ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾಮದಲ್ಲಿ ಅಪ್ಪು ಅಭಿಮಾನಿ ಬಳಗದವರಿಂದ ಇಂದು ಸಂಭ್ರಮದೊಂದಿಗೆ ಪುನೀತ್ ರಾಜ್ಕುಮಾರ್ ರವರ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಕೇಕ್ ಕತ್ತರಿಸಿ ಅನ್ನ ಸಂತರ್ಪಣೆ ನಡೆಸುವ ಮೂಲಕ ಆಚರಿಸಲಾಯಿತು.
ಹುಟ್ಟುಹಬ್ಬದ ಅಂಗವಾಗಿ ಹುಂಚ ಗ್ರಾಮದ ಪುನೀತ್ ಕಟ್ಟಾ ಅಭಿಮಾನಿಗಳಾದ ಯದುನಂದನ್ ಹಾಗೂ ನಾಗೇಶ್ ರವರು ತಮ್ಮ ಹೊಟೇಲ್ ಗೆ ಪುನೀತ್ ರಾಜ್ ಕುಮಾರ್ ಹೊಟೇಲ್ ಎಂದು ಕಳೆದ ವರ್ಷ ನಾಮಕರಣ ಮಾಡಿದ್ದರು ಈ ವರ್ಷ ಪುನೀತ್ ಹುಟ್ಟುಹಬ್ಬದ ಅಂಗವಾಗಿ ತಮ್ಮ ಹೊಟೇಲ್ ನಲ್ಲಿ ಕೇಕ್ ಕತ್ತರಿಸಿ ಸುಮಾರು 400 ಜನರಿಗೆ ಉಚಿತವಾಗಿ ಬಿರಿಯಾನಿ ಹಂಚಿ ಸಂಭ್ರಮವನ್ನು ಹಂಚಿಕೊಂಡರು.
ಇದೇ ಸಂಧರ್ಭದಲ್ಲಿ ಅಪ್ಪು ಅಭಿಮಾನಿ ಫೋಟೋಗ್ರಾಫರ್ ಅಭಿಷೇಕ್ ಗೊರನಹಳ್ಳಿ ರವರು ಅಪ್ಪು ಭಾವಚಿತ್ರವನ್ನು ಯದುನಂದನ್ ರವರಿಗೆ ಕೊಡುಗೆಯಾಗಿ ನೀಡಿದರು.
ಈ ಸಂಧರ್ಭದಲ್ಲಿ ಈರನಬೈಲ್ ಸತೀಶ್ , ಯುವರಾಜ್ ,ಗಣೇಶ್ ,ಬೆನಕಪ್ಪ , ಧರ್ಮಪ್ಪ ಹಾಗೂ ಊರಿನ ಗ್ರಾಮಸ್ಥರು ಇದ್ದರು.
ರಿಪ್ಪನ್ಪೇಟೆ ಗೇರುಬೀಜ ಕಾರ್ಖಾನೆ ಕಾರ್ಮಿಕರಿಂದ ಅಪ್ಪು ಜನ್ಮ ದಿನಾಚರಣೆ
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ಪೇಟೆ ಸಮೀಪದ ಬಾಳೂರು ಗ್ರಾಮದಲ್ಲಿ ಮಹಾಮಾಯೆ ಗೇರುಬೀಜ ಕಾರ್ಖಾನೆ ನೌಕರರು ಮತ್ತು ಚಿತ್ರನಟ ಅಪ್ಪು ಅಭಿಮಾನಿ ಬಳಗದವರಿಂದ ಇಂದು ಸಂಭ್ರಮದೊಂದಿಗೆ ಪುನೀತ್ ರಾಜ್ಕುಮಾರ್ ರವರ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸಿದರು.
ಗೇರುಬೀಜ ಫ್ಯಾಕ್ಟರಿಯಲ್ಲಿ ಕಟ್ಟಾ ಅಪ್ಪು ಅಭಿಮಾನಿ ಪುನೀತ್ ಎಂಬುವರು ಚಿತ್ರನಟ ಪುನೀತ್ ರಾಜ್ಕುಮಾರ್ರವರ ಭಾವಚಿತ್ರವನ್ನು ಇಟ್ಟು ಹುಟ್ಟುಹಬ್ಬವನ್ನು ಸಿಬ್ಬಂದಿಗಳೊಂದಿಗೆ ಅದ್ದೂರಿಯಾಗಿ ಸಡಗರ ಸಂಭ್ರಮದೊಂದಿಗೆ ಆಚರಿಸಿ ಕೇಕ್ ಕತ್ತರಿಸಿ ಮರೆಯದ ಮಾಣಿಕ್ಯ ಚಿತ್ರನಟ ಪುನೀತ್ ರಾಜ್ಕುಮಾರ್ ಬಗ್ಗೆ ಅಭಿಮಾನ ಮೆರೆದರು.
ಮಾಹಾಮಾಯೆ ಗೇರು ಬೀಜ ಫ್ಯಾಕ್ಟರಿಯ ಮಾಲೀಕರಾದ ಡಿ.ನರಸಿಂಹಕಾಮತ್, ಶೈಲಾ ಕಾಮತ್,ನಾಗರಾಜ್, ಕಟ್ಟಾ ಅಭಿಮಾನಿ ಪುನೀತ್,ಉಪೇಂದ್ರಬಾಳಿಗಾ,ರಮೇಶ್ ಪೈ, ಗಿರೀಶ್, ದಿನೇಶ್,ಇನ್ನೂ ಮುಂತಾದ ಗೇರುಬೀಜ ಕಾರ್ಖಾನೆಯ ನೌಕರವರ್ಗ ಹಾಜರಿದ್ದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್