ಅಡಿಗಲ್ಲು ಹಾಗೂ ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ರೈಲು ಮಾರ್ಗಕ್ಕೆ ಶಂಕುಸ್ಥಾಪನೆ , 105 ಕೋಟಿ ವೆಚ್ಚದಲ್ಲಿ ಕೋಟೆಗಂಗೂರಿನಲ್ಲಿ ರೈಲ್ವೇ ಕೋಚಿಂಗ್ ಡಿಪೋ, 953 ಕೋಟಿ ಮೊತ್ತದ ಬಹುಗ್ರಾಮ ಕುಡಿಯುವ ನೀರು ಯೋಜನೆಗೆ ಶಂಕುಸ್ಥಾಪನೆ ಮಾಡಿದ್ದಾರೆ. 66.44 ಕೋಟಿ ವೆಚ್ಚದ ಬೈಂದೂರು-ರಾಣೆಬೆನ್ನೂರು…

Read More

ಪ್ರಧಾನಿ ಮೋದಿಗೆ ಮನವಿ ನೀಡಲು ಬ್ಯಾರಿಕೇಡ್ ತಳ್ಳಿ ಮುನ್ನುಗ್ಗುತ್ತಿರುವ ವಿಎಸ್ ಐಎಲ್ ಹೋರಾಟಗಾರರು|vsil

ಶಿವಮೊಗ್ಗದ ವಿಮಾನ ನಿಲ್ದಾಣ ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಗೆ ಕಾರ್ಖಾನೆ ಉಳಿಸುವಂತೆ ಮನವಿ ನೀಡಲೇಬೇಕು ಎಂದು ನಿರ್ಧರಿಸಿದ್ದ ಸಾವಿರಾರು ವಿಐಎಸ್ ಎಲ್ ಗುತ್ತಿಗೆ ನೌಕರರ ಕಾರ್ಯಕರ್ತರನ್ನು ಬಿಳಕಿ ಕ್ರಾಸ್ ಬಳಿ ಪೊಲೀಸರು ತಡೆದಿದ್ದಾರೆ. ಪೊಲೀಸರು ತಡೆದರೂ ಗದ್ದೆಯಲ್ಲಿ ಎದ್ದು ಬಿದ್ದು ಓಡಿ ಶಿವಮೊಗ್ಗ ವಿಮಾನ ನಿಲ್ದಾಣದ ಕಡೆ ಹೋರಾಟಗಾರರು ತೆರಳುತಿದ್ದಾರೆ. ಇಂದು ಬೆಳಗ್ಗಿನ ಜಾವವೇ ಸಂಘದ 40 ಕ್ಕೂ ಹೆಚ್ಚು ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಆದರೆ ಇಂದು ಬೆಳಿಗ್ಗೆ ಭದ್ರಾವತಿ ಶಾಸಕ…

Read More

ಕೆಲವೇ ಕ್ಷಣಗಳಲ್ಲಿ ಪ್ರಧಾನಿಯಿಂದ ಕುವೆಂಪು ವಿಮಾನ ನಿಲ್ದಾಣ ಉದ್ಘಾಟನೆ – ವಿಶೇಷತೆ ಏನು ಗೊತ್ತಾ..???|airport

ಪ್ರಧಾನಿ ನರೇಂದ್ರ ಮೋದಿಯವರು ಇಂದು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಶಿವಮೊಗ್ಗ ಹಾಗೂ ಬೆಳಗಾವಿಯಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ. ಶಿವಮೊಗ್ಗದ ಸೋಗಾನೆಯಲ್ಲಿ ನಿರ್ಮಾಣವಾಗಿರುವ ವಿಮಾನ ನಿಲ್ದಾಣವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಲಿದ್ದಾರೆ. ಬೆಳಿಗ್ಗೆ 11.30ಕ್ಕೆ ನರೇಂದ್ರ ಮೋದಿ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ. ಇದಕ್ಕಾಗಿ ಶಿವಮೊಗ್ಗ ವಿಮಾನ ನಿಲ್ದಾಣದ ಟರ್ಮಿನಲ್ ಕಟ್ಟಡದ ಬಳಿ ಬೃಹತ್‌ ವೇದಿಕೆ ನಿರ್ಮಿಸಲಾಗಿದೆ. 1 ಲಕ್ಷ ಆಸನಗಳ ವ್ಯವಸ್ಥೆ ಮಾಡಲಾಗಿದ್ದು, ಒಂದೂವರೆಲಕ್ಷದಷ್ಟು ಜನ ಸೇರುವ ನಿರೀಕ್ಷೆ ಇದೆ. ಈಗಾಗಲೇ ಸಾವಿರಾರು ಸಂಖ್ಯೆಯಲ್ಲಿ ಜನ ಸೇರಿದ್ದಾರೆ….

Read More

ವಿದ್ಯುತ್ ಅವಘಡದಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಪರಿಹಾರದ ಚೆಕ್ ವಿತರಿಸಿದ ಶಾಸಕ ಹರತಾಳು ಹಾಲಪ್ಪ|mescom

ರಿಪ್ಪನ್‌ಪೇಟೆ : ಇತ್ತೀಚೆಗೆ ಹರತಾಳು ಗ್ರಾ.ಪಂ ವ್ಯಾಪ್ತಿಯಲ್ಲಿ ವಿದ್ಯುತ್ ಅವಘಡದಿಂದ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಪರಿಹಾರ ಧನವನ್ನು ಶಾಸಕ ಹಾಗೂ ಎಂಎಸ್ ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ವಿತರಿಸಿದರು. ಇತ್ತೀಚೆಗೆ ವಿದ್ಯುತ್ ಅವಘಡದಲ್ಲಿ ಮೃತಪಟ್ಟ ಶೇಷಗಿರಿ ಬಿನ್ ಬಸವನಾಯ್ಕ ರವರು ಮೃತಪಟ್ಟಿದ್ದು, ಮೃತರ ವಾರಸುದಾರರಾದ ಸುಧಾರಾಣಿ ಶೇಷಗಿರಿಯವರಿಗೆ ಸಾಗರದಲ್ಲಿ 5 ಲಕ್ಷ ರೂ ಗಳ ಪರಿಹಾರ ಧನದ ಆದೇಶ ಪ್ರತಿ ಹಸ್ತಾಂತರಿಸಿ, ಸಾಂತ್ವನ ಹೇಳಿದರು. ಈ ಸಂಧರ್ಭದಲ್ಲಿ ಮೆಸ್ಕಾಂ AEE ಚಂದ್ರಶೇಖರ್, ಮೃತರ ಕುಟುಂಬಸ್ಥರು, ಪಕ್ಷದ ಮುಖಂಡರು…

Read More

ಜನವಾರ್ತೆ ಪತ್ರಿಕೆಯ ಸಂಪಾದಕ ನಾಗರಾಜ್ ಇನ್ನಿಲ್ಲ

ಶಿವಮೊಗ್ಗ ಪತ್ರಿಕಾ ರಂಗದಲ್ಲಿ ಸಂಚಲನ ಮೂಡಿಸಿದ್ದ ಜನವಾರ್ತೆ ಕನ್ನಡ ದಿನಪತ್ರಿಕೆಯ ಸಂಪಾದಕರಾದ  ಜಿ.ಎಸ್. ನಾಗರಾಜ್ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ನಡೆದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆಗೆ ಅವರು ಸ್ಪಂದಿಸದೇ ಇಂದು ಬೆಳಿಗ್ಗೆ ನಿಧನರಾಗಿದ್ದಾರೆ.. ಮುಂಗೋಪಿ, ಅಷ್ಟೇ ಮೃದು ಸ್ವಭಾವದ ನಾಗರಾಜ್ 1996 ರಲ್ಲಿ ಶಿವಮೊಗ್ಗ ಪತ್ರಿಕಾ ರಂಗದಲ್ಲಿ ಬದಲಾವಣೆ ತಂದು ಸಂಚಲನ ಮೂಡಿಸಿದ್ದ ಧೀಮಂತ ಪತ್ರಿಕಾ ಸಂಪಾದಕ ಹಾಗೂ ಸಂಸ್ಥಾಪಕರಾಗಿದ್ದರು. ಬಹುತೇಕ ಪತ್ರಕರ್ತರು ಇವರ…

Read More

ಸೌಮ್ಯ ಪೆರ್ನಾಜೆಗೆ ಗಡಿನಾಡ ಧ್ವನಿ ” ಮಧು ಭೂಷಣ” ರಾಜ್ಯ ಪ್ರಶಸ್ತಿ ಪ್ರಧಾನ|award

ಸೌಮ್ಯ ಪೆರ್ನಾಜೆಗೆ ಗಡಿನಾಡ ದ್ವನಿ ” ಮಧು ಭೂಷಣ”   ರಾಜ್ಯ ಪ್ರಶಸ್ತಿ ಪ್ರಧಾನ  ಗಡಿನಾಡ ಧ್ವನಿ ಗಡಿನಾಡ ಶ್ರೇಯೋಭಿವೃದ್ಧಿ ಟ್ರಸ್ಟ್ (ರಿ) ಇದರ ಆರನೇ ಕರ್ನಾಟಕ ಗಡಿನಾಡ ಸಮ್ಮೇಳನದಲ್ಲಿ ಸೌಮ್ಯ ಪೆರ್ನಾಜೆ ರವರಿಗೆ ಮಧುಭೂಷಣ ರಾಜ್ಯ ಪ್ರಶಸ್ತಿ ಪ್ರಧಾನ  ಮಾಡಿರುತ್ತಾರೆ. ಪ್ರಶಸ್ತಿ ಪ್ರಧಾನ ಮಹಾ ಸಮ್ಮೇಳನವು ಗಡಿನಾಡ ಪ್ರದೇಶವಾದ ಒಡ್ಯ ಸಹಕಾರಿ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ 2023 (25) ಫೆಬ್ರವರಿ ರಂದು ನಡೆಯಿತು. ಮಿತ್ರಂಪಾಡಿ ಜಯರಾಮ್ ರೈ ಅಬುದಾಬಿ ಅವರು ಪ್ರಶಸ್ತಿ ಪ್ರಧಾನ ಮಾಡಿದರು. ಮಲಾರ್ ಜಯರಾಮ್ ರೈ…

Read More

ರಿಪ್ಪನ್‌ಪೇಟೆ : ದೇವಸ್ಥಾನದ ಬೀಗ ಮುರಿದು ಸಾವಿರಾರು ರೂ ಕಳ್ಳತನ|theft

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ನಿವುಣೆ ಗ್ರಾಮದ ಶ್ರೀ ಕಲಾನಾಥೇಶ್ವರ ದೇವಸ್ಥಾನ ಬೀಗ ಮುರಿದು ಕಳ್ಳತನ ನಡೆಸಿರುವ ಘಟನೆ ಗುರುವಾರ ರಾತ್ರಿ ನಡೆದಿದೆ. ಕಳ್ಳರು ರಾತ್ರಿಯ ವೇಳೆಯಲ್ಲಿ ದೇವಸ್ಥಾನದ ಮುಂಭಾಗಿಲಿನ ಬೀಗ ಮುರಿದು ದೇವಸ್ಥಾನದ ಒಳಭಾಗಕ್ಕೆ ಪ್ರವೇಶಿಸಿ ದೇವರ ಮುಂಭಾಗದಲಿದ್ದ ಒಂದು ಕಬ್ಬಿಣದ ಮತ್ತು ಸ್ಟೀಲ್ ನ ಕಾಣಿಕೆ ಡಬ್ಬಿಗಳನ್ನು ದೇವಸ್ಥಾನದ ಹೊರಭಾಗ ಎತ್ತಿಕೊಂಡು ಹೋಗಿ ಅಲ್ಲಿ ಅವುಗಳ ಬೀಗವನ್ನು ಮುರಿದು ಅದರ ಒಳಭಾಗದಲ್ಲಿದ್ದ ಹಣವನ್ನು ಕಳ್ಳತನ ಮಾಡಿಕೊಂಡು ಕಾಣಿಕೆ ಡಬ್ಬಿಗಳು…

Read More

ವಿಮಾನ ನಿಲ್ದಾಣಕ್ಕೆ ಕುವೆಂಪು ಹೆಸರನ್ನು ಕೇಂದ್ರ ಪ್ರಕಟಿಸಲಿ – ಕ ಸಾ ಪ|airport

ವಿಮಾನ ನಿಲ್ದಾಣಕ್ಕೆ ಕುವೆಂಪು ಹೆಸರನ್ನು ಕೇಂದ್ರ ಪ್ರಕಟಿಸಲಿ ರಿಪ್ಪನ್ ಪೇಟೆ :ಶಿವಮೊಗ್ಗದ ಸೋಗಾನೆಯಲ್ಲಿ ಆರಂಭವಾಗಲಿರುವ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪುರವರ ಹೆಸರನ್ನು ಕೇಂದ್ರ ಸರ್ಕಾರ ಉದ್ಘಾಟನೆಯ ದಿನದಂದು ಘೋಷಣೆ ಮಾಡಬೇಕೆಂದು ಹೊಸನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ತ.ಮ. ನರಸಿಂಹ ಆಗ್ರಹಿಸಿದರು. ಶನಿವಾರ ರಿಪ್ಪನ್ ಪೇಟೆ ಗ್ರಾಮ ಪಂಚಾಯಿತಿಯ ಕುವೆಂಪು ಸಭಾ ಭವನದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು ವಿಮಾನ ನಿಲ್ದಾಣದ ನಾಮ ಫಲಕಗಳಲ್ಲಿ ಕನ್ನಡ ಭಾಷೆಯನ್ನು ನಮೂದಿಸಬೇಕು . ಕನ್ನಡ ನಾಮಫಲಕವನ್ನು ಮಧ್ಯಂತರದಲ್ಲಿ ತೆರವುಗೊಳಿಸುವ…

Read More

ಸಕ್ರೀಯ ರಾಜಕಾರಣದಿಂದ ನಿವೃತ್ತಿಯಾಗಿಲ್ಲ – ಯಡಿಯೂರಪ್ಪ ಸ್ಪಷ್ಟನೆ|BSY

ನಾನು ಸಕ್ರೀಯ ರಾಜಕಾರಣದಿಂದ ನಿವೃತ್ತಿಯಾಗಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ. ಶಿವಮೊಗ್ಗದ ಫ್ರೀಡಂ ಪಾರ್ಕ್ ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ ನಾನು ಅಧಿವೇಶನದಲ್ಲಿ ಚುನಾವಣೆಗೆ ನಿಲ್ಲುವುದಿಲ್ಲವೆಂದು ಹೇಳಿದ್ದೆ. ಹಾಗೆಂದರೆ ರಾಜಕಾರಣದಿಂದ ದೂರ ಉಳಿಯುವುದಲ್ಲ.  ರಾಜಕಾರಣದಲ್ಲಿ ಇದ್ದುಕೊಂಡೇ ಪಕ್ಷ ಅಧಿಕಾರಕ್ಕೆ ತರಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು. ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರುತ್ತದೆ. ಇದರ ಬಗ್ಗೆ ಯಾವುದೇ ಸಂಶಯವಿಲ್ಲ. ರಾಜ್ಯಾದ್ಯಂತ ಪ್ರವಾಸ ಮಾಡುತ್ತೇನೆ.ವಿದಾಯದ ಬಳಿಕ ಕೆಲವರು ನಾನು ಚುನಾವಣೆಗೆ ನಿಲ್ಲಬೇಕು ಎಂದು…

Read More

ಹೊಸನಗರ ತಾಲೂಕಿನಾದ್ಯಂತ ಅಕ್ರಮ ಮದ್ಯ ಮಾರಾಟದ ಹಾವಳಿ – ಕಣ್ಮುಚ್ಚಿ ಕೈ ಬಿಸಿ ಮಾಡಿಕೊಂಡು ಕುಳಿತಿದೆ ಅಬಕಾರಿ ಇಲಾಖೆ|excise

ಹೊಸನಗರ ತಾಲೂಕಿನಾದ್ಯಂತ ಅಕ್ರಮ ಮದ್ಯ ಮಾರಾಟದ ಹಾವಳಿ – ಕಣ್ಮುಚ್ಚಿ ಕೈ ಬಿಸಿ ಮಾಡಿಕೊಂಡು ಕುಳಿತಿದೆ ಅಬಕಾರಿ ಇಲಾಖೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಹಾಗೂ ಪಟ್ಟಣದಲ್ಲಿ ಹೊಟೇಲ್ ಮತ್ತು ಕಿರಾಣಿ ಅಂಗಡಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಹೆಚ್ಚುತ್ತಿದೆ. ಹಳ್ಳಿಗಳಲ್ಲಿ ಮನೆ ಮನೆಗಳಲ್ಲಿ ಎಗ್ಗಿಲ್ಲದೆ ಮದ್ಯ ಮಾರಾಟ ನಡೆಸುತ್ತಿದ್ದರೂ ತಾಲೂಕಿನ ಅಬಕಾರಿ ಇಲಾಖೆಯ ಅಧಿಕಾರಿಗಳು ಮಾತ್ರ ನಮಗೆ ಬರುವುದು ಬಂದರೆ ಸಾಕು ಊರು ಹಾಳಾಗಿ ಹೋಗಲಿ ಎನ್ನುತ್ತಿರುವ ಹಾಗೆ ಇರುವುದನ್ನು ಕಂಡು ಸಾರ್ವಜನಿಕರು ಹಿಡಿ…

Read More