ಹೆರಿಗೆ ವಾರ್ಡ್ ನಲ್ಲಿ 6 ತಿಂಗಳ ಮಗುವನ್ನು ಬಿಟ್ಟು ಮಹಿಳೆ ನಾಪತ್ತೆ…!!!!

ಶಿವಮೊಗ್ಗದ  ಮೆಗ್ಗಾನ್ ಹೆರಿಗೆ ವಾರ್ಡ್ ಗೆ ಬಂದಿದ್ದ ಅಪರಿಚಿತ ಮಹಿಳೆ ವಾರ್ಡ್ ನಲ್ಲಿದ್ದ ಮಹಿಳೆಯೊಬ್ವರ ಕೈಯಲ್ಲಿ ಮಗುವನ್ನ ನೀಡಿ ದಿಡೀರನೆ ಕಣ್ಮರೆಯಾಗಿರುವ ಘಟನೆ ನಡೆದಿದೆ. ಮೆಗ್ಗಾನ್ ಹೆರಿಗೆ ವಾರ್ಡ್ ನಲ್ಲಿ ಹೊರಗಿನಿಂದ ಬಂದ ಮಹಿಳೆಯೊಬ್ಬಳು ಶೌಚಾಲಯಕ್ಕೆ ಹೋಗಿ ಬರುವೆ ಎಂದು ಹೇಳಿ ವಾರ್ಡ್ ನಲ್ಲಿದ್ದ ಮಹಿಳೆಯೊಬ್ಬಳಿಗೆ ಮಗುವನ್ನ ನೀಡಿ ಹೋಗಿದ್ದಾಳೆ. ಮಗುವನ್ನ ಎತ್ತುಕೊಂಡವರು ಕಳೆದ ಮೂರು ಗಂಟೆಯಿಂದ ಕಾದರೂ ಮಗುವನ್ನ ನೀಡಿದ ಮಹಿಳೆ ವಾಪಾಸ್ ಬರಲೇ ಇಲ್ಲ. ಆ ತಾಯಿ ಯಾಕೆ ಹೀಗೆ ಮಾಡಿದ್ದಾಳೋ, ಬಡತನವೋ ಗೊತ್ತಿಲ್ಲ….

Read More

ರಿಪ್ಪನ್‌ಪೇಟೆ : ತಾವರೆಕೆರೆ ಬಳಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವನ ಸ್ಥಿತಿ ಗಂಭೀರ – ಐವರು ಗಾಯಾಳು ಮೆಗ್ಗಾನ್ ಗೆ|accident

ರಿಪ್ಪನ್ ಪೇಟೆ : ಇಲ್ಲಿನ ಹೊಸನಗರ ರಸ್ತೆಯ ತಾವರೆಕೆರೆ ಬಳಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ರಿಪ್ಪನ್‌ಪೇಟೆ ಕಡೆಯಿಂದ ಬಿಳಿಕಿ ಗ್ರಾಮಕ್ಕೆ ತೆರಳುತಿದ್ದ ಬೈಕ್ ಹಾಗೂ ಜೇನಿ ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ಬರುತಿದ್ದ ಬೈಕ್ ನಡುವೆ ತಾವರೆಕೆರೆ ಸಮೀಪದಲ್ಲಿ ಮುಖಾಮುಖಿ ಡಿಕ್ಕಿಯಾಗಿದೆ. ಈ ರಸ್ತೆ ಅಪಘಾತದಲ್ಲಿ ಪಟ್ಟಣದ ಸಮೀಪದ ಬಿಳಿಕಿ ಗ್ರಾಮದ ರಾಕೇಶ್ ಎಂಬ ವ್ಯಕ್ತಿಯ ತಲೆಗೆ ತೀವ್ರವಾದ ಪೆಟ್ಟಾಗಿದ್ದು ಕಾಲು ಮುರಿದು ಸ್ಥಿತಿ ಗಂಭೀರವಾಗಿದೆ. ಅದೇ…

Read More

ಎರಡು ದಿನಗಳಿಂದ ನಾಪತ್ತೆಯಾಗಿದ್ದ ನಾಲ್ಕು ವರ್ಷದ ಮಗು ಕೆರೆಯಲ್ಲಿ ಶವವಾಗಿ ಪತ್ತೆ|death

ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ನಾಲ್ಕು ವರ್ಷದ ಮಗು ಇಂದು ಮನೆಯ ಸಮೀಪದ ಕೆರೆಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಶಿವಮೊಗ್ಗದ ರಾಗಿಗುಡ್ಡದಲ್ಲಿ ನಡೆದಿದೆ. ಎರಡು ದಿನಗಳ ಹಿಂದೆ ಮನೆಯ ಬಳಿ ಆಟವಾಡುತಿದ್ದ ಮಗು ಕಾಣೆಯಾಗಿತ್ತು,ಎಲ್ಲಾ ಕಡೆ ವಿಚಾರಿಸಿ ಕೊನೆಗೆ ಪೊಲೀಸ್ ಠಾಣೆಯಲ್ಲಿ ಅವರ ತಂದೆ ದೂರು ಸಲ್ಲಿಸಿದ್ದರು. ಇಂದು ಮಗುವಿನ ಮೃತ ದೇಹ ಮನೆಯ ಸಮೀಪದ ಕೆರೆಯಲ್ಲಿ ತೇಲಿ ಬಂದಿದೆ. ರಾಗಿಗುಡ್ಡದ 7 ನೇ ತಿರುವಿನಲ್ಲಿ ಮಹ್ಮದ್ ಸೂಫಿಯನ್ ಖುರೇಷಿ ಎಂಬುವರು ತಮ್ಮ ಮೊದಲನೇ ಮಗು ಮೊಹ್ಮದ್ ಮನ್ನನ್…

Read More

ಹೆದ್ದಾರಿಪುರ : ಗ್ರಾಪಂ ಉಪ ಚುನಾವಣೆಗೆ ಬೇಕರಿ ಸುರೇಶ್ ನಾಮಪತ್ರ ಸಲ್ಲಿಕೆ|election

ರಿಪ್ಪನ್‌ಪೇಟೆ : ಇಲ್ಲಿನ ಹೆದ್ದಾರಿಪುರ ಗ್ರಾಮ ಪಂಚಾಯತ್ ನ ತಳಲೆ ವಾರ್ಡ್ ನ ಉಪ ಚುನಾವಣೆಗೆ ಬೇಕರಿ ಸುರೇಶ್ ನಾಮಪತ್ರ ಸಲ್ಲಿಸಿದ್ದಾರೆ.ಫೆ.25 ರ ಶನಿವಾರ ಚುನಾವಣೆ ನಡೆಯಲಿದೆ. ಹೆದ್ದಾರಿಪುರ ಗ್ರಾಮ ಪಂಚಾಯತ್ ನ ತಳಲೆ ವಾರ್ಡ್ ನ ಸದಸ್ಯರಾಗಿದ್ದ ಚೂಡಾಮಣಿ ರವರು ಇತ್ತೀಚಿಗೆ ನಿಧನರಾದ ಹಿನ್ನಲೆಯಲ್ಲಿ ಉಪ ಚುನಾವಣೆ ನಡೆಯುತಿದ್ದು ಈ ಸ್ಥಾನಕ್ಕೆ ಕ್ರೀಯಾಶೀಲ ಯುವಕ ಬೇಕರಿ ಸುರೇಶ್ ಪಕ್ಷೇತರರಾಗಿ ಉಮೇದುವಾರಿಕೆ ಸಲ್ಲಿಸಿದ್ದಾರೆ. ಇಂದು ಹೆದ್ದಾರಿಪುರ ಗ್ರಾಮ ಪಂಚಾಯತಿಯಲ್ಲಿ ಚುನಾವಣಾಧಿಕಾರಿ ಸತೀಶ್ ರವರಲ್ಲಿ ಬೇಕರಿ ಸುರೇಶ್ ನಾಮಪತ್ರ…

Read More

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಎಸ್ ಬಂಗಾರಪ್ಪ ಹೆಸರು ಪರಿಗಣಿಸದೇ ಇರುವುದು ಬೇಸರದ ಸಂಗತಿ – ಜಿಲ್ಲಾ ಎಸ್ ಬಂಗಾರಪ್ಪ ಅಭಿಮಾನಿಗಳ ಸಂಘ|airport

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಎಸ್ ಬಂಗಾರಪ್ಪ ಹೆಸರು ಪರಿಗಣಿಸದೇ ಇರುವುದು ಬೇಸರದ ಸಂಗತಿ – ಜಿಲ್ಲಾ ಎಸ್ ಬಂಗಾರಪ್ಪ ಅಭಿಮಾನಿಗಳ ಸಂಘ ಶಿವಮೊಗ್ಗ : ಈ ನಾಡು ಕಂಡ ಧೀಮಂತ ನಾಯಕ ಎಸ್ ಬಂಗಾರಪ್ಪ. ರಾಜ್ಯದ ಹಿಂದುಳಿದ ವರ್ಗಗಳ ಹಿತಾಸಕ್ತಿ ಕಾಯುವಲ್ಲಿ ಅವರ ಪಾತ್ರ ಮಹತ್ವದ್ದಾಗಿದೆ. ಅವರಿಗೆ ಸೂಕ್ತ ಗೌರವ ನೀಡಲು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸರ್ಕಾರ ಅವರ ಹೆಸರಿಡಬೇಕು ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ಎಸ್ ಬಂಗಾರಪ್ಪ ಅಭಿಮಾನಿ ಸಂಘದ ಜಿಲ್ಲಾಧ್ಯಕ್ಷ ಅಮೀರ್…

Read More

ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದ ಚಿರತೆ – ನಿಟ್ಟುಸಿರು ಬಿಟ್ಟ ಗ್ರಾಮಸ್ಥರು|leopard

ಶಿವಮೊಗ್ಗ ತಾಲೂಕಿನ ಮಲ್ಲಾಪುರ ಗ್ರಾಮದಲ್ಲಿ ಅರಣ್ಯ ಇಲಾಖೆಯಿಟ್ಟಿದ್ದ ಬೋನಿಗೆ ಚಿರತೆಯೊಂದು ಸೆರೆ ಸಿಕ್ಕಿರುವ ಘಟನೆ ನಡೆದಿದೆ. ಕಳೆದ ಕೆಲ ದಿನಗಳಿಂದ ಮಲ್ಲಾಪುರ ಗ್ರಾಮದ ಸುತ್ತಮುತ್ತಲಿನ ಹೊಲಗದ್ದೆ, ತೋಟಗಳಲ್ಲಿ ಎರಡು ಚಿರತೆಗಳು ಓಡಾಡುತ್ತಿದ್ದವು. ಇದು ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿತ್ತು. ಚಿರತೆಗಳ ಸೆರೆಗೆ ಅರಣ್ಯ ಇಲಾಖೆಗೆ ಮನವಿ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಆಯನೂರು ಅರಣ್ಯ ಇಲಾಖೆ ಸಿಬ್ಬಂದಿಗಳು ಚಿರತೆಗಳು ಓಡಾಡುವ ಸ್ಥಳದಲ್ಲಿ ಬೋನೊಂದನ್ನು ಇರಿಸಿದ್ದರು. ಮುಂಜಾನೆ ಚಿರತೆ ಬೋನಿನಲ್ಲಿ ಬಿದ್ದಿರುವುದು ಬೆಳಕಿಗೆ ಬಂದಿದೆ. ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿಗಳು ಬೋನಿನಲ್ಲಿ…

Read More

ಅಪರೂಪದ ವನ್ಯಜೀವಿ ಮಚ್ಚೆ ಗೂಬೆಗಳ ಅಕ್ರಮ ಮಾರಾಟಕ್ಕೆ ಯತ್ನ – ಮಾಲು ಸಮೇತ ಇಬ್ಬರ ಬಂಧನ|athin blevin

ಅಪರೂಪದ ವನ್ಯಜೀವಿ ಮಚ್ಚೆ ಗೂಬೆಗಳ ಅಕ್ರಮ ಮಾರಾಟಕ್ಕೆ ಯತ್ನ – ಮಾಲು ಸಮೇತ ಇಬ್ಬರ ಬಂಧನ ಅಪರೂಪದದ ವನ್ಯಜೀವಿ ಮಚ್ಚೆ ಗೂಬೆಗಳ ಅಕ್ರಮ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು  ಮಾಲು ಸಮೇತ ಬಂಧಿಸಿರುವ ಘಟನೆ ಶಿವಮೊಗ್ಗ ತಾಲೂಕಿನ ಕಲ್ಲೂಪುರ ಗ್ರಾಮದಲ್ಲಿ ನಡೆದಿದೆ. ಮಚ್ಚೆ ಗೂಬೆ(ಅಥೀನ್ ಬ್ಲೆವಿನ್ )ಯನ್ನು ಅಕ್ರಮ ಮಾರಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ದೊರೆತ ಹಿನ್ನಲೆಯಲ್ಲಿ ಸಾಗರ ಪೊಲೀಸ್ ಅರಣ್ಯ ಸಂಚಾರಿ ದಳದ ಪೊಲೀಸ್  ಸಬ್ ಇನ್ಸ್ಪೆಕ್ಟರ್ ವಿನಾಯಕ ನೇತ್ರತ್ವದಲ್ಲಿ ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು…

Read More

ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು|death

ಶಿವಮೊಗ್ಗ : ಸ್ನೇಹಿತರೊಂದಿಗೆ ನದಿಗೆ ಈಜಲು ತೆರಳಿದ್ದ ಬಾಲಕ ತುಂಗಾ ನದಿಯ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಯೂಸಫ್ (14) ಮೃತಪಟ್ಟಿರುವ ಯುವಕನಾಗಿದ್ದಾನೆ. ಯೂಸುಫ್ ಇಂದು ಮೂವರು ಸ್ನೇಹಿತರೊಂದಿಗೆ ನದಿಗೆ ಈಜಲು ಹೋಗಿ ನೀರು ಪಾಲಾಗಿದ್ದನು,ಆತನ ಸ್ನೇಹಿತರು ಸ್ಥಳೀಯರಿಗೆ ಮಾಹಿತಿ ಮುಟ್ಟಿಸಿದ್ದಾರೆ. ನಂತರ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳೀಯರ ಸಹಕಾರದಿಂದ ಹುಡುಕಾಟ ಆರಂಭಿಸಿದ್ದರು ಸುಮಾರು ಒಂದುವರೆ ಗಂಟೆ ಹುಡುಕಾಟ ನಡೆಸಿದ ನಂತರ ಮೃತದೇಹ ದೊರಕಿದೆ.ತಕ್ಷಣವೇ ಮೆಗ್ಗಾನ್ ಗೆ ಕರೆದೊಯ್ಯಲಾಗಿದೆ. ವೈದ್ಯರು ಆತನ ಸಾವನ್ನ…

Read More

ಹೊಸನಗರ : ಜೇನುನೊಣ ದಾಳಿ – ಒಂದೇ ಕುಟುಂಬದ 6 ಮಂದಿಗೆ ಗಾಯ | ಮೆಗ್ಗಾನ್ ಗೆ ದಾಖಲು

ಹೊಸನಗರ : ಜೇನು ಹುಳುಗಳ ದಾಳಿಯಿಂದ 6 ಜನ ಗಾಯಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ಸಮೀಪದ ಮಳಲಿ ಗ್ರಾಮದಲ್ಲಿ ನಡೆದಿದೆ. ಕೋಣಂದೂರು ಮೂಲದ ಒಂದೇ ಕುಟುಂಬದ 9 ಜನ ಮಳಲಿ ಗ್ರಾಮದಲ್ಲಿ ಫಿಶಿಂಗ್ ಮಾಡಲು ತೆರಳಿದ್ದಾರೆ.ಮಧ್ಯಾಹ್ನ ಕೆರೆಯ ಏರಿಯ ಮೇಲೆ ಊಟ ಮಾಡುತ್ತಿರುವಾಗ ಏಕಾಏಕಿ ಜೇನುನೊಣಗಳು ದಾಳಿ ಮಾಡಿದ್ದು ಆರು ಜನರಿಗೆ ಗಂಭೀರ ಗಾಯಗಳಾಗಿವೆ. ಕೋಣಂದೂರಿನ ಫಯಾಜ್ ಮತ್ತು ಇಂತಿಯಾಜ್ ಕುಟುಂಬ ಭಾನುವಾರವಾದ ಹಿನ್ನಲೆಯಲ್ಲಿ ಕುಟುಂಬದೊಂದಿಗೆ ಮಳಲಿ ಗ್ರಾಮದಲ್ಲಿ ಫಿಶಿಂಗ್ ಮಾಡಲು ತೆರಳಿದ್ದರು ಎನ್ನಲಾಗುತ್ತಿದೆ. ಗಾಯಾಳುಗಳನ್ನು…

Read More

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರ ಕವಿ ಕುವೆಂಪು ಹೆಸರು ಫಿಕ್ಸ್ – ಯಡಿಯೂರಪ್ಪ ಘೋಷಣೆ|airport

ಶಿವಮೊಗ್ಗದ ಸೋಗಾನೆಯಲ್ಲಿ ನಿರ್ಮಾಣವಾಗಿರುವ ವಿಮಾನ ನಿಲ್ಧಾಣಕ್ಕೆ ರಾಷ್ಟ್ರಕವಿ ಕುವೆಂಪುರವರ ಹೆಸರನ್ನು ಇಡಲಾಗುವುದು ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಘೋಷಿಸಿದ್ಧಾರೆ. ಈ ಸಂಬಂಧ ಶಿವಮೊಗ್ಗದಲ್ಲಿ ಮಾತನಾಡಿದ ಮಾಜಿ ಸಿಎಂ ಬಿಎಸ್​ವೈ ಫೆಬ್ರವರಿ 27 ರಂದು ಪ್ರಧಾನಿ ನರೇಂದ್ರ ಮೋದಿ ವಿಮಾನ ನಿಲ್ದಾಣವನ್ನು ಉದ್ಘಾಟಿಸಲಿದ್ದಾರೆ..ಈ ಸಂಬಂಧ ವಿಮಾನ ನಿಲ್ಧಾಣಕ್ಕೆ ರಾಷ್ಟ್ರಕವಿ ಕುವೆಂಪುರವರ ಹೆಸರನ್ನು ಇಡಲು ತೀರ್ಮಾನಿಸಿದ್ದೇವೆ.  ಮುಂದಿನ ಅಧಿವೇಶನದಲ್ಲಿ ಈ ಬಗ್ಗೆ ಸರ್ವಾನುಮತದ ತೀರ್ಮಾನವನ್ನು ಕೈಗೊಂಡು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಕಳಿಸಲಾಗುವುದು. ನರೇಂದ್ರ ಮೋದಿಯವರೇ ಈ ಹೆಸರನ್ನು ಘೋಷಿಸಲಿದ್ಧಾರೆ…

Read More