ಭ್ರಷ್ಟಾಚಾರ ನಡೆಸಿ ಜಾಮೀನಿನ ಮೇಲಿರುವ ನಾಯಕರು ಕರ್ನಾಟಕ ಬಂದ್ ಗೆ ಕರೆ ನೀಡುತ್ತಿದ್ದಾರೆ – ಆರಗ ಜ್ಞಾನೇಂದ್ರ
ತೀರ್ಥಹಳ್ಳಿ : ಯಾರು ಭ್ರಷ್ಟಾಚಾರದ ತಾಯಿಯೋ ಅವರೇ ಕರ್ನಾಟಕ ಬಂದ್ ಗೆ ಕರೆ ನೀಡುತ್ತಿದ್ದಾರೆ. ಅವರ ಕೇಂದ್ರ ನಾಯಕರು, ರಾಜ್ಯದ ನಾಯಕರು ಬಹಳಷ್ಟು ದಿನ ಜೈಲಿನಲ್ಲಿದ್ದು ಈಗ ಜಾಮೀನಿನ ಮೇಲೆ ಹೊರಬಂದಿದ್ದಾರೆ ಅಂಥವರು ಈಗ ಭ್ರಷ್ಟಾಚಾರದ ವಿರುದ್ಧ ಬಂದ್ ಗೆ ಕರೆ ನೀಡುತ್ತಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಕಿಡಿ ಕಾರಿದರು.
ಪಟ್ಟಣದ ಕೃಷಿ ಮಾರುಕಟ್ಟೆಯಲ್ಲಿ ಸೋಮವಾರ ಕಾರ್ಮಿಕರ ಮಕ್ಕಳಿಗೆ ಕಿಟ್ ವಿತರಿಸಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ನಮ್ಮ ಸರ್ಕಾರ ಭ್ರಷ್ಟಾಚಾರಿಗಳ ಪರವಾಗಿಲ್ಲ. ಯಾರೇ ಇರಲಿ ಅವರ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ. ಲೋಕಾಯುಕ್ತವನ್ನು ಸಿದ್ದರಾಮಯ್ಯನವರ ಕಾಲದಲ್ಲಿ ಕುತ್ತಿಗೆ ಹಿಚುಕಿ ಇಟ್ಟಿದ್ದರು ಯಾಕೆಂದರೆ ಅವರ ಮೇಲೆ 69 ಕೇಸ್ ಇತ್ತು ಹಾಗಾಗಿ ಲೋಕಾಯುಕ್ತ ಮುಗಿಸಿ ಎ.ಸಿ.ಬಿ ಮಾಡಿದರು. ನಾವು ಕೋರ್ಟ್ ಆದೇಶದಿಂದಾಗಿ ದೇಶ ಭ್ರಷ್ಟಾಚಾರ ಮುಕ್ತ ಮಾಡಲು ಲೋಕಾಯುಕ್ತವನ್ನು ಗಟ್ಟಿ ಮಾಡಿದ್ದೇವೆ ಎಂದರು.
ಪೊಲೀಸ್ ಇಲಾಖೆಗೆ ಅವರು ಕೇಳಿದ ಹಾಗೆ ಒಳ್ಳೊಳ್ಳೆ ಆಫೀಸರ್ ಗಳನ್ನು ಕೊಟ್ಟಿದ್ದೇವೆ. ಲೋಕಾಯುಕ್ತ ಚೆನ್ನಾಗಿದ್ದರೆ ಭ್ರಷ್ಟಾಚಾರ ಮುಕ್ತ ಸಮಾಜವಾಗುತ್ತೆ ಎನ್ನುವ ನಂಬಿಕೆ ಇದೆ. ಯಾರೇ ಆದರೂ ಅವರ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳುವ ರೀತಿಯಲ್ಲಿ ಪಾರದರ್ಶಕ ಕೆಲಸವನ್ನು ಲೋಕಾಯುಕ್ತ ಮಾಡುತ್ತಿದೆ. ಸರ್ಕಾರ ಇದರಲ್ಲಿ ಪ್ರವೇಶ ಮಾಡಿಲ್ಲ,ಸರ್ಕಾರದ ಹಸ್ತ ಕ್ಷೇಪ ಇಲ್ಲ ಎಂದರು.
ಮಾಡಾಳ್ ವಿರೂಪಾಕ್ಷಪ್ಪನವರ ಬಂಧನ ಇನ್ನು ಆಗಿಲ್ಲ ಎಂಬ ಪ್ರೆಶ್ನೆಗೆ ಅವರನ್ನು ಸುಮ್ಮನೆ ಬಿಡ್ತಾರಾ ? ಸರ್ಕಾರ ಬೆಂಬಲಕ್ಕೆ ನಿಂತಿಲ್ಲ ಹಾಗೇನಾದರೂ ಆಗಿದ್ದರೆ ಮಗ ಅರೆಸ್ಟ್ ಆಗುತ್ತನೆ ಇರುತ್ತಾ ಇರಲಿಲ್ಲ. ವಿಚಾರಣೆ ನೆಡೆಯುತ್ತಿದೆ. ಅಪ್ಪ ಮಗ ಅಥವಾ ಇನ್ಯಾರೆ ಇರಲಿ ಯಾರ್ಯಾರು ಇದರಲ್ಲಿ ಭಾಗಿಯಾಗಿದ್ದಾರೆ, ಅವರು ಮಾಡಿರುವ ಆಸ್ತಿ ಸರಿ ಇದೆಯೋ ಇಲ್ಲವೋ, ಏನು ಬೇಕಾದರೂ ಶಿಕ್ಷೆ ಆಗಲಿ ನಾವು ಮುಕ್ತರಾಗಿದ್ದೇವೆ ಎಂದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್