ಶಿವಮೊಗ್ಗ ಹೊಳೆಹೊನ್ನೂರು ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ವಿವಾಹಿತೆಯೊಬ್ಬರು ಅನುಮಾನಸ್ಪದವಾಗಿ ಸಾವನ್ನಪ್ಪಿರುವ ಘಟನೆಯ ಬಗ್ಗೆ ವರದಿಯಾಗಿದೆ.
ಅನಿತಾ ಮೃತ ಯುವತಿ, ಈಕೆ 7 ತಿಂಗಳ ಹಿಂದೆ ಹೆತ್ತವರ ವಿರೋಧದ ನಡುವೆ ಪ್ರೀತಿಸಿ ಮದುವೆಯಾಗಿದ್ದರು. ಭದ್ರಾವತಿ ತಾಲೂಕಿನ ಸಂತೋಷ್ ಎಂಬವರ ಜೊತೆಗೆ ಅನಿತಾರ ಯುವತಿಯಾಗಿತ್ತು.
ಸಂತೋಷ್ ಹಾಗೂ ಅನಿತಾ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. ಕಳೆದ ಶುಕ್ರವಾರ ಅನಿತಾಳ ಆರೋಗ್ಯ ಹದಗೆಟ್ಟಿದೆ ಎಂದು ಸಂತೋಷ್ ಅನಿತಾರ ಹೆತ್ತವರಿಗೆ ವಿಷಯ ತಿಳಿಸಿದ್ದಾರೆ. ಆನಂತರ ಅನಿತಾರ ಪೋಷಕರು ಶಿವು ಎಂಬವರನ್ನ ಸಂತೋಷ್ರ ಮನೆಗೆ ಕಳುಹಿಸಿ ವಿಚಾರಿಸುವಂತೆ ತಿಳಿಸಿದ್ದಾರೆ. ಸಂತೋಷ್ರ ಮನೆಗೆ ಶಿವುವವರು ಬಂದಾಗ, ಅನಿತಾ ಸಾವನ್ನಪ್ಪಿರುವ ವಿಷಯ ಗೊತ್ತಾಗಿದೆ. ತಕ್ಷಣ ಅನಿತಾರ ಪೋಷಕರಿಗೆ ವಿಷಯ ತಿಳಿಸಿದ್ದಾರೆ.
ಇನ್ನೂ ವಿಷಯ ತಿಳಿದು ಸಂತೋಷ್ರ ಮನೆಗೆ ಬಂದ ಅನಿತಾ ಪೋಷಕರು ಮಗಳ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ.
ಇನ್ನೊಂದೆಡೆ ವಿಚಾರ ತಿಳಿದು ಸ್ತಳಕ್ಕೆ ಬಂದ ಹೊಳೆಹೊನ್ನೂರು ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಿ, ಸಂತೋಷ್ರನ್ನು ಬಂಧಿಸಿದ್ದಾರೆ. ಅನಿತಾರ ಪೋಷಕರು, ಸಂತೋಷ್ ಹಾಗೂ ಅವರ ಕುಟುಂಬಸ್ಥರ ವಿರುದ್ಧ ದೂರು ನೀಡಿದ್ದು, ಸದ್ಯ ಪೊಲೀಸರು ವಿಚಾರಣೆ ನಡೆಸ್ತಿದ್ದಾರೆ.