ಶಿವಮೊಗ್ಗದಿಂದ ವಿಮಾನ ಹಾರಾಟ ಪ್ರಾರಂಭ|ಯಾವೆಲ್ಲಾ ಮಾರ್ಗ???ಎಷ್ಟಿದೆ ಟಿಕೆಟ್ ರೇಟ್..??? ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಈ ಸುದ್ದಿ ನೋಡಿ|airport

ಈ ತಿಂಗಳ ಅಂತ್ಯದಲ್ಲಿ ವಿಮಾನಯಾನ ಸೇವೆ ಆರಂಭವಾಗುವ ನಿರೀಕ್ಷೆಯಿದೆ. ಮೊದಲಿಗೆ ಶಿವಮೊಗ್ಗ – ಬೆಂಗಳೂರು ನಡುವೆ ನಿತ್ಯ ವಿಮಾನ ಹಾರಾಡಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಅವರು ತಿಳಿಸಿದರು.




ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ ರಾಘವೇಂದ್ರ, ಆರು ಕೋಟಿ ರೂ. ವೆಚ್ಚದ ಮೂರು ಅಗ್ನಿಶಾಮಕ ವಾಹನಗಳು ಬರುವವರೆಗೆ ಕ್ಲಿಯರೆನ್ಸ್ ನೀಡುವುದಿಲ್ಲ ಎಂದು ವಿಮಾನಯಾನ ಸಚಿವಾಲಯ ಸೂಚನೆ ನೀಡಿತ್ತು. ಈಗ ಅದು ಕೂಡ ವಾರದೊಳಗೆ ಬರುತ್ತಿದ್ದು, ಈ ತಿಂಗಳ ಕೊನೆಯೊಳಗೆ ಅಧಿಕೃತವಾಗಿ ವಿಮಾನ ಹಾರಾಟ ಪ್ರಾರಂಭವಾಗಲಿದೆ ಎಂದರು.

ಇಂಡಿಗೋ ವಿಮಾನಯಾನ ಕಂಪನಿಯೊಂದಿಗೆ ದೆಹಲಿಯಲ್ಲಿ ಮಾತುಕತೆ ನಡೆಯುತ್ತಿದೆ. ನೀತಿ ಸಂಹಿತೆ ಜಾರಿಗು ಮುನ್ನ ವಿಮಾನ ಹಾರಾಟ ಆರಂಭವಾಗಬೇಕು ಎಂಬ ಒತ್ತಾಸೆ ಇತ್ತು. ಅದರಂತೆ ಇನ್ನೊಂದು ವಾರದೊಳಗೆ ಶಿವಮೊಗ್ಗ ವಿಮಾನ ನಿಲ್ದಾಣದಿಂದ ವಿಮಾನ ಹಾರಾಟ ಶುರುವಾಗುವ ಸಂಭವವಿದೆ ಎಂದು ತಿಳಿಸಿದರು.




ಪ್ರತಿ ಟಿಕೆಟ್ ಗೆ ₹500 ಅನುದಾನ

ಪ್ರತಿ ಟಿಕೆಟ್ ಗೆ ರಾಜ್ಯ ಸರ್ಕಾರ ೫೦೦ ರೂ. ಅನುದಾನವನ್ನು ಇಂಡಿಗೋ ಏರ್ ಲೈನ್ಸ್ ಗೆ ನೀಡುತ್ತಿದ್ದು, ಬೆಂಗಳೂರು -ಶಿವಮೊಗ್ಗ ಹಾರಾಟಕ್ಕೆ ಇಂಡಿಗೋ ವಿಮಾನಯಾನ ಸಂಸ್ಥೆಯೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದರು.

ಮಾ.25 ರಂದು ರಾಜ್ಯಕ್ಕೆ ಆಗಮಿಸುವ ಪ್ರಧಾನಿ ಮೋದಿ ದಾವಣಗೆರೆ ಕಾರ್ಯಕ್ರಮ ಮುಗಿಸಿ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಇಲ್ಲಿಂದ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಇದು ವಿಮಾನ ನಿಲ್ದಾಣದ ಪ್ರಾಮುಖ್ಯತೆ ಸೂಚಿಸುತ್ತದೆ ಎಂದು ತಿಳಿಸಿದರು.




ಶಾಸಕರಾದ ಕೆ.ಎಸ್. ಈಶ್ವರಪ್ಪ, ಡಿ.ಎಸ್. ಅರುಣ್, ಸೂಡಾ ಅಧ್ಯಕ್ಷ ನಾಗರಾಜ್, ಬಿಜೆಪಿ ನಗರಾಧ್ಯಕ್ಷ ಜಗದೀಶ್, ಪ್ರಮುಖರಾದ ಕೆ.ಇ. ಕಾಂತೇಶ್, ಶಿವರಾಜ್, ಜ್ಞಾನೇಶ್ವರ್, ರಾಮಣ್ಣ, ಹೃಷಿಕೇಶ್ ಪೈ. ಇ. ವಿಶ್ವಾಸ್, ಅಣ್ಣಪ್ಪ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *