Headlines

ಪ್ರೀತಿಸಿ ಮದುವೆಯಾಗಿದ್ದ ನವ ವಿವಾಹಿತೆ ಸಾವು – ಪತಿಯ ವಿರುದ್ದ ಪ್ರಕರಣ ದಾಖಲು|death


ಶಿವಮೊಗ್ಗ ಹೊಳೆಹೊನ್ನೂರು  ಪೊಲೀಸ್ ಸ್ಟೇಷನ್​ ವ್ಯಾಪ್ತಿಯಲ್ಲಿ ವಿವಾಹಿತೆಯೊಬ್ಬರು ಅನುಮಾನಸ್ಪದವಾಗಿ ಸಾವನ್ನಪ್ಪಿರುವ ಘಟನೆಯ ಬಗ್ಗೆ ವರದಿಯಾಗಿದೆ.



ಅನಿತಾ ಮೃತ ಯುವತಿ, ಈಕೆ  7 ತಿಂಗಳ ಹಿಂದೆ ಹೆತ್ತವರ ವಿರೋಧದ ನಡುವೆ ಪ್ರೀತಿಸಿ ಮದುವೆಯಾಗಿದ್ದರು. ಭದ್ರಾವತಿ ತಾಲೂಕಿನ  ಸಂತೋಷ್​ ಎಂಬವರ ಜೊತೆಗೆ ಅನಿತಾರ ಯುವತಿಯಾಗಿತ್ತು.


ಸಂತೋಷ್ ಹಾಗೂ ಅನಿತಾ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. ಕಳೆದ ಶುಕ್ರವಾರ ಅನಿತಾಳ ಆರೋಗ್ಯ ಹದಗೆಟ್ಟಿದೆ ಎಂದು ಸಂತೋಷ್​ ಅನಿತಾರ ಹೆತ್ತವರಿಗೆ ವಿಷಯ ತಿಳಿಸಿದ್ದಾರೆ. ಆನಂತರ ಅನಿತಾರ ಪೋಷಕರು ಶಿವು ಎಂಬವರನ್ನ ಸಂತೋಷ್​ರ ಮನೆಗೆ ಕಳುಹಿಸಿ ವಿಚಾರಿಸುವಂತೆ ತಿಳಿಸಿದ್ದಾರೆ. ಸಂತೋಷ್​ರ ಮನೆಗೆ ಶಿವುವವರು ಬಂದಾಗ, ಅನಿತಾ ಸಾವನ್ನಪ್ಪಿರುವ ವಿಷಯ ಗೊತ್ತಾಗಿದೆ. ತಕ್ಷಣ ಅನಿತಾರ ಪೋಷಕರಿಗೆ ವಿಷಯ ತಿಳಿಸಿದ್ದಾರೆ. 



ಇನ್ನೂ ವಿಷಯ ತಿಳಿದು ಸಂತೋಷ್​ರ ಮನೆಗೆ ಬಂದ ಅನಿತಾ ಪೋಷಕರು ಮಗಳ ಸಾವಿನ ಬಗ್​ಗೆ ಅನುಮಾನ ವ್ಯಕ್ತಪಡಿಸಿದ್ದಾರೆ.

ಇನ್ನೊಂದೆಡೆ ವಿಚಾರ ತಿಳಿದು ಸ್ತಳಕ್ಕೆ ಬಂದ ಹೊಳೆಹೊನ್ನೂರು ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಿ, ಸಂತೋಷ್​ರನ್ನು ಬಂಧಿಸಿದ್ದಾರೆ. ಅನಿತಾರ ಪೋಷಕರು, ಸಂತೋಷ್​ ಹಾಗೂ ಅವರ ಕುಟುಂಬಸ್ಥರ ವಿರುದ್ಧ ದೂರು ನೀಡಿದ್ದು, ಸದ್ಯ ಪೊಲೀಸರು ವಿಚಾರಣೆ ನಡೆಸ್ತಿದ್ದಾರೆ. 

Leave a Reply

Your email address will not be published. Required fields are marked *

Exit mobile version