ಮಾರ್ಚ್ 1 ರಿಂದ ಸರ್ಕಾರಿ ನೌಕರರು ಕೆಲಸಕ್ಕೆ ಬರಲ್ಲ – ಯಾವ ಸರ್ಕಾರಿ ಕೆಲಸವು ನಡೆಯುವುದಿಲ್ಲ : ಅನಿರ್ದಿಷ್ಟವಾಧಿ ಮುಷ್ಕರಕ್ಕೆ ಕರೆ ನೀಡಿದ ಷಡಾಕ್ಷರಿ

ಮಾರ್ಚ್ 1 ರಿಂದ ಸರ್ಕಾರಿ ನೌಕರರು ತಮ್ಮ ಕೆಲಸಕ್ಕೆ ಗೈರು ಹಾಜರಾಗುವ ಮೂಲಕ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುವುದು ಎಂದು ರಾಜ್ಯ ಸರ್ಕಾರಿ‌ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ತಿಳಿಸಿದ್ದಾರೆ.  ಶಿವಮೊಗ್ಗ ಜಿಲ್ಲಾ ಸರ್ಕಾರಿ ನೌಕರರ ಸಂಘದ ಕಚೇರಿಯಲ್ಲಿ ನಡೆದ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರಿ ನೌಕರರ ಬೇಡಿಕೆಯಾದ ವೇತನ ಪರಿಷ್ಕರಣೆಗೆ ಸಂಬಂಧಿಸಿದ ಮಧ್ಯಂತರ ವರದಿಯನ್ನು 7ನೇ ವೇತನ ಆಯೋಗ ಜಾರಿ ಹಾಗೂ ಎನ್​ಪಿಎಸ್​ ರದ್ದುಪಡಿಸಿ, ಒಪಿಎಸ್ ಯೋಜನೆಯನ್ನು ಜಾರಿ ಮಾಡಬೇಕೆಂಬ ಬೇಡಿಕೆಯನ್ನಿಟ್ಟುಕೊಂಡ ಅನಿರ್ದಿಷ್ಟಾವಧಿ ಪ್ರತಿಭಟನೆಗೆ ಮುಂದಾಗಿರುವುದಾಗಿ…

Read More

ಆನಂದಪುರ ಸಮೀಪದ ಕೆಂಜಿಗಾಪುರದಲ್ಲಿ ಒಂಟಿ ಮನೆ ದರೋಡೆ – ಒಂದೇ ವಾರದಲ್ಲಿ ಎರಡು ಬಾರಿ ದರೋಡೆಗೊಳಗಾದ ಭಟ್ಟರ ಮನೆ|Robbery

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆತಂಕ ಮೂಡಿಸುವಂತಹ ದರೋಡೆ ಪ್ರಕರಣವೊಂದು ಸಾಗರ ಗ್ರಾಮಾಂತರ ಪೊಲೀಸ್ ಸ್ಟೇಷನ್​ ವ್ಯಾಪ್ತಿಯಲ್ಲಿ ನಡೆದಿದೆ. ಆನಂದಪುರ ಸಮೀಪದ ಕೆಂಜಿಗಾಪುರ ಭಟ್ಟರೊಬ್ಬರ ಮನೆಯಲ್ಲಿ ರಾಬರಿ ನಡೆದಿದೆ. ಎಫ್​ಐಆರ್​ನಲ್ಲಿ ದಾಖಲಾಗಿರುವ ಪ್ರಕಾರ ಎರಡು ಸಲ ರಾಬರಿ ನಡೆದಿದೆ. ಸ್ಥಳೀಯರು ಹೇಳುವ ಪ್ರಕಾರ ಮೂರು ಸಲ ನಡೆದಿರಬಹುದು ಎನ್ನಲಾಗುತ್ತದೆ.  ಒಂದೇ ಮನೆಯನ್ನು ಟಾರ್ಗೆಟ್ ಮಾಡಿ ಕೇವಲ ಒಂದು ವಾರದಲ್ಲಿ ಎರಡು ಸಲ ರಾಬರಿ ಮಾಡಲಾಗಿದೆ.  ಹಿರಿಯ ವೃದ್ಧರನ್ನ ಕೈ ಕಾಲು ಕಟ್ಟಿ ರಾಬರಿ ಮಾಡಿ ಹೋಗುತ್ತಿರುವವರು ಯಾರು?…

Read More

ವಿಐಎಸ್‌ಎಲ್ ಪುನಶ್ಚೇತನಕ್ಕೆ ಆಗ್ರಹಿಸಿ ಕರೆ ನೀಡಿದ್ದ ಭದ್ರಾವತಿ ಬಂದ್‌ ಯಶಸ್ವಿ|VSIL

ಭದ್ರಾವತಿಯ ವಿಶ್ವೇಶ್ವರಯ್ಯ ಉಕ್ಕು ಮತ್ತು ಕಬ್ಬಿಣ ಕಾರ್ಖಾನೆ ಮುಚ್ಚುವ ನಿರ್ಧಾರದ ಬೆನ್ನಲ್ಲೇ ಗುತ್ತಿಗೆ ಕಾರ್ಮಿಕರು ಆರಂಭಿಸಿದ ಪ್ರತಿಭಟನೆ ಗುರುವಾರಕ್ಕೆ (ಫೆ.24) 37ನೇ ದಿನಕ್ಕೆ ಕಾಲಿಟ್ಟಿದೆ. ವಿಐಎಸ್‌ಎಲ್ ಮುಚ್ಚುವ ಕೇಂದ್ರ ಸರ್ಕಾರದ ನಿರ್ಧಾರದಿಂದ ಆಕ್ರೋಶ ಗೊಂಡಿರುವ ಗುತ್ತಿಗೆ ಕಾರ್ಮಿಕರು ಗುರುವಾರ ಕರೆ ನೀಡಿರುವ ಭದ್ರಾವತಿ ಬಂದ್‌ಗೆ ಉತ್ತಮ ಬೆಂಬಲ ವ್ಯಕ್ತವಾಗಿದೆ. ಕಾರ್ಖಾನೆ ಜತೆಗೆ ತಮ್ಮನ್ನು ಉಳಿಸಿ ಎಂದು ಆಗ್ರಹಿಸಿ ವಿಐಎಸ್‌ಎಲ್ ಕಾರ್ಮಿಕರು ಕಳೆದ 37 ದಿನಗಳಿಂದ ಪ್ರತಿಭಟನೆ ಮಾಡುತ್ತಿದ್ದಾರೆ. ಇತ್ತೀಚೆಗಷ್ಟೇ ಶಿವಮೊಗ್ಗ ಚಲೋ ನಡೆಸಿದ್ದ ಗುತ್ತಿಗೆ ಕಾರ್ಮಿಕರು, ಶಿವಮೊಗ್ಗ…

Read More

ಬಡ ಜನರ ಬದುಕಿನಲ್ಲಿ ಬದಲಾವಣೆ ತರಲು ರಥಯಾತ್ರೆ : ಹೆಚ್ ಡಿ ಕುಮಾರಸ್ವಾಮಿ|HDK

ಬಡ ಜನರ ಬದುಕಿನಲ್ಲಿ ಬದಲಾವಣೆ ತರಲು ರಥಯಾತ್ರೆ : ಎಚ್ ಡಿ ಕುಮಾರಸ್ವಾಮಿ ರಿಪ್ಪನ್ ಪೇಟೆ : ಬಡಜನರ ಬದುಕಿನಲ್ಲಿ ಬದಲಾವಣೆ ತರಲು ರಾಜ್ಯದ 28 ಜಿಲ್ಲೆಗಳಲ್ಲಿ ಪಂಚರತ್ನ ರಥ ಯಾತ್ರೆಯ ಮೂಲಕ ಪ್ರವಾಸ ಕೈಗೊಂಡಿದ್ದೇನೆ. ಇತರೆ ಪಕ್ಷಗಳಲ್ಲಿ ನಾಯಕರುಗಳ ಗುಂಪೆ ಇದೆ ಆದರೆ ನನ್ನದು ಏಕಾಂಗಿ ಹೋರಾಟ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಶುಕ್ರವಾರ ಸಮೀಪದ ಹುಂಚದ ಕಟ್ಟೆ ಗ್ರಾಮದಲ್ಲಿ ಜೆಡಿಎಸ್ ಪಕ್ಷದ ಪಂಚರತ್ನ ರಥಯಾತ್ರೆ ಸಲುವಾಗಿ ಆಗಮಿಸಿದ್ದ ಅವರು ಸುದ್ದಿಗಾರರನ್ನು…

Read More

ಹೊಂಬುಜಾ ಜಗನ್ಮಾತೆ ಪದ್ಮಾವತಿ ದರ್ಶನಾಶೀರ್ವಾದ ಪಡೆದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ|hombuja

ರಿಪ್ಪನ್‌ಪೇಟೆ;-ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಮುಖಂಡ ಹೆಚ್.ಡಿ.ಕುಮಾರಸ್ವಾಮಿ ಇಂದು ಹೊಂಬುಜ ಜೈನಮಠದ ಜಗನ್ಮಾತೆ ಪದ್ಮಾವತಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ  ದರ್ಶನಾಶಿರ್ವಾದ ಪಡೆದರು. ನಂತರ ಮಠದ ಜಗದ್ಗುರು ಡಾ.ಶ್ರೀಮದ್‌ದೇವೇಂದ್ರ ಕೀರ್ತಿ ಭಟ್ಟಾರಕ ಮಹಾಸ್ವಾಮಿಜಿಯವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ಶ್ರೀಗಳು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರನ್ನು ಸನ್ಮಾನಿಸಿ ಅಶೀರ್ವದಿಸಿದರು. ಈ ಸಂದರ್ಭದಲ್ಲಿ ಈ ಸಂದರ್ಭದಲ್ಲಿ ತೀರ್ಥಹಳ್ಳಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಯಡೂರು ರಾಜಾರಾಮ್,ಎಂ.ಎಲ್.ಸಿ. ಬೋಜೆಗೌಡರು,ಜಿಲ್ಲಾ ಜೆಡಿಎಸ್ ಅಧ್ಯಕ್ಷ ಎಂ ಶ್ರೀಕಾಂತ್,ರಾಜ್ಯ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಆರ್.ಎ.ಚಾಬುಸಾಬ್, ತಾಲ್ಲೂಕ್…

Read More

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಎರಡನೇ ವಿಮಾನ ಆಗಮನ – 4 ಕಾರು ಸಹಿತ ಆಗಮಿಸಿದ ಪ್ರಧಾನಿ ಭದ್ರತಾ ಪಡೆ|SPG

ಶಿವಮೊಗ್ಗ : ಇವತ್ತು ಇಂಡಿಯನ್ ಏರ್ ಫೋರ್ಸ್ ನ ಎರಡನೆ ವಿಮಾನ ಸೋಗಾನೆಯ ವಿಮಾನ ನಿಲ್ದಾಣಕ್ಕೆ ಬೆಳಗ್ಗೆ 11.30ರ ಹೊತ್ತಿಗೆ ಆಗಮಿಸಿತು. ರಷ್ಯಾ ನಿರ್ಮಿತ ಇಲ್ಯೂಷಿನ್ 76 ಮಾದರಿಯ ವಿಮಾನ ಇದಾಗಿದೆ. ಭಾರತೀಯ ವಾಯು ಸೇನೆಯಲ್ಲಿ ಕ್ಯಾರಿಯರ್ ವಿಮಾನ. ಸೇನೆಗೆ ಅಗತ್ಯವಿರುವ ಸರಕು ಸಾಗಣೆಗೆ ಈ ವಿಮಾನ ಬಳಕೆಯಾಗುತ್ತದೆ. ವಿಮಾನದಲ್ಲಿ SPG ತಂಡ ಭಾರತೀಯ ವಾಯು ಸೇನೆಯ ಕ್ಯಾರಿಯರ್ ವಿಮಾನದಲ್ಲಿ ದೆಹಲಿಯಿಂದ ಭದ್ರತಾ ಪಡೆಗಳ ತಂಡ ಆಗಮಿಸಿತು. ವಿಮಾನದಲ್ಲಿ ನಾಲ್ಕು ಕಾರುಗಳ ಸಹಿತ ಹಲವು ಸಿಬ್ಬಂದಿ ಆಗಮಿಸಿದರು….

Read More

ರಿಪ್ಪನ್‌ಪೇಟೆ : ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಅಂಗಡಿಗಳ ಮೇಲೆ ಪೊಲೀಸರ ದಾಳಿ – ಇಬ್ಬರು ವಶಕ್ಕೆ|excise

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಬೆಳ್ಳೂರು ಗ್ರಾಪಂ ವ್ಯಾಪ್ತಿಯಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಎರಡು ಅಂಗಡಿಗಳ ಮೇಲೆ ಪಟ್ಟಣದ ಪೊಲೀಸರು ದಾಳಿ ನಡೆಸಿದ ಘಟನೆ ನಡೆದಿದೆ. ಬೆಳ್ಳೂರು ಗ್ರಾಮದ ಬಂಗ್ಲಿದಿಬ್ಬ ಸರ್ಕಲ್ ನಲ್ಲಿರುವ ದಿನಸಿ ಅಂಗಡಿ ಮುಂಭಾಗದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಮಾಹಿತಿ ಹಿನ್ನಲೆಯಲ್ಲಿ ಪೊಲೀಸರು ದಾಳಿ ನಡೆಸಿ ಚಂದ್ರಪ್ಪ ಎಂಬಾತನನ್ನು ವಶಕ್ಕೆ ಪಡೆದು ಅಕ್ರಮ ಮದ್ಯವನ್ನು ಅಮಾನತ್ತು ಪಡಿಸಿಕೊಳ್ಳಲಾಗಿದೆ. ಬೆಳ್ಳೂರು ಗ್ರಾಮದ ಕೋಳಿ ಅಂಗಡಿ ಮುಂಭಾಗದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಮಾಹಿತಿ…

Read More

ಕೊರೊನಾ ಪಾಸಿಟಿವ್ ಹಿನ್ನಲೆ ರಜೆ ಮೇಲೆ ಹೋಗಿದ್ದ ಕಾನ್ಸ್ ಟೇಬಲ್ ನಾಪತ್ತೆ – ಅದೇ ಸ್ಟೇಷನ್ ನಲ್ಲಿ ದಾಖಲಾಯ್ತು ಕೇಸ್|missing

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಮಾಳೂರು ಪೊಲೀಸ್ ಸ್ಟೇಷನ್​ನಲ್ಲಿ ಕೆಲಸ ಮಾಡುತ್ತಿದ್ದ ಪೇದೆಯೊಬ್ಬರು ಕಾಣೆಯಾಗಿದ್ದಾರೆ ಎಂಬ ದೂರೊಂದು ಅದೇ ಸ್ಟೇಷನ್​ನಲ್ಲಿ ದಾಖಲಾಗಿದ್ದು, ಆ ಸಂಬಂಧ ಎಫ್​ಐಆರ್ ಕೂಡ ದಾಖಲಾಗಿದೆ.   ದಿನಾಂಕ: 07-12-2021 ರಿಂದ ಮಾಳೂರು ಪೊಲೀಸ್ ಠಾಣೆಯಲ್ಲಿ ಪೊಲೀಸ್ ಕಾನ್ಸ್‌ಟೇಬಲ್ ಆಗಿ ಕರ್ತವ್ಯ ನಿರ್ವಹಿಸಿಕೊಂಡಿದ್ದ ಸಂತೋಷ್ ಕುಮಾರ್ ಎಂಬವರು ಕೋವಿಡ್ ಪಾಸೀಟಿವ್ ಬಂದ ಹಿನ್ನೆಲೆಯಲ್ಲಿ  24-01-2022 ರಿಂದ ದಿನಾಂಕ:31-01-2022 ರ ವಿಶೇಷ ರಜೆ ತೆಗೆದುಕೊಂಡಿದ್ದರಂತೆ.  ಆನಂತರ  ವಾಪಸ್‌ ಕರ್ತವ್ಯಕ್ಕೆ ಹಾಜರಾಗಿಲ್ಲ. ಅಲ್ಲದೆ ಯಾವುದೇ ರೀತಿಯ ರಜೆಯನ್ನು ಸಹ ಪಡೆದುಕೊಳ್ಳದೆ…

Read More

ರಿಪ್ಪನ್‌ಪೇಟೆ : ನುಗ್ಗೆಕಾಯಿ ಕಿತ್ತ ವಿಚಾರದಲ್ಲಿ ಗಲಾಟೆ – ಒಬ್ಬನಿಗೆ ಮೂವರಿಂದ ಹಲ್ಲೆ,ಜೀವಬೆದರಿಕೆ|Assault

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಕೆಂಚನಾಲ ಗ್ರಾಮದಲ್ಲಿ ನುಗ್ಗೆಕಾಯಿ ವಿಚಾರಕ್ಕೆ ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿದ ಘಟನೆಯೊಂದು ನಡೆದಿದೆ.  ಸೋಮವಾರ ಸಂಜೆ ಕೆಂಚನಾಲ ಗ್ರಾಮದ ರಾಮ್ ಕುಮಾರ್  ರಿಪ್ಪನ್​ಪೇಟೆಗೆ ಹೋಗಿ ವಾಪಸ್​ ಮನೆಗೆ ಬರುವಾಗ, ಅದೇ ಗ್ರಾಮದ ನಿವಾಸಿ  ನಾಗೇಶ್ ತನ್ನ ಮನೆ ಹಿತ್ತಲಿನಲ್ಲಿ  ಬೆಳೆದಿದ್ದ ನುಗ್ಗೆಕಾಯಿಯನ್ನು ಕೀಳುತ್ತಿರುವುದು ಕಾಣಿಸಿದೆ. ಸಹಜವಾಗಿಯೇ ನಮ್ಮನೆಯ ಹಿತ್ಲಿಂದ ಯಾಕೆ ನುಗ್ಗೆಕಾಯಿ ಕಿತ್ಕೊಂಡು ಹೋಗ್ತಿದ್ದಿಯಾ, ಹೇಳೋದು ಕೇಳೋದು ಏನು ಇಲ್ವಾ ಎಂದು ಪ್ರಶ್ನಿಸಿದ್ದಾರೆ. ಇಷ್ಟಕ್ಕೆ ಸಿಟ್ಟಾದ ವ್ಯಕ್ತಿ ಅದು ನಿನ್ನ…

Read More

ಶ್ರೀಕ್ಷೇತ್ರ ಹೊಂಬುಜಾ ಮಠದಲ್ಲಿ ಹಲವು ಭಾವುಕ ಕ್ಷಣಗಳಿಗೆ ಸಾಕ್ಷಿಯಾದ ಶಿಬಿರ|hombuja

ರಿಪ್ಪನ್‌ಪೇಟೆ : ಸಮೀಪದ ಶ್ರೀಕ್ಷೇತ್ರ ಹೊಂಬುಜದಲ್ಲಿ ಇಂದು ಭಾವುಕ ಕ್ಷಣಗಳಿಗೆ ಸಾಕ್ಷಿಯಾಗುವಂತಹ ಕಾರ್ಯಕ್ರಮವೊಂದನ್ನು ಹೊಂಬುಜ ಮಠದ ವತಿಯಿಂದ ಆಯೋಜಿಸಲಾಗಿತ್ತು. ಕೆಲವೊಂದು ಕಾರಣಗಳಿಂದ ಕೈ ಮತ್ತು ಕಾಲು ಕಳೆದುಕೊಂಡ 72 ವಿಕಲಚೇತನರಿಗೆ ಕೈ ಮತ್ತು ಕಾಲು ಉಚಿತವಾಗಿ ಜೋಡಿಸುವ ಕಾರ್ಯಕ್ರಮದಲ್ಲಿ ಕಣ್ಣಂಚನ್ನು ತೇವಗೊಳಿಸುವಂತಹ ಕೆಲವೊಂದು ಘಟನೆಗಳು ನಡೆದವು. ಹನ್ನೊಂದು ವರ್ಷದ ವಿಕಲಚೇತನ ಬಾಲಕ ಅಪಘಾತದಲ್ಲಿ ಎರಡು ವರ್ಷದ ಹಿಂದೆ ಕಾಲು ಕಳೆದುಕೊಂಡು ತನ್ನ ಬಾಳಿನಲ್ಲಿನ ಇನ್ನು ನಡೆಯಲು ಸಾಧ್ಯವೇ ಇಲ್ಲವೆನೋ ಎಂಬ ಮನಸ್ಥಿತಿಯಲ್ಲಿದ್ದ… ಆ ಬಾಲಕನಿಗೆ ಕಾಲು ಜೋಡಿಸುತ್ತಲೇ…

Read More