ರಸ್ತೆ ಅಪಘಾತದಲ್ಲಿ ಕಾಡುಕೋಣ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರದ ಹೊರವಲಯದಲ್ಲಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.
ಸಾಗರ ಮತ್ತು ಹೊಸನಗರದ ಸುತ್ತಮುತ್ತ ಕಾಡು ಕೋಣಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತವೆ. ಕಾಡುಕೋಣಗಳ ವಲಯವಾಗಿದ್ದರಿಂದ ವಾಹನಗಳಿಗೆ ಸಿಲುಕಿ ಕಾಡು ಪ್ರಾಣಿಗಳು ಸಾವನ್ನಪ್ಪುತ್ತಿರುವ ಘಟನೆ ಹೆಚ್ಚುತಿದೆ.
ಸಾಗರ ಮತ್ತು ಸಿಗಂದೂರು ರಸ್ತೆಯಲ್ಲಿ ಸುಮಾರು 5 ವರ್ಷದ ಗಂಡು ಕಾಡುಕೋಣ ರಕ್ತ ಕಾರಿಕೊಂಡು ರಸ್ತೆಯ ಬಲಭಾಗಕ್ಕೆ ಬಿದ್ದಿದೆ. ಲಾರಿ ಅಥವಾ ದೊಡ್ಡ ವಾಹನಗಳೇ ಈ ಕಾಡು ಪ್ರಾಣಿಯ ಸಾವಿಗೆ ಕಾರಣವಿರಬಹುದು ಎಂದು ಅಂದಾಜಿಸಲಾಗಿದೆ.
ಆವಿನಹಳ್ಳಿ ಗ್ರಾಮಪಂಚಾಯಿತಿ ಕಲ್ಮನೆ ಗ್ರಾಮದಲ್ಲಿ ಇಂದು ಬೆಳಗ್ಗಿನ ಜಾವದಲ್ಲಿ ವಾಹನವೊಂದು ಡಿಕ್ಕಿ ಹೊಡೆದುಕೊಂಡು ಹೋಗಿದ್ದು ಕಾಡುಕೋಣ ಸಾಮಾನ್ಯವಾಗಿ ಸಣ್ಣಪುಟ್ಟ ವಾಹನಗಳಿಗೆ ಸಾವನ್ನಪ್ಪುವುದು ಬಹಳ ಕಡಿಮೆ ಎನ್ನಬಹುದು.ಆದ್ದರಿಂದ ಬೃಹತ್ ವಾಹನ ಡಿಕ್ಕಿಯಾಗಿ ಕಾಡು ಕೋಣ ಮೃತಪಟ್ಟಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಸ್ಥಳಕ್ಕೆ ಅರಣ್ಯ ಇಲಾಖೆಯವರು ಧಾವಿಸಿದ್ದಾರೆ.
ರ್ಯಾಂಕ್ಸ್ ಇನ್ಸ್ಟಿಟ್ಯೂಟ್–ಜೆಸಿಐ ಹೊಸನಗರ ಡೈಮಂಡ್ ಸಹಯೋಗದಲ್ಲಿ ‘Gen Z Connect’ ತರಬೇತಿ ಯಶಸ್ವಿ Ranks Institute–JCI Hosanagara Diamond Hosts…
ಬೆಳ್ಳೂರು GHPSನಲ್ಲಿ ಸ್ವಾತಂತ್ರ್ಯ ಸಂಭ್ರಮ: ಶಾಲೆಗೆ ಕೊಡುಗೆಗಳ ಮಹಾಪೂರ! Satish Ripponpete donated a TV to GHPS Bellur…
ಗರ್ತಿಕೆರೆಯಲ್ಲಿ ಮಾರಣಾಂತಿಕ ಹಲ್ಲೆ: ಅಟ್ಟಹಾಸ ಮೆರೆದಿದ್ದ ಆರೋಪಿಯ ಹೆಡೆಮುರಿ ಕಟ್ಟಿದ ಪೊಲೀಸರು Police arrest Raghavendra alias Apple Raghu…
ಅಕ್ರಮ ಗೋ ಸಾಗಾಟ ತಡೆಯಲು ಹೋದ ಬಜರಂಗದಳ ಕಾರ್ಯಕರ್ತರ ಮೇಲೆ ಭೀಕರ ಹಲ್ಲೆ - ಬಿ ವೈ ವಿಜಯೇಂದ್ರ ಆಕ್ರೋಶ…
ಗರ್ತಿಕೆರೆಯಲ್ಲಿ ವ್ಯಕ್ತಿಯ ಮೇಲೆ ಕಬ್ಬಿಣದ ರಾಡ್ ನಿಂದ ಮಾರಣಾಂತಿಕ ಹಲ್ಲೆ; ತಲೆಯ ಮೇಲೆ ಕಾಲಿಟ್ಟು ಅಟ್ಟಹಾಸ ಮೆರೆದ ಭೂಫ A…
ಚುಂಚಾದ್ರಿ ಮಹಿಳಾ ಒಕ್ಕಲಿಗರ ವೇದಿಕೆಯಿಂದ ಸ್ವಾತಂತ್ರ್ಯ ದಿನಾಚರಣೆ Ripponpete Chunchadri Mahila Okkaligar Vedike celebrated the 80th Independence…