ಕಡುಬಡವರ ಮಕ್ಕಳು ಉನ್ನತ ಅಧಿಕಾರಿಗಳಾಗಿ ದೇಶವನ್ನು‌ ಮುನ್ನಡೆಸಬೇಕು : ಆರಗ ಜ್ಞಾನೇಂದ್ರ|police station

ಕಡುಬಡವರ ಮಕ್ಕಳು ಉನ್ನತ ಅಧಿಕಾರಿಗಳಾಗಿ ದೇಶವನ್ನು‌ ಮುನ್ನಡೆಸಬೇಕು ಆ ನಿಟ್ಟಿನಲ್ಲಿ ನಮ್ಮ ಡಬಲ್ ಇಂಜಿನ್ ಸರ್ಕಾರ ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿವೆ ಎಂದು ಕರ್ನಾಟಕ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.




ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರದಲ್ಲಿ ನೂತನ ಪೊಲೀಸ್ ಠಾಣೆ ಹಾಗೂ ವಸತಿ ಗೃಹಗಳ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಅವರು ಪೊಲೀಸ್ ನೂತನ ಕಟ್ಟಡವು ಒಂದು ಕೋಟಿ 80 ಲಕ್ಷ ಹಾಗೂ 12 ಪೊಲೀಸ್ ವಸತಿಗೃಹಗಳನ್ನು 4. ಕೋಟಿ 4 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ.


ಇನ್ನು ಏಳು ತಿಂಗಳಲ್ಲಿ ಹೊಸ ಕಟ್ಟಡದ ಕಾಮಗಾರಿ ಮುಗಿಯಲಿದೆ.ರಾಷ್ಟ್ರೀಯ ರಕ್ಷ ವಿಶ್ವವಿದ್ಯಾಲಯವನ್ನು ಶಿವಮೊಗ್ಗದಲ್ಲಿ ಪ್ರಾರಂಭಿಸಲಾಗುತ್ತದೆ ಇದರಿಂದ ಪೊಲೀಸ್ ಇಲಾಖೆಗೆ ಸೇರಲು ಬೇಕಾದ ಪೂರ್ಣ ತರಬೇತಿಯನ್ನ ನೀಡಲಾಗುತ್ತದೆ ಎಂದು ತಿಳಿಸಿದರು.

                                       
ಪಿಎಸ್ ಐ ಹಗರಣ ನನ್ನ ಗಮನಕ್ಕೆ ಬರದ ಹಾಗೇ ಅಧಿಕಾರಿಗಳು ನಡೆಸಿ ಬಿಟ್ಟಿದ್ದರು,ನಾನು ಗೃಹ ಸಚಿವನಾಗಿ ಅಧಿಕಾರ ವಹಿಸಿಕೊಂಡ 15 ದಿನಗಳೊಳಗೆ ಪಿಎಸ್ ಐ ಪರೀಕ್ಷೆ ನಡೆಸಿಬಿಟ್ಟಿದ್ದರು.

ಒಬ್ಬ ಎಡಿಜಿಪಿ ಹುದ್ದೆಯಲ್ಲಿದ್ದ ಉನ್ನತ ಅಧಿಕಾರಿ ಉತ್ತರಪತ್ರಿಕೆ ತಿದ್ದಿಸುತ್ತಾನೆ ಎಂದರೇ ನಾವೇನು ಹೇಳಬೇಕು ಹೇಳಿ…??ಈ ದೇಶದಲ್ಲಿ ಐಎ ಎಸ್ ಮತ್ತು ಐಪಿಎಸ್ ಅಧಿಕಾರಿಗಳನ್ನು ದೇವರ ಸಮಾನವಾಗಿ ನೋಡುತ್ತಾರೆ….ಉನ್ನತ ಅಧಿಕಾರದಲ್ಲಿದ್ದವರೇ ಭ್ರಷ್ಟಾಚಾರಕ್ಕೆ ಇಳಿದರೆ ದೇಶ ಕಥೆಯೇನು ಎಂದು ಆತಂಕ ವ್ಯಕ್ತಪಡಿಸಿದರು.




ಹಿಂದಿನ ಸರ್ಕಾರದ ಅವಧಿಯಲ್ಲಿ ಪೊಲೀಸ್ ಇಲಾಖೆಯನ್ನ ಕಡೆಗಣಿಸಲಾಗಿತ್ತು .ನಮ್ಮ ಸರ್ಕಾರದ ಅವಧಿಯಲ್ಲಿ ಆದ್ಯತೆ ನೀಡಿ 107 ಪೊಲೀಸ್ ಸ್ಟೇಷನ್ ಗಳನ್ನು ಕಟ್ಟಲಾಗುತ್ತಿದೆ, ನನ್ನ ಅವಧಿಯಲ್ಲಿ ಹಿಜಾಬ್ ,ಕುಕ್ಕರ್ ಬಾಂಬ್, ಸೇರಿದಂತೆ ಹಲವು ಪ್ರಕರಣಗಳು ಆದರೂ ಎಲ್ಲವನ್ನು ಸರಿಯಾಗಿ ನಿಭಾಯಿಸಲಾಗಿದೆ ಎಂದು ತಿಳಿಸಿದರು

ಶಾಸಕ ಹರತಾಳು ಹಾಲಪ್ಪ ಮಾತನಾಡಿ ದೇಶದ ಗಡಿಯನ್ನು ಸೈನಿಕ ಹೇಗೆ ಕಾಯುತ್ತಾನೆಯೋ ಹಾಗೇಯೆ ದೇಶದ ಒಳಗಿನ ನಮ್ಮೆಲ್ಲಾರನ್ನು ಪೊಲೀಸರು ಪ್ರತಿದಿನ ಕಾಯುತ್ತಾರೆ ಅವರಿಗೆ ಸಲ್ಲಬೇಕಾದ ಗೌರವ ಸಮರ್ಪಕವಾಗಿ ಸಲ್ಲದೇ ಇರುವುದು ದುರಂತ.ಸಾಗರ ಪಟ್ಟಣದಲ್ಲಿ ನಡೆದ ಕೆರೆ ಹಬ್ಬ ಹಾಗೂ ಮಾರಿಜಾತ್ರೆ ಯಾವುದೇ ಗೊಂದಲವಿಲ್ಲದೇ ನಡೆಯುವಲ್ಲಿ ಪೊಲೀಸರ ಪಾತ್ರ ಪ್ರಮುಖ ಹಾಗೂ ಪ್ರಶಂಸಾರ್ಹನೀಯ ಎಂದರು.

ಜಿಲ್ಲಾ ರಕ್ಷಣಾಧಿಕಾರಿ ಜಿ ಕೆ ಮಿಥುನ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ಇದೇ ಸಂಧರ್ಭದಲ್ಲಿ ತಾತ್ಕಾಲಿಕ ಪೊಲೀಸ್ ಠಾಣೆಯನ್ನು ಉದ್ಘಾಟಿಸಲಾಯಿತು.


ಕಾರ್ಯಕ್ರಮದಲ್ಲಿ ಸಾಗರ ಎಎಸ್ಪಿ ರೋಹನ್ ಜಗದೀಶ್,ಆನಂದಪುರ ಗ್ರಾಪಂ ಅಧ್ಯಕ್ಷೆ ನೇತ್ರಾವತಿ  ಉಪಸ್ಥಿತರಿದ್ದರು.



ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು ರಿಪ್ಪನ್ ಪೇಟೆ : ಬಾಳಿನ…

9 hours ago

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ BJP leaders in Sagar have…

9 hours ago

ಈದ್ ಮಿಲಾದ್ ಮೆರವಣಿಗೆಯಲ್ಲಿ ಮಾದಕ ವ್ಯಸನ ವಿರುದ್ಧ ಸಮರ: ‘ಗಾಂಜಾ ಬೇಡ ಬ್ರೋ’ ಅಭಿಯಾನಕ್ಕೆ ಭರ್ಜರಿ ಸ್ಪಂದನೆ

ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…

16 hours ago

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…

1 day ago

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ!

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…

2 days ago

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…

2 days ago