ತೀರ್ಥಹಳ್ಳಿ : ಪಟ್ಟಣದೊಳಗೆ ನುಗ್ಗಿ ಆತಂಕ ಮೂಡಿಸಿದ್ದ ಕಾಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ತಾಲೂಕಿನ ದೇವಂಗಿಯ ಮಳೂರು ಕಾಡಿನಲ್ಲಿ ಆನೆ ಸೆರೆ ಹಿಡಿಯಲಾಯಿತು.
ಗುರುವಾರ ರಾತ್ರಿ ಕಾರ್ಯಾಚರಣೆ ನಡೆಸಿದ ಸಕ್ರೆಬೈಲು ಬಿಡಾರದ ಸಿಬ್ಬಂದಿ ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ಕಾಡಾನೆಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಆನೆ ಕಾಣಿಸಿಕೊಳ್ಳುತ್ತಿದ್ದಂತೆ ಅರಣ್ಯ ಇಲಾಖೆ ಸಿಬ್ಬಂದಿ ಆನೆಗೆ ಚುಚ್ಚು ಮದ್ದಿನ ಇಂಜೆಕ್ಷನ್ ಡಾರ್ಟ್ ಮಾಡಿ ಸೆರೆ ಹಿಡಿದಿದ್ದಾರೆ.
ಡಿಸೆಂಬರ್ ತಿಂಗಳಲ್ಲಿ ಈ ಕಾಡಾನೆ ತೀರ್ಥಹಳ್ಳಿ ಪಟ್ಟಣದೊಳಗೆ ನುಗ್ಗಿತ್ತು. ವಿವಿಧೆಡೆ ಸಂಚರಿಸಿ ಜನರಲ್ಲಿ ಆತಂಕ ಮೂಡಿಸಿತ್ತು. ಕಾಡಾನೆ ಸೆರೆ ಹಿಡಿಯಬೇಕೆಂಬ ಒತ್ತಡವಿತ್ತು. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಆನೆಯನ್ನು ಕಡೆಗೂ ಸೆರೆ ಹಿಡಿದಿದ್ದಾರೆ.
ಕಾಡಾನೆ ಸೆರೆಗೆ ಸಕ್ರೆಬೈಲು ಬಿಡಾರದ ಹೆಣ್ಣಾನೆಯನ್ನು ಬಳಕೆ ಮಾಡಿಕೊಳ್ಳಲಾಗಿತ್ತು. ಸಕ್ರೆಬೈಲಿನ ಭಾನುಮತಿ ಆನೆಯನ್ನು ಕಾಡಿನಲ್ಲಿ ಕಟ್ಟಿ ಹಾಕಿ, ಕಾಡಾನೆಯನ್ನು ಸೆಳೆಯುವ ಹನಿಟ್ರ್ಯಾಪ್ ತಂತ್ರವನ್ನು ಬಳಕೆ ಮಾಡಲಾಗಿತ್ತು. ಎರಡು ದಿನದ ಹಿಂದೆ ಭಾನುಮತಿಯನ್ನು ಗಮನಿಸಿ ಕಾಡಾನೆ ಹತ್ತಿರಕ್ಕೆ ಬಂದಿತ್ತು. ಅಷ್ಟು ಹೊತ್ತಿಗೆ ಅರಣ್ಯ ಇಲಾಖೆ ಸಿಬ್ಬಂದಿಯನ್ನು ಕಂಡು ಕಾಡಿನೊಳಗ್ಗೆ ಪರಾರಿಯಾಗಿತ್ತು. ಕಳೆದ ರಾತ್ರಿ ಪುನಃ ಭಾನುಮತಿಯನ್ನು ಅರಸಿ ಬಂದ ಕಾಡಾನೆಗೆ ಅರಣ್ಯ ಇಲಾಖೆ ಸಿಬ್ಬಂದಿ ಡಾರ್ಟ್ ಮಾಡಿದ್ದಾರೆ.
ಬಂಡೀಪುರ ಅಭಯಾರಣ್ಯಕ್ಕೆ ಆನೆಯನ್ನು ಕರೆದೋಯ್ಯಲಾಗಿದೆ. ಸದ್ಯ ಕಾಡಾನೆ ಸೆರೆಯಾಗಿರುವುದರಿಂದ ತೀರ್ಥಹಳ್ಳಿಯ ಜನರು ನಿಟ್ಟುಸಿರು ಬಿಟ್ಟಿದ್ದಾರೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್