ಸ್ವಚ್ಚತೆ ಇಲ್ಲದೆ ದೇಶವಿಲ್ಲ. ಸಚ್ಚತೆಯೆಂಬುದು ದೇಶದ ಪ್ರಗತಿಯಾಗಿದೆ. ಈ ಯೋಜನೆಯು ಜನರ ಹಾಗು ದೇಶದ ಹಿತವನ್ನು ಬಯಸುತ್ತದೆ. ಸ್ವಚ್ಚಂದವಾದ ಪರಿಸರವನ್ನು ಅಥವಾ ವಾತವರಣವನ್ನು ನೋಡಬಹುದು. ಈ ಸ್ವಚ್ಚ ಭಾರತ ಅಭಿಯಾನ ಗಾಂಧೀಜಿಯವರು ಕಂಡ ಕನಸಾಗಿತ್ತು.
ಇಂತಹ ಸ್ವಚ್ಚ ಅಭಿಯಾನವನ್ನು ಹಲವಾರು ರೀತಿಯಲ್ಲಿ ಮಾಡಿರುವುದನ್ನು ನೋಡಿದ್ದೇವೆ ಆದರೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅಮೃತ ಗ್ರಾಮ ಪಂಚಾಯತ್ ಸದಸ್ಯರೊಬ್ಬರು ಸ್ವಚ್ಚ ಅಭಿಯಾನವನ್ನು ವಿಶೇಷ ರೀತಿಯಲ್ಲಿ ನಡೆಸಿದ್ದಾರೆ.ಹೌದು…ಅಮೃತ ಗ್ರಾಪಂ ಸದಸ್ಯರಾದ ಸುರೇಶ್ ರವರು ಸ್ವಚ್ಚ ಅಭಿಯಾನದಡಿಯಲ್ಲಿ ಅಂತಹದೊಂದು ಕೆಲಸ ಮಾಡಿದ್ದಾರೆ.
ಅಮೃತ ಗ್ರಾಮದಲ್ಲಿ ಹಲವಾರು ಜನರಿಗೆ ಕುಡಿಯಲು ನೀರಿಗೆ ಆಶ್ರಯವಾಗಿದ್ದ ಬಾವಿಗೆ ಕಸ ಕಡ್ಡಿಗಳು ಬಿದ್ದು ಕಲುಷಿತವಾಗಿತ್ತು ಇದನ್ನು ಮನಗಂಡ ಗ್ರಾಪಂ ಸದಸ್ಯ ಸುರೇಶ ಸ್ವತಃ ತಾವೇ ಬಾವಿಗೆ ಇಳಿದು ಸ್ವಚ್ಚಗೊಳಿಸಿದ್ದಾರೆ.
ಇವರ ಈ ಕಾರ್ಯ ವೈಖರಿಗೆ ಗ್ರಾಪಂ ಸದಸ್ಯರು ಹಾಗೂ ಸಾರ್ವಜನಿಕರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್