Headlines

ನೇತ್ರದಾನದ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದ ಹೊಸನಗರದ ರಾಮಚಂದ್ರಪ್ಪ|eyedonate

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮಠದಜಡ್ಡು ಗ್ರಾಮದ ವ್ಯಕ್ತಿಯೊಬ್ಬರು ನೇತ್ರದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.




ಮಠದಜಡ್ಡು ನಿವಾಸಿ ಈ ರಾಮಚಂದ್ರಪ್ಪನವರು (76) ಅನಾರೋಗ್ಯದ ಕಾರಣ ಇಂದು ಬೆಳಿಗ್ಗೆ ನಿಧನರಾಗಿದ್ದಾರೆ.ಮಾಜಿ ಮುಖ್ಯಮಂತ್ರಿ ದಿ|| ಎಸ್ ಬಂಗಾರಪ್ಪನವರಿಗೆ ನಿಕಟವರ್ತಿಯಾಗಿದ್ದ ಇವರು ಅನೇಕ ಸಮಜಮುಖಿ ಕಾರ್ಯಗಳಲ್ಲಿ ತೊಡಗಿಕೊಂಡಿದ್ದರು.




ಮೃತರು ಚಾಲುಕ್ಯ ಬಸವರಾಜ್‌ರವರು ಸೇರಿ ಓರ್ವ ಪುತ್ರ, ಓರ್ವ ಪುತ್ರಿ, ಪತ್ನಿ, ಅಳಿಯ ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗದವರನ್ನು ಅಗಲಿದ್ದಾರೆ.

ಇವರು ನಿಧನದ ನಂತರ ತಮ್ಮ ಕಣ್ಣು ಇನ್ನೊಬ್ಬರಿಗೆ ಬೆಳಕಾಗಬೇಕು ಎಂಬ ಇಂಗಿತವನ್ನು ಕುಟುಂಬದವರ ಬಳಿ ತೋಡಿಕೊಂಡಿದ್ದರು ಆ ಹಿನ್ನೆಲೆಯಲ್ಲಿ ರಾಮಚಂದ್ರಪ್ಪ ರವರ ಎರಡು ಕಣ್ಣುಗಳನ್ನು ಶಿವಮೊಗ್ಗದ ಶಂಕರ್ ಕಣ್ಣಿನ ಆಸ್ಪತ್ರೆಗೆ ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.



Leave a Reply

Your email address will not be published. Required fields are marked *