ಆಮಿಷವೊಡ್ಡಿ ಕ್ರೈಸ್ತ ಧರ್ಮಕ್ಕೆ ಮತಾಂತರ ಮಾಡುತ್ತಿರುವ ಆರೋಪ ಹಿನ್ನೆಲೆ ಸಾಮೂಹಿಕ ಪ್ರಾರ್ಥನೆ ನಡೆಸುತ್ತಿದ್ದ ಮನೆಗೆ ಬಜರಂಗ ದಳ ಮುತ್ತಿಗೆ ಹಾಕಿದ ಘಟನೆ ಶಿವಮೊಗ್ಗ ತಾಲೂಕಿನ ಗೋಪಿಶೆಟ್ಟಿಕೊಪ್ಪ ಗ್ರಾಮದಲ್ಲಿ ನಡೆದಿದೆ.
ಪ್ರಾರ್ಥನೆ ನಡೆಸುತ್ತಿದ್ದ ಮನೆಯಲ್ಲಿ ಬಜರಂಗ ದಳ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗೋಪಿಶೆಟ್ಟಿಕೊಪ್ಪದಲ್ಲಿರುವ ಮನೆಯೊಂದರಲ್ಲಿ ಪ್ರತಿ ಭಾನುವಾರ ಹಿಂದೂಗಳನ್ನು ಕರೆಸಿ ಸಾಮೂಹಿಕ ಪ್ರಾರ್ಥನೆ ನಡೆಸಲಾಗುತ್ತಿತ್ತು ಎಂಬ ಆರೋಪ ಕೇಳಿ ಬಂದಿದೆ.
ಪಾದ್ರಿ ಮಣಿಕಂಠ ಮತ್ತವರ ತಂಡದವರು ಪ್ರತಿ ಭಾನುವಾರ ಸಾಮೂಹಿಕ ಪ್ರಾರ್ಥನೆಯನ್ನು ಆಯೋಜನೆ ಮಾಡುತ್ತಿದ್ದರು. ಪ್ರಾರ್ಥನೆ ಆಯೋಜಿಸುತ್ತಿದ್ದವರ ವಿರುದ್ಧ ಬಜರಂಗ ದಳ ಆಕ್ರೋಶ ವ್ಯಕ್ತಪಡಿಸಿದೆ. ಹಿಂದು ಧರ್ಮೀಯರಿಗೆ ಆಮಿಷವೊಡ್ಡಿ ಕ್ರೈಸ್ತ ಧರ್ಮಕ್ಕೆ ಮತಾಂತರ ಮಾಡುತ್ತಿದ್ದಾರೆ ಎಂದು ಆರೋಪ ಕೇಳಿ ಬಂದಿದೆ.
ಹಿಂದುಗಳಿಗೆ ಬೈಬಲ್ ನೀಡಿ ಪ್ರಾರ್ಥನೆ ಮಾಡಿಸಲಾಗುತ್ತಿತ್ತು. ಹೀಗಾಗಿ ಖಚಿತ ಮಾಹಿತಿ ಮೇರೆಗೆ ಬಜರಂದಗಳದವರು ದಾಳಿ ಮಾಡಿ ಆಕ್ರೋಶವನ್ನು ಹೊರಹಾಕಿದರು. ವಿಷಯ ತಿಳಿದು ಸ್ಥಳಕ್ಕೆ ಬಂದ ತುಂಗಾ ನಗರ ಪೊಲೀಸರು ಪಾದ್ರಿ ಮಣಿಕಂಠ ಮತ್ತು ಸಂಗಡಿಗರನ್ನು ವಶಕ್ಕೆ ಪಡೆದಿದ್ದಾರೆ.
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…
ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್ಪೇಟೆಯ ನಿಯಾಜ್ ನಾಸಿರ್ಗೆ ಚಿನ್ನದ ಗೆಲುವು Ripponpete’s Niyaz Nasir wins first place in…
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…