ಪತ್ರಕರ್ತರಿಗೆ ಕಿರುಕುಳ – ದಾವಣಗೆರೆ ಎಸ್ ಪಿ ರಿಷ್ಯಂತ್ ಮೇಲೆ ಕ್ರಮ ಕೈಗೊಳ್ಳುವಂತೆ ರಿಪ್ಪನ್‌ಪೇಟೆ ಪತ್ರಕರ್ತರಿಂದ ಒತ್ತಾಯ|Rpet

ರಿಪ್ಪನ್‌ಪೇಟೆ : ಫೆಬ್ರವರಿ 27 ರಂದು ಸೋಗಾನೆಯ ನೂತನ ವಿಮಾನ ನಿಲ್ದಾಣದ ಉದ್ಘಾಟನಾ ಸಮಾರಂಭದ ವರದಿಗಾಗಿ ತೆರಳಿದ್ದ ಹಿರಿಯ ಪತ್ರಕರ್ತ ಆರ್‌.ಎಸ್‌. ಹಾಲಸ್ವಾಮಿ (ಟಿವಿ ಭಾರತ್) ಅವರನ್ನು ಅಕ್ರಮವಾಗಿ ಪೊಲೀಸ್ ವಾಹನದಲ್ಲಿ ಕೂಡಿಟ್ಟು ಉದ್ದಟತನದಿಂದ ವರ್ತಿಸಿದ ದಾವಣೆಗೆರೆ ಜಿಲ್ಲಾ ರಕ್ಷಣಾಧಿಕಾರಿ ಸಿ.ಬಿ. ರಿಷ್ಯಂತ್ ಅವರ ಮೇಲೆ ಸೂಕ್ತ ಕ್ರಮ ಜರುಗಿಸಿ ಅಮಾನತ್ತಿನಲ್ಲಿಡುವಂತೆ ಒತ್ತಾಯಿಸಿ ಶನಿವಾರ ಪಟ್ಟಣದ ಪತ್ರಕರ್ತ ಸಂಘಟನೆಗಳಿಂದ ಗೃಹ ಸಚಿವರಿಗೆ ರಾಜಸ್ವ ನಿರೀಕ್ಷಕರಾದ ಅಫ಼್ರೋಜ್ ರವರ ಮೂಲಕ ಮನವಿ ಸಲ್ಲಿಸಲಾಯಿತು.




ಈ ಸಂಧರ್ಭದಲ್ಲಿ ಮಾತನಾಡಿದ ಹಿರಿಯ ಪತ್ರಕರ್ತ ಕೆ ಎಂ ಬಸವರಾಜ್  ಶಿವಮೊಗ್ಗ ನಗರದ ಸೋಗಾನೆಯ ನೂತನ ವಿಮಾನ ನಿಲ್ದಾಣ ಉದ್ಘಾಟನಾ ಸಮಾರಂಭ ಮುಕ್ತಾಯವಾಗಿ ಪ್ರಧಾನ ಮಂತ್ರಿಗಳು, ಮುಖ್ಯಮಂತ್ರಿಗಳು ಸೇರಿದಂತೆ ಎಲ್ಲಾ ಅತಿಗಣ್ಯರು ವೇದಿಕೆಯಿಂದ ನಿರ್ಗಮಿಸಿದ್ದರು. ಈ ಸಂದರ್ಭದಲ್ಲಿ ಸಾರ್ವಜನಿಕರು ಸಭಾ ಸ್ಥಳದಿಂದ ಹೊರ ಬರಲಾರಂಭಿಸಿದ್ದು ವಿಮಾನ ನಿಲ್ದಾಣದ ಕಡೆಗೆ ಹೋಗುವ ಉತ್ಸಾಹದಲ್ಲಿದ್ದರು. ಆದರೆ ಅವರನ್ನು ತಡೆಯುವಲ್ಲಿ ಸ್ಥಳದಲ್ಲಿ ಕರ್ತವ್ಯದಲ್ಲಿದ್ದ ದಾವಣಗೆರೆ ಎಸ್ಪಿ ಸಿ.ಬಿ. ರಿಷ್ಯಂತ್ ಅವರು ಸಮಯ ಪ್ರಜ್ಞೆಯಿಂದ ಕೆಲಸ ಮಾಡದೆ. ಪರಿಸ್ಥಿತಿ ಅಂತಹ ಗಂಭೀರವಲ್ಲದಿದ್ದರೂ ಲಾಠಿಚಾರ್ಜ್ ನಡೆಸಿರುತ್ತಾರೆ. ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಟಿವಿ ಭಾರತ್ ನ ಸಂಪಾದಕರಾದ ಆರ್.ಎಸ್.ಹಾಲಸ್ವಾಮಿ ಅವರು ಒಟ್ಟಾರೆ ಪರಿಸ್ಥಿತಿಯ ಚಿತ್ರೀಕರಣದಲ್ಲಿ ತೊಡಗಿದ್ದು ಲಾಠಿಚಾರ್ಜ್ ಘಟನೆಯನ್ನು ಚಿತ್ರೀಕರಿಸಿಕೊಂಡಿದ್ದರು. ಇದನ್ನು ಕಂಡ ಎಸ್ಪಿ ರಿಷ್ಯಂತ್ ಅವರು ತಕ್ಷಣವೇ ಪೊಲೀಸ್ ಸಿಬ್ಬಂದಿಗಳ ಮೂಲಕ ಪತ್ರಕರ್ತರಾದ ಹಾಲಸ್ವಾಮಿ ಅವರನ್ನು ಬಲವಂತವಾಗಿ ಹಿಡಿದು ಎಳೆದೊಯ್ದು ಪೊಲೀಸ್ ವಾಹನದಲ್ಲಿ ಕೂಡಿ ಹಾಕಿದ್ದಲ್ಲದೆ, ಮೊಬೈಲ್ ಕಿತ್ತುಕೊಂಡು ಅದರಲ್ಲಿದ್ದ ವಿಡಿಯೋಗಳನ್ನು ಡಿಲಿಟ್ ಮಾಡಿದ್ದಾರೆ.

ಪತ್ರಕರ್ತರಾದ ಆರ್.ಎಸ್. ಹಾಲಸ್ವಾಮಿ ಅವರು ತಾನೊಬ್ಬ ಪತ್ರಕರ್ತ ಎಂದೂ ಮತ್ತು ಜಿಲ್ಲಾ ಪೊಲೀಸ್ ಇಲಾಖೆ ಜಿಲ್ಲಾಡಳಿತ ನೀಡಿದ ಗುರುತಿನ ಚೀಟಿ ಧರಿಸಿದ್ದರೂ ಅದ್ಯಾವುದನ್ನು ಮಾನ್ಯ ಮಾಡದೆ ದಾವಣೆಗೆರೆ ಎಸ್ಪಿ ಅತಿರೇಕದಿಂದ ವರ್ತಿಸಿದ್ದಾರೆ. ಅಸಭ್ಯ ಮಾತಿಗಳಿಂದ ಅವಮಾನಿಸಿದ್ದಾರೆ. ಸುಮಾರು ಒಂದು ಗಂಟೆಗೂ ಹೆಚ್ಚಿನ ಕಾಲ ಪತ್ರಕರ್ತ ಹಾಲಸ್ವಾಮಿ ಅವರನ್ನು ವಾಹನದಲ್ಲಿ ಅಕ್ರಮವಾಗಿ ಕೂಡಿಟ್ಟು ಗಂಭೀರ ಕೇಸುಗಳನ್ನು ಹಾಕಿ ಜೈಲಿಗೆ ಕಳುಹಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಕೊನೆಗೆ ಮೊಬೈಲ್ನಲ್ಲಿದ್ದ ಎಲ್ಲಾ ವೀಡಿಯೋಗಳನ್ನು ಡಿಲಿಟ್ ಮಾಡಿಸಿ ಬಿಟ್ಟು ಕಳುಹಿಸಿದ್ದಾರೆ.




ದಾವಣಗೆರೆ ಎಸ್ಪಿಯ ಈ ವರ್ತನೆ ಅಘಾತಕಾರಿಯದದು, ಸ್ಥಳದ ಸನ್ನಿವೇಶವನ್ನು ಅಹಂಕಾರ ಪ್ರದರ್ಶಿಸಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಾಧ್ಯಮಗಳ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಅವರಲ್ಲಿನ ಧೋರಣೆ ಅಪಾಯಕಾರಿಯಾಗಿ ಕಂಡು ಬರುತ್ತಿದೆ.ಟಿವಿ ಭಾರತ್ ಸಂಪಾದಕರಾದ ಆರ್.ಎಸ್. ಹಾಲಸ್ವಾಮಿ ಅವರು ಕಳೆದ 25 ವರ್ಷಗಳಿಂದ ಕರ್ನಾಟಕದ ಸುದ್ದಿ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡುತ್ತಾ ಬಂದಿದ್ದಾರೆ. ಅಪಾರವಾದ ಅನುಭವ, ಎಂತಹುದ್ದೇ ಪರಿಸ್ಥಿತಿಯಲ್ಲಿ ಹೇಗೆ ತನ್ನ ಕಾರ್ಯನಿರ್ವಹಿಸಬೇಕೆಂಬ ಅರಿವು ಅವರಗಿದೆ. ಇಂತಹ ಪತ್ರಕರ್ತರನ್ನು ಅಕ್ರಮವಾಗಿ ಕೂಡಿಟ್ಟು, ಅವಮಾನಿಸಿ ಪತ್ರಕರ್ತನ ಕೆಲಸಕ್ಕೆ ಅಡ್ಡಿಪಡಿಸಿರುವ ದಾವಣಗೆರೆ ಎಸ್ಪಿ ರಿಷ್ಯಂತ್ ವಿರುದ್ಧ ಶಿಸ್ತುಕ್ರಮ ಜರುಗಿಸಬೇಕು. ಪತ್ರಕರ್ತ ಹಾಲಸ್ವಾಮಿ ಅವರಲ್ಲಿ ಎಸ್ಪಿ ಕ್ಷಮೆ ಯಾಚಿಸಬೇಕು ಎಂದು ಅವರು ಆಗ್ರಹಿಸಿದರು.

ಈ ಸಂಧರ್ಭದಲ್ಲಿ ಪತ್ರಕರ್ತರುಗಳಾದ ರಿ ರಾ ರವಿಶಂಕರ್ , ಚಿದಾನಂದ ಸ್ವಾಮಿ ,ಸೆಬಾಸ್ಟಿಯನ್ ಮ್ಯಾಥ್ಯೂಸ್ ,ರಫ಼ಿ ರಿಪ್ಪನ್‌ಪೇಟೆ , ಮತ್ತು ದೇವರಾಜ್ ಆರಗ ಉಪಸ್ಥಿತರಿದ್ದರು.



ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

15 hours ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

15 hours ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

16 hours ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

2 days ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

2 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

2 days ago