ನೀರಿನಲ್ಲಿ ಆಟ ಆಡಲು ಹೋದ 12 ವರ್ಷದ ಬಾಲಕಿ ನೀರುಪಾಲು !
ಭದ್ರಾವತಿ : ಕಾಳನಕಟ್ಟೆಯಲ್ಲಿ ಭದ್ರಾ ನದಿಯ ಚಾನೆಲ್ ನೀರಿನಲ್ಲಿ ಆಡಲು ಹೋದ ಬಾಲಕಿ ನೀರು ಪಾಲಾಗಿದ್ದು ಆಕೆಗಾಗಿ ಹುಡುಕಾಟ ಆರಂಭವಾಗಿದೆ.
ಕಾಳನಕಟ್ಟೆಯಲ್ಲಿ ಭದ್ರ ನದಿಯ ಚಾನೆಲ್ ನೀರಿನಲ್ಲಿ ಇದೇ ಗ್ರಾಮದ ಮಹಿಳೆಯೊಬ್ಬರು ಬಟ್ಟೆ ತೊಳೆಯಲು ಮುಂದಾಗಿದ್ದರು. ಈ ವೇಳೆ ನೀರಿನಲ್ಲಿ ಆಟವಾಡಲು ಬಯಸಿದ ಮಹಿಳೆಯ 12 ವರ್ಷದ ಮಗಳು ಚಾನೆಲ್ ನೀರು ಪಾಲಾಗಿದ್ದಾಳೆ.
ತಾಯಿ ಸುಂದರಮ್ಮ ಈಜು ಕಲಿಯತಿದ್ದರಿಂದ ನೀರಿಗಿಳಿದು ಹುಡುಕಾಡಿದ್ದಾರೆ. ಮಗಳು ಸಿಗದ ಕಾರಣ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳದವರು ಭೇಟಿ ನೀಡಿದ್ದಾರೆ. ಶೋಧ ಕಾರ್ಯ ಆರಂಭವಾಗಿದೆ. ಘಟನೆ ಇಂದು ಸಂಜೆ ನಡೆದಿದೆ.
ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಘೋಷಿಸಿದ ತೀ ನಾ ಶ್ರೀನಿವಾಸ್
ಶಿವಮೊಗ್ಗ : ಕಾಂಗ್ರೆಸ್ ಪಕ್ಷಕ್ಕೆ ಮಾಜಿ ಜಿಲ್ಲಾಧ್ಯಕ್ಷ ಮತ್ತು ಪ್ರಭಾವಿ ಮುಖಂಡ ತೀನಾ ಶ್ರೀನಿವಾಸ್ ಗುಡ್ ಬೈ ಹೇಳಿದ್ದಾರೆ. ರೈತರ ಪರ ನಿಲ್ಲುತ್ತಿದ್ದ ತೀ.ನಾ.ಶ್ರೀನಿವಾಸ್ ಕಾಂಗ್ರೆಸ್ ನ ಮೇಲೆ ಗುರುತರ ಆರೋಪ ಮಾಡಿ ರಾಜೀನಾಮೆ ನೀಡಿದ್ದಾರೆ.
ನಿನ್ನೆ ಮೊನ್ನೆ ಬಂದ ಮಧು ಬಂಗಾರಪ್ಪನವರಿಗೆ ಪಕ್ಷದಲ್ಲಿ ಮೂರು ನಾಲ್ಕು ಸ್ಥಾನ ನೀಡಲಾಗುತ್ತಿದೆ. ನಿಜವಾದ ಹೋರಾಟಗಾರ ಕಾಗೋಡು ತಿಮ್ಮಪ್ಪನವರಿಗೆ ಸಾಗರದಲ್ಲಿ ಟಿಕೆಟ್ ನೀಡಿದ್ರೆ ಒಪ್ಪಿಕೊಳ್ಳುತ್ತೇನೆ.ಆದರೆ ಅವರಿಗೆ ಈ ಬಾರಿ ಟಿಕೇಟ್ ನೀಡುವ ಸಾಧ್ಯತೆ ಕಡಿಮೆಯಾಗಿದೆ ಎಂದು ಗುಡುಗಿದರು.
ಸಾಗರದಲ್ಲಿ ಸ್ವತಂತ್ರ್ಯ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿದ್ದು ಸೊರಬದಲ್ಲೂ ಸ್ವತಂತ್ರ ಅಭ್ಯರ್ಥಿಗಳನ್ನ ಕಣಕ್ಕಿಳಿಸುತ್ತಿದ್ದೇವೆ. ಮುಂದೆ ನಡೆಯುವ ಜಿಲ್ಲಾ ಪಂಚಾಯತ್, ತಾಲೂಕ್ ಪಂಚಾಯತ್ ಚುನಾವಣೆಯಲ್ಲೂ ಅಭ್ಯರ್ಥಿಗಳನ್ನ ಕಣಕ್ಕಿಳಿಸಲಿದ್ದೇವೆ ಎಂದು ಟಕ್ಕರ್ ನೀಡಿದರು.
ರ್ಯಾಂಕ್ಸ್ ಇನ್ಸ್ಟಿಟ್ಯೂಟ್–ಜೆಸಿಐ ಹೊಸನಗರ ಡೈಮಂಡ್ ಸಹಯೋಗದಲ್ಲಿ ‘Gen Z Connect’ ತರಬೇತಿ ಯಶಸ್ವಿ Ranks Institute–JCI Hosanagara Diamond Hosts…
ಬೆಳ್ಳೂರು GHPSನಲ್ಲಿ ಸ್ವಾತಂತ್ರ್ಯ ಸಂಭ್ರಮ: ಶಾಲೆಗೆ ಕೊಡುಗೆಗಳ ಮಹಾಪೂರ! Satish Ripponpete donated a TV to GHPS Bellur…
ಗರ್ತಿಕೆರೆಯಲ್ಲಿ ಮಾರಣಾಂತಿಕ ಹಲ್ಲೆ: ಅಟ್ಟಹಾಸ ಮೆರೆದಿದ್ದ ಆರೋಪಿಯ ಹೆಡೆಮುರಿ ಕಟ್ಟಿದ ಪೊಲೀಸರು Police arrest Raghavendra alias Apple Raghu…
ಅಕ್ರಮ ಗೋ ಸಾಗಾಟ ತಡೆಯಲು ಹೋದ ಬಜರಂಗದಳ ಕಾರ್ಯಕರ್ತರ ಮೇಲೆ ಭೀಕರ ಹಲ್ಲೆ - ಬಿ ವೈ ವಿಜಯೇಂದ್ರ ಆಕ್ರೋಶ…
ಗರ್ತಿಕೆರೆಯಲ್ಲಿ ವ್ಯಕ್ತಿಯ ಮೇಲೆ ಕಬ್ಬಿಣದ ರಾಡ್ ನಿಂದ ಮಾರಣಾಂತಿಕ ಹಲ್ಲೆ; ತಲೆಯ ಮೇಲೆ ಕಾಲಿಟ್ಟು ಅಟ್ಟಹಾಸ ಮೆರೆದ ಭೂಫ A…
ಚುಂಚಾದ್ರಿ ಮಹಿಳಾ ಒಕ್ಕಲಿಗರ ವೇದಿಕೆಯಿಂದ ಸ್ವಾತಂತ್ರ್ಯ ದಿನಾಚರಣೆ Ripponpete Chunchadri Mahila Okkaligar Vedike celebrated the 80th Independence…