ಮನಸ್ಸುಗಳನ್ನು ಕಟ್ಟುವ ಪ್ರಕ್ರಿಯೆಯೇ ರಂಗಭೂಮಿ- ಡಾ. ರತ್ನಾಕರ ಸಿ ಕುನುಗೋಡು.
ರಿಪ್ಪನ್ ಪೇಟೆ : ಎಲ್ಲ ಭೇದಗಳನ್ನು ಅಳಿಸಿ ಸಮತೆಯ ಕಣ್ಣಲ್ಲಿ ಒಡೆದ ಮನಸ್ಸುಗಳನ್ನು ಕಟ್ಟುವ ಸಮರ್ಥ ಮಾಧ್ಯಮ ರಂಗಭೂಮಿ. ರಂಗಭೂಮಿಯ ಮುಖಾಂತರ ಆರೋಗ್ಯಕರ ಮನಸ್ಸುಳ್ಳ ಯುವಜನತೆಯನ್ನು ರೂಪಿಸುವ ತುರ್ತು ಇದೆ ಎಂದು ರಿಪ್ಪನ್ ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಸಹಾಯಕ ಪ್ರಾಧ್ಯಾಪಕ ಡಾ. ರತ್ನಾಕರ ಸಿ ಕುನುಗೋಡು ಹೇಳಿದರು.
ದಿ. ರೇಣುಕಪ್ಪಗೌಡ ಪ್ರತಿಷ್ಠಾನ, ಮಲೆನಾಡು ಕಲಾತಂಡ ಮಸರೂರು ಹಾಗ ವಿವಿಧ ಸಂಘಸಂಸ್ಥೆಗಳ ಸಹಯೋಗದಲ್ಲಿ ಪಟ್ಟಣದ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ’ ವಿಶ್ವ ರಂಗಭೂಮಿ ದಿನಾಚರಣೆಯಲ್ಲಿ’ ‘ ರಂಗಭೂಮಿ ಅಂದು ಮತ್ತು ಇಂದು’ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡುತ್ತಾ; ಆದಿಮ ರಂಗ ಕ್ರಿಯೆಗಳು ಹಸಿವು, ಫಲವತ್ತತೆ, ಚರಿತ್ರೆಯ ಪ್ರಸರಣ , ಆರಾಧನೆ ಹಾಗೂ ಆಧ್ಯಾತ್ಮಿಕತೆಯ ಅಂಶಗಳನ್ನು ಒಳಗೊಂಡ ಪ್ರಕ್ರಿಯೆಯಾಗಿ ಮನುಕುಲದ ಅವಿಭಾಜ್ಯ ಅಂಗವಾಗಿ ಬೆಳೆದುಬಂದಿವೆ. ರಂಗಭೂಮಿ ಯ ಪರಿಕಲ್ಪನೆ ವಿಶಾಲವಾಗಿದ್ದು ಇಂದು ನಾನಾ ರೂಪಾಂತರಗಳ ಮೂಲಕ ತನ್ನ ಜೀವಂತಿಕೆಯನ್ನು ಕಾಪಿಟ್ಟುಕೊಂಡಿದೆ ಎಂದರು.
ಹಿರಿಯ ಸಾಹಿತಿ ಅ. ಹ. ಪಾಟೀಲ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ರಂಗಕರ್ಮಿ ಗಣೇಶ ಕೆಂಚನಾಲ ಪ್ರಾಸ್ತಾವಿಕ ಮಾತನಾಡಿ; ಮಕ್ಕಳ ಬೇಸಿಗೆ ಶಿಬಿರವನ್ನು ಹಮ್ಮಿಕೊಂಡಿದ್ದು ಪೋಷಕರು ತಮ್ಮ ಮಕ್ಕಳನ್ನು ಶಿಬಿರಕ್ಕೆ ಸೇರಿಸುವ ಮೂಲಕ ರಂಗಭೂಮಿಯ ಜೀವಂತಿಕೆಗೆ ಸಹಕರಿಸುವಂತೆ ಮನವಿ ಮಾಡಿದರು.
ಕು. ಸಂಗೀತಾ ಅವರು ರಂಗ ಗೀತೆಗಳನ್ನು ಪ್ರಸ್ತುತಪಡಿಸಿದರು. ಲಕ್ಷ್ಮೀ ಭದ್ರಾವತಿ ಅವರು ಕಲ್ಯಾಣ ಕ್ರಾಂತಿಯ ತುಣುಕನ್ನು ಏಕವ್ಯಕ್ತಿ ಪ್ರದರ್ಶನ ನೀಡಿದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ಚಂದ್ರಶೇಖರ, ಹರೀಶ್ ಮೊದಲಾದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್