ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಘೋಷಿಸಿದ ತೀ ನಾ ಶ್ರೀನಿವಾಸ್| ನೀರಿನಲ್ಲಿ ಆಟ ಆಡಲು ಹೋದ 12 ವರ್ಷದ ಬಾಲಕಿ ನೀರುಪಾಲು..!!

ನೀರಿನಲ್ಲಿ ಆಟ ಆಡಲು ಹೋದ 12 ವರ್ಷದ ಬಾಲಕಿ ನೀರುಪಾಲು !

ಭದ್ರಾವತಿ : ಕಾಳನಕಟ್ಟೆಯಲ್ಲಿ ಭದ್ರಾ ನದಿಯ ಚಾನೆಲ್  ನೀರಿನಲ್ಲಿ ಆಡಲು ಹೋದ ಬಾಲಕಿ ನೀರು ಪಾಲಾಗಿದ್ದು ಆಕೆಗಾಗಿ ಹುಡುಕಾಟ ಆರಂಭವಾಗಿದೆ.

ಕಾಳನಕಟ್ಟೆಯಲ್ಲಿ ಭದ್ರ ನದಿಯ ಚಾನೆಲ್ ನೀರಿನಲ್ಲಿ ಇದೇ ಗ್ರಾಮದ ಮಹಿಳೆಯೊಬ್ಬರು ಬಟ್ಟೆ ತೊಳೆಯಲು ಮುಂದಾಗಿದ್ದರು. ಈ ವೇಳೆ ನೀರಿನಲ್ಲಿ ಆಟವಾಡಲು ಬಯಸಿದ ಮಹಿಳೆಯ 12 ವರ್ಷದ ಮಗಳು ಚಾನೆಲ್ ನೀರು ಪಾಲಾಗಿದ್ದಾಳೆ.

ತಾಯಿ ಸುಂದರಮ್ಮ ಈಜು ಕಲಿಯತಿದ್ದರಿಂದ ನೀರಿಗಿಳಿದು ಹುಡುಕಾಡಿದ್ದಾರೆ. ಮಗಳು ಸಿಗದ ಕಾರಣ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳದವರು ಭೇಟಿ ನೀಡಿದ್ದಾರೆ. ಶೋಧ ಕಾರ್ಯ ಆರಂಭವಾಗಿದೆ. ಘಟನೆ ಇಂದು ಸಂಜೆ ನಡೆದಿದೆ.


ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಘೋಷಿಸಿದ ತೀ ನಾ ಶ್ರೀನಿವಾಸ್

ಶಿವಮೊಗ್ಗ : ಕಾಂಗ್ರೆಸ್ ಪಕ್ಷಕ್ಕೆ ಮಾಜಿ ಜಿಲ್ಲಾಧ್ಯಕ್ಷ ಮತ್ತು ಪ್ರಭಾವಿ‌ ಮುಖಂಡ ತೀನಾ ಶ್ರೀನಿವಾಸ್ ಗುಡ್ ಬೈ ಹೇಳಿದ್ದಾರೆ. ರೈತರ ಪರ ನಿಲ್ಲುತ್ತಿದ್ದ ತೀ.ನಾ.ಶ್ರೀನಿವಾಸ್ ಕಾಂಗ್ರೆಸ್ ನ ಮೇಲೆ ಗುರುತರ ಆರೋಪ ಮಾಡಿ ರಾಜೀನಾಮೆ ನೀಡಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ತೀ.ನಾ.ಶ್ರೀನಿವಾಸ್ ರೈತರ ಪರ ಹೋರಾಟ ಮಾಡಿಕೊಂಡು ಬಂದಿದ್ದೇನೆ 38 ವರ್ಷ ಈ ಪಕ್ಷಕ್ಕೆ ಜೀವ ಸವಿಸಿದ್ದೇನೆ. ನಾಲ್ಕು ವರ್ಷ ಮಾತ್ರ ಅಧ್ಯಕ್ಷನಾಗಿದ್ದೆ. ಉಳಿದ 34 ವರ್ಷನೂ ಪಕ್ಷಕ್ಕಾಗಿ ದುಡಿದಿದ್ದೇನೆ. ಆದರೆ ಈಗ ರೈತರ ಪರವಾಗಿ ಧ್ವನಿಯಾಗಿ ನಿಲ್ಲಲು ನನಗೆ ಸಾಗರ ವಿಧಾನ ಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಟಿಕೇಟ್ ಕೇಳಿದ್ರೆ ತಿರಸ್ಕರಿಸುತ್ತಾರೆ ಹಾಗಾಗಿ ಕೆಪಿಸಿಸಿ ಅಧ್ಯಕ್ಷರಿಗೆ ನನ್ನ ರಾಜೀನಾಮೆ ಪತ್ರ ಕಳುಹಿಸಿರುವುದಾಗಿ ಹೇಳಿದರು.

ನಿನ್ನೆ ಮೊನ್ನೆ ಬಂದ ಮಧು ಬಂಗಾರಪ್ಪನವರಿಗೆ ಪಕ್ಷದಲ್ಲಿ ಮೂರು ನಾಲ್ಕು ಸ್ಥಾನ ನೀಡಲಾಗುತ್ತಿದೆ. ನಿಜವಾದ ಹೋರಾಟಗಾರ ಕಾಗೋಡು ತಿಮ್ಮಪ್ಪನವರಿಗೆ ಸಾಗರದಲ್ಲಿ ಟಿಕೆಟ್ ನೀಡಿದ್ರೆ ಒಪ್ಪಿಕೊಳ್ಳುತ್ತೇನೆ.ಆದರೆ ಅವರಿಗೆ ಈ ಬಾರಿ ಟಿಕೇಟ್ ನೀಡುವ ಸಾಧ್ಯತೆ ಕಡಿಮೆಯಾಗಿದೆ ಎಂದು ಗುಡುಗಿದರು.

 ಸಾಗರದಲ್ಲಿ ಸ್ವತಂತ್ರ್ಯ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿದ್ದು ಸೊರಬದಲ್ಲೂ ಸ್ವತಂತ್ರ ಅಭ್ಯರ್ಥಿಗಳನ್ನ ಕಣಕ್ಕಿಳಿಸುತ್ತಿದ್ದೇವೆ. ಮುಂದೆ ನಡೆಯುವ ಜಿಲ್ಲಾ ಪಂಚಾಯತ್, ತಾಲೂಕ್ ಪಂಚಾಯತ್ ಚುನಾವಣೆಯಲ್ಲೂ ಅಭ್ಯರ್ಥಿಗಳನ್ನ ಕಣಕ್ಕಿಳಿಸಲಿದ್ದೇವೆ ಎಂದು ಟಕ್ಕರ್ ನೀಡಿದರು. 

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

7 hours ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

23 hours ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

23 hours ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

23 hours ago

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

1 day ago

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

1 day ago