ರಸ್ತೆ ಅಪಘಾತದಲ್ಲಿ ಕಾಡುಕೋಣ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರದ ಹೊರವಲಯದಲ್ಲಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.
ಸಾಗರ ಮತ್ತು ಹೊಸನಗರದ ಸುತ್ತಮುತ್ತ ಕಾಡು ಕೋಣಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತವೆ. ಕಾಡುಕೋಣಗಳ ವಲಯವಾಗಿದ್ದರಿಂದ ವಾಹನಗಳಿಗೆ ಸಿಲುಕಿ ಕಾಡು ಪ್ರಾಣಿಗಳು ಸಾವನ್ನಪ್ಪುತ್ತಿರುವ ಘಟನೆ ಹೆಚ್ಚುತಿದೆ.
ಸಾಗರ ಮತ್ತು ಸಿಗಂದೂರು ರಸ್ತೆಯಲ್ಲಿ ಸುಮಾರು 5 ವರ್ಷದ ಗಂಡು ಕಾಡುಕೋಣ ರಕ್ತ ಕಾರಿಕೊಂಡು ರಸ್ತೆಯ ಬಲಭಾಗಕ್ಕೆ ಬಿದ್ದಿದೆ. ಲಾರಿ ಅಥವಾ ದೊಡ್ಡ ವಾಹನಗಳೇ ಈ ಕಾಡು ಪ್ರಾಣಿಯ ಸಾವಿಗೆ ಕಾರಣವಿರಬಹುದು ಎಂದು ಅಂದಾಜಿಸಲಾಗಿದೆ.
ಆವಿನಹಳ್ಳಿ ಗ್ರಾಮಪಂಚಾಯಿತಿ ಕಲ್ಮನೆ ಗ್ರಾಮದಲ್ಲಿ ಇಂದು ಬೆಳಗ್ಗಿನ ಜಾವದಲ್ಲಿ ವಾಹನವೊಂದು ಡಿಕ್ಕಿ ಹೊಡೆದುಕೊಂಡು ಹೋಗಿದ್ದು ಕಾಡುಕೋಣ ಸಾಮಾನ್ಯವಾಗಿ ಸಣ್ಣಪುಟ್ಟ ವಾಹನಗಳಿಗೆ ಸಾವನ್ನಪ್ಪುವುದು ಬಹಳ ಕಡಿಮೆ ಎನ್ನಬಹುದು.ಆದ್ದರಿಂದ ಬೃಹತ್ ವಾಹನ ಡಿಕ್ಕಿಯಾಗಿ ಕಾಡು ಕೋಣ ಮೃತಪಟ್ಟಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಸ್ಥಳಕ್ಕೆ ಅರಣ್ಯ ಇಲಾಖೆಯವರು ಧಾವಿಸಿದ್ದಾರೆ.
ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು ರಿಪ್ಪನ್ ಪೇಟೆ : ಬಾಳಿನ…
ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ BJP leaders in Sagar have…
ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…
ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…
ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…
ರಿಪ್ಪನ್ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…