ಡಿಸಿ ಕಚೇರಿಯ ಮುಂದೆ ಆಜಾನ್ ಕೂಗಿದ ಯುವಕ-ವಿಡಿಯೋ ವೈರಲ್
ಶಿವಮೊಗ್ಗ : ಈಶ್ವರಪ್ಪನವರು ಆಜಾನ್ ವಿಚಾರದಲ್ಲಿ ಲಘುವಾಗಿ ಮಾತನಾಡಿರುವುದನ್ನು ಖಂಡಿಸಿ ನಡೆದ ಪ್ರತಿಭಟನೆ ವೇಳೆ ಶಿವಮೊಗ್ಗ ಜಿಲ್ಲಾಧಿಕಾರಿ ಕಛೇರಿ ಮೇಲೆ ನಿಂತು ಯುವಕನೋರ್ವ ಆಜಾನ್ ಕೂಗಿದ್ದು ಈ ವಿಡಿಯೋ ವೈರಲ್ ಆಗಿದೆ.
ಶಿವಮೊಗ್ಗದ ಜಿಲ್ಲಾಧಿಕಾರಿ ಕಛೇರಿಯಲ್ಲಿ ಶುಕ್ರವಾರ ನಡೆದಿದ್ದ ಘಟನೆಯಲ್ಲಿ ಆಜಾನ್ ಕೂಗಿದ ವಿಡಿಯೋ ವೈರಲ್ ಆಗಿದೆ. ಸ್ಥಳೀಯರ ಮೊಬೈಲ್ ನಲ್ಲಿ ಆಜಾನ್ ಕೂಗಿದ ದೃಶ್ಯ ಸೆರೆಯಾಗಿದ್ದು, ಫೇಸ್ ಬುಕ್ ಪೇಜ್ ಒಂದರಲ್ಲಿ ಈ ವಿಡಿಯೋ ವೈರಲ್ ಆಗಿದೆ.
ಸ್ಥಳೀಯರ ಮೊಬೈಲ್ನಲ್ಲಿ ಆಜಾನ್ ಕೂಗಿದ ದೃಶ್ಯ
ಸೆರೆಯಾಗಿದೆ. ಆಜಾನ್ ಹಾಗೂ ಅಲ್ಲಾಹು ಬಗ್ಗೆ ಮಾಜಿ ಸಚಿವ ಈಶ್ವರಪ್ಪ ಅವಹೇಳನ ಮಾಡಿದ್ದಾರೆಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಮುಸ್ಲಿಂ ಸಮುದಾಯದವರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಈಶ್ವರಪ್ಪ ವಿರುದ್ಧ ಘೋಷಣೆ ಕೂಗಿ ಆಕ್ರೋಶವನ್ನು ಹೊರಹಾಕಿದ್ದರು.
ಪ್ರತಿಭಟನೆ ವೇಳೆ ಮುಸ್ಲಿಂ ಸಮುದಾಯದ ಯುವಕ ಮೌಸಿನ್ ಆಜಾನ್ ಕೂಗಿ ಉದ್ಧಟತನ ಪ್ರದರ್ಶನ ಮಾಡಿದ್ದಾನೆ. ಜಿಲ್ಲಾಧಿಕಾರಿ ಕಚೇರಿ ಮೇಲೆ ಹತ್ತಿ ಆಜಾನ್ ಕೂಗಿದ್ದಾನೆ. ಆಜಾನ್ ಕೂಗುವುದನ್ನು ಕಂಡ ಪೊಲೀಸರು ಬೆದರಿಸಿದ್ದರು. ಈ ವೇಳೆ ಪೊಲೀಸರು, ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆದಿತ್ತು. ಆಜಾನ್ ಬಗ್ಗೆ ಮಾತನಾಡುವುದಕ್ಕೆ ಈಶ್ವರಪ್ಪ ಯಾರು? ಇವತ್ತು ಇಲ್ಲಿ ಕೂಗಿದ್ದೇವೆ, ನಾಳೆ ವಿಧಾನಸೌಧದಲ್ಲಿ ಕೂಗುತ್ತೇವೆ. ಇದು ತಾಯಿ ಬಗ್ಗೆ ಮಾತನಾಡಿದ್ದಲ್ಲ, ಅಲ್ಲಾ ಬಗ್ಗೆ ಮಾತನಾಡಿದ್ದು ಎಂದು ಕೂಗಾಡಲಾಗಿದೆ.
ಯುವಕ ಈ ಕೃತ್ಯಕ್ಕೆ ಹಿಂದು ಪರ ಸಂಘಟನೆಗಳು ಸೇರಿದಂತೆ.ನಾಗರಿಕರು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಲ್ಲಾಧಿಕಾರಿ ಕಟ್ಟಡಕ್ಕೆ ಅದರದ್ದೇ ಆದ ಘನತೆ ಇರುತ್ತದೆ. ಪ್ರತಿಭಟಿಸುವ ಹಕ್ಕು ಎಲ್ಲರಿಗೂ ಇರುತ್ತದೆ. ಆದರೆ, ಇಂತಹ
ಉದ್ದಟತನವನ್ನು ಯಾರೂ ಪ್ರದರ್ಶನ ಮಾಡಬಾರದು. ಅವರೇ ಹೇಳಿದಂತೆ ನಾಳೆ ವಿಧಾನಸೌಧದಲ್ಲೂ ಕೂಗಲು ಮುಂದಾಗುತ್ತಾರೆ. ಇಂಥ ಕೃತ್ಯಗಳಿಗೆ ಮೊದಲ ಹಂತದಲ್ಲಿಯೇ ಕಡಿವಾಣ ಹಾಕಬೇಕು ಎಂಬ ಒತ್ತಾಯ ಕೇಳಿಬಂದಿದೆ.
ಯುವಕನನ್ನು ಕರೆದು ಎಚ್ಚರಿಕೆ :
ಅಜಾನ್ ಕೂಗಿದ ಯುವಕನನ್ನು ಕರೆದು ಎಚ್ಚರಿಕೆ ನೀಡಲಾಗಿದೆ. ಈ ಸಂಬಂಧ ಕೇಸ್ವೊಂದನ್ನು ದಾಖಲಿಸಲಾಗಿದೆ ಎಂದು ಶಿವಮೊಗ್ಗ ಎಸ್ಪಿ ಮಿಥುನ್ ಕುಮಾರ್ ಮಾದ್ಯಮಕ್ಕೆ ತಿಳಿಸಿದ್ದಾರೆ.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್