ಶಿವಮೊಗ್ಗದ ದುರ್ಗಿಗುಡಿ ಸಮೀಪ ಇರುವ ವೈಭವಲಕ್ಷ್ಮೀ ವೈನ್ ಸ್ಟೋರ್ ಬಳಿಯಲ್ಲಿ ನಾಗರಹಾವೊಂದು ಕಾಣಿಸಿಕೊಂಡಿತ್ತು ಇಲ್ಲಿನ , ದಿ ಫ್ಯಾಕ್ಟರಿ ಔಟ್ ಲೆಟ್ ಬಳಿ ನಿಲ್ಲಿಸಲಾಗಿದ್ದ ಬುಲೆಟ್ವೊಂದರಲ್ಲಿ ನಾಗರ ಹಾವೊಂದು ಸೇರಿಕೊಂಡಿತ್ತು.
ನೋಡನೋಡುತ್ತಿದ್ದಂತೆ ಬುಲೆಟ್ನ ಹೆಡ್ಲೈಟ್ವೊಳಗೆ ಸೇರಿಕೊಂಡಿದ್ದ ನಾಗರ ಹಾವನ್ನ ನೋಡಿದ ಜನರು ಸ್ನೇಕ್ ಕಿರಣ್ ಗೆ ಫೋನಾಯಿಸಿದ್ದಾರೆ. ತಕ್ಷಣ ಅವರು ಸಹ ಸ್ಥಳಕ್ಕೆ ಬಂದಿದ್ಧಾರೆ. ಹೆಡ್ಲೈಟ್ ಬಿಚ್ಚಿ ಹಾವನ್ನ ಹಿಡಿಯಬೇಕು ಎನ್ನುವಷ್ಟರಲ್ಲಿ ಹೆಡ್ಲೈಟ್ ಮೇಲೆ ಬಂದು, ಹೆಡೆಯೆತ್ತಿದ ನಾಗರಾಜ ಸುತ್ತಮುತ್ತ ನೋಡುತ್ತಾ ಬುಸುಗುಡಲು ಆರಂಭಿಸಿದ್ದ.
ಸುಮಾರು ಅರ್ಧಗಂಟೆಗೂ ಹೆಚ್ಚುಕಾಲ ಹಾವಿನ ಗಮನವನ್ನ ಬಟ್ಟೆಯೊಂದರತ್ತ ಸೆಳೆದ ಸ್ನೇಕ್ ಕಿರಣ್ ತಮ್ಮ ಅನುಭವ ಬಳಸಿ ಹಾವನ್ನ ಹಿಡಿದು ಕಾಡಿಗೆ ಬಿಟ್ಟಿದ್ದಾರೆ.
ಇನ್ನೂ ಈ ದೃಶ್ಯವನ್ನು ನೋಡಲು ಅಲ್ಲಿದ್ದವರೆಲ್ಲಾ ಮುಗಿಬಿದ್ದಿದ್ದರಷ್ಟೆ ಅಲ್ಲದೆ, ಹಾವು ಹಿಡಿಯುವುದನ್ನ ತರಹೇವಾರಿ ಸ್ಟೈಲ್ನಲ್ಲಿ ತಮ್ಮ ಮೊಬೈಲ್ ಮೂಲಕ ಸೆರೆಹಿಡಿದು ರೀಲ್ಸ್ ಗೆ ಹಾಕಿಕೊಳ್ಳುತ್ತಿದ್ದರು.