ಶಿವಮೊಗ್ಗ ಜಿಲ್ಲೆಯ ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಲು ಏಳು ಜನ ಆಕಾಂಕ್ಷಿಗಳು ಹೈಕಮಾಂಡ್ ಗೆ ಮನವಿ ಸಲ್ಲಿಸಿದ್ದರು ಅದರಲ್ಲಿ ಹಿರಿಯ ಮುತ್ಸದಿ ಕಾಗೋಡು ತಿಮ್ಮಪ್ಪ ಹಾಗೂ ಅವರ ಮಗಳು ಡಾ.ರಾಜನಂದಿನಿ ಪ್ರಬಲ ಆಕಾಂಕ್ಷಿಯಾಗಿದ್ದರು.
ಕೊನೆಯಲ್ಲಿ ಹೈಕಮಾಂಡ್ ಪಕ್ಷದ ಆಂತರಿಕ ಸಮೀಕ್ಷೆಗೆ ಮನ್ನಣೆ ನೀಡಿ ಸಾಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ರವರನ್ನು ಹೈಕಮಾಂಡ್ ಅಂತಿಮಗೊಳಿಸಿದ್ದು ಕಾಂಗ್ರೆಸ್ ಕಾರ್ಯಕರ್ತರ ಹುಮ್ಮಸ್ಸು ಇಮ್ಮಡಿಯಾಗಿಸಿತ್ತು.
ಆದರೆ ಕ್ಷೇತ್ರದ ಕಾಂಗ್ರೆಸ್ ಪಕ್ಷದಲ್ಲಿ ಅನೇಕ ಬಣಗಳಿವೆ ಇದರಿಂದ ಬೇಳೂರು ಚುನಾವಣೆಯಲ್ಲಿ ಹಿನ್ನಡೆ ಸಾಧಿಸುವ ಸಾಧ್ಯತೆ ಇದೆ ಎನ್ನಲಾಗುತಿತ್ತು ಆದರೆ ಮಾಜಿ ಸಚಿವ ಕಾಂಗ್ರೆಸ್ ಪಕ್ಷದ ಮುತ್ಸದಿ ನಾಯಕ ಇಂದು ಕಾಂಗ್ರೆಸ್ ಪಕ್ಷದ ಸಭೆಯಲ್ಲಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಘೋಷಿಸಿರುವ ಅಭ್ಯರ್ಥಿ ಬೇಳೂರು ಗೋಪಾಲಕೃಷ್ಣ ರವರನ್ನು ಗೆಲ್ಲಿಸುವ ಮೂಲಕ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸೋಣ ಎಂಬ ಹೇಳಿಕೆ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಎಲ್ಲಾ ಬಣ ರಾಜಕೀಯಕ್ಕೆ ತಿಲಾಂಜಲಿ ಇಟ್ಟಂತೆ ಆಗಿದೆ.
ಇಂದು ಶಿವಮೊಗ್ಗದಲ್ಲಿ ಮಾಜಿ ಜಿಪಂ ಸದಸ್ಯ ಹುನಗೋಡು ರತ್ನಾಕರ್ ಸುದ್ದಿಗೋಷ್ಟಿ ನಡೆಸಿ ಬಂಡಾಯ ಸ್ಪರ್ಧೆ ಮಾಡುವುದಾಗಿ ಹೇಳಿದ್ದು ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಆತಂಕ ಸೃಷ್ಟಿಸಿತ್ತು ಆದರೆ ಕೆಲವೇ ಸಮಯದಲ್ಲಿ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ರವರ ಹೇಳಿಕೆಯಿಂದ ಸಾಗರ ಕ್ಷೇತ್ರದ ಬಣ ರಾಜಕೀಯ ಅಂತಿಮವಾದಂತೆ ಎಂದು ಹೇಳಲಾಗುತ್ತಿದೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್