ಆಗುಂಬೆ : ಪ್ರವಾಸಿಗರನ್ನು ಕರೆದೊಯ್ಯುತಿದ್ದ ಖಾಸಗಿ ಬಸ್ ಆಗುಂಬೆ ಘಾಟಿಯ 12 ನೇ ತಿರುವಿನಲ್ಲಿ ಬ್ರೇಕ್ ವಿಫಲವಾಗಿಮರಕ್ಕೆ ಡಿಕ್ಕಿ ಹೊಡೆದ ಘಟನೆ ಇಂದು ಸಂಜೆ ನಡೆದಿದೆ.
ಘಾಟಿ ರಸ್ತೆಯ 11ನೇ ತಿರುವಿನಲ್ಲಿ ಖಾಸಗಿ ಮಿನಿ ಬಸ್ ಬ್ರೇಕ್ ವೈಫಲ್ಯಗೊಂಡಿದ್ದು ಚಾಲಕನ ಸಮಯ ಪ್ರಜ್ಞೆಯಿಂದ ಸಂಭವನೀಯ ದೊಡ್ಡ ದುರಂತ ತಪ್ಪಿದೆ. 12ನೇ ತಿರುವಿನಲ್ಲಿ ಮರಕ್ಕೆ ಡಿಕ್ಕಿ ಹೊಡೆದು ಬಸ್ ನಿಂತಿದೆ.
ಬಸ್ ನಲ್ಲಿ ಮಹಿಳೆಯರು ಮಕ್ಕಳು ಸೇರಿ 20 ಜನರಿದ್ದು ಹಲವರಿಗೆ ಗಾಯಗಳಾಗಿದ್ದು ಪ್ರಾಣಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
ಗಾಯಾಳುಗಳನ್ನು ಹೆಬ್ರಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಬಸ್ ನಲ್ಲಿದ್ದವರೆಲ್ಲಾ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕೋಟ ಪಡುಕೆರೆ ಗ್ರಾಮದ ನಿವಾಸಿಗಳು ಎನ್ನಲಾಗುತಿದ್ದು ನಿಶ್ಚಿತಾರ್ಥ ಕಾರ್ಯಕ್ರಮಕ್ಕಾಗಿ ಕೊಪ್ಪ ಬಂದು ಹಿಂದಿರುಗುತಿದ್ದಾಗ ಈ ಅಪಘಾತ ಸಂಭವಿಸಿದೆ.
ಬಸ್ ಚಾಲಕನ ಸಮಯ ಪ್ರಜ್ಞೆ ಮತ್ತು ಬ್ರೇಕ್ ವಿಫಲಗೊಂಡ ಬಸ್ಸನ್ನು ನಿಯಂತ್ರಿಸಿ ಪ್ರಯಾಣಿಕರ ಪ್ರಾಣ ಉಳಿಸಿದ ಚಾಣಾಕ್ಷತನವನ್ನು ಎಲ್ಲರೂ ಮೆಚ್ಚಿ ಕೃತಜ್ಞತೆ ಸಲ್ಲಿಸಿದ್ದಾರೆ.
ಕಡವೆ ಬೇಟೆ ಮಾಡಿ ಮಾಂಸ ಕತ್ತರಿಸುತ್ತಿದ್ದಾಗಲೇ ದಾಳಿ! ಮೂವರ ಬಂಧನ | 70 ಕೆ.ಜಿ. ಮಾಂಸ , ಬಂದೂಕು ಜಪ್ತಿ…
ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ One-month skill development training on bakery product preparation…
ತೀರ್ಥಹಳ್ಳಿ ಪೊಲೀಸ್ ಠಾಣೆಯ ಗಣಪತಿ ವಿಸರ್ಜನೆ ; ಚಂಡೆ ಸದ್ದಿಗೆ ಡಿವೈಎಸ್ಪಿ ಭಾನುಪ್ರಕಾಶ್, ಸಿಪಿಐ ಇಮ್ರಾನ್ ಹೆಜ್ಜೆ Thirthahalli police…
ಕೋಡೂರು ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಮನೆಗೆ ಬೆಂಕಿ : ಲಕ್ಷಾಂತರ ರೂ. ನಷ್ಟ House fire reported at Keelambi…
ಶಾಸಕರ ಜೊತೆ ಟ್ರಾಫಿಕ್ ಪೊಲೀಸರ ಡ್ಯಾನ್ಸ್; ವಿಡಿಯೋ ವೈರಲ್, ಇಬ್ಬರ ವರ್ಗಾವಣೆ Two traffic police personnel in Shivamogga…
ಬಾವಿಗೆ ಬಿದ್ದು ನಿವೃತ್ತ ಕುಲಪತಿ ಪ್ರೊ. ಎಂ.ಕೆ. ನಾಯ್ಕ್ ಸಾವು Retired Vice Chancellor Prof. M.K. Naik, 63,…