ಕರ್ನಾಟಕ ರಾಜ್ಯದ ವಿಧಾನಸಭೆ ಚುನಾವಣೆ ಇನ್ನೇನೂ ಕೆಲವೆ ದಿನಗಳಲ್ಲಿ ನಡೆಯಲಿದ್ದು ಈ ತಿಂಗಳ ಅಂತ್ಯದಲ್ಲಿ ನೀತಿಸಂಹಿತೆ ಜಾರಿಯಾಗುವ ಸಾಧ್ಯತೆ ಇದೆ.
ಸಾಗರ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಆಕಾಂಕ್ಷಿಗಳ ದೊಡ್ಡ ಪಟ್ಟಿಯೇ ಇದ್ದು ಇನ್ನೂ ಟಿಕೆಟ್ ಘೋಷಣೆಯಾಗಿಲ್ಲ ಆದರೆ ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ ರವರ ಅಭಿಮಾನಿಗಳು ಈಗಲೇ ಚುನಾವಣೆಯ ಖರ್ಚುವೆಚ್ಚಗಳಿಗೆ ದೇಣಿಗೆ ನೀಡಲು ಸನ್ನದ್ದರಾಗಿದ್ದು ತಾ ಮುಂದೂ ನಾ ಮುಂದೂ ಎನ್ನುವ ರೀತಿಯಲ್ಲಿ ಸ್ಪರ್ಧೆಗೆ ಇಳಿದಿದ್ದಾರೆ.
ವಿರೋಧಿ ಅಭ್ಯರ್ಥಿಗಳು ಹಣದ ಹೊಳೆ ಹರಿಸುತ್ತಾರೆ ಎಂದು ಹಿಂಜರಿಕೆ ಬೇಡ, ನೀವು ಹಣ ಖರ್ಚು ಮಾಡುವುದು ಬೇಡ,ನಮ್ಮ ವ್ಯಾಪ್ತಿಯ ಬೂತ್ನ ಹೊಣೆಯನ್ನು ನಾವು ಹೊರುತ್ತೇವೆ ಎನ್ನುತ್ತಿದ್ದಾರೆ ಬೇಳೂರು ಗೋಪಾಲಕೃಷ್ಣ ರ ಕಟ್ಟಾ ಅಭಿಮಾನಿಗಳು.
ಪೊಸ್ಟ್ ಮ್ಯಾನ್ ಸುದ್ದಿ ಸಂಸ್ಥೆಗೆ ಲಭಿಸಿರುವ ಖಚಿತ ಮಾಹಿತಿ ಪ್ರಕಾರ ಸಾಗರ ವಿಧಾನಸಭಾ ಕ್ಷೇತ್ರದ ನೂರಾರು ಅಭಿಮಾನಿಗಳು ಲಕ್ಷಾಂತರ ರೂ ಹಣ ದೇಣಿಗೆ ನೀಡಲು ಮುಂದಾಗುತಿದ್ದಾರೆ ಎನ್ನಲಾಗುತ್ತಿದೆ.
ಹೊಸನಗರ ತಾಲೂಕಿನ ರಿಪ್ಪನ್ಪೇಟೆ ಪಟ್ಟಣದ ಬೇಳೂರು ಅಭಿಮಾನಿಗಳಾದ ವರ್ತಕರೊಬ್ಬರು ಸಂಪೂರ್ಣ ಕೆರೆಹಳ್ಳಿ ಹೋಬಳಿಯ ಚುನಾವಣೆ ಖರ್ಚು ವೆಚ್ಚಗಳನ್ನು ನೋಡಿಕೊಳ್ಳುವುದಾಗಿ ಗೋಪಾಲಕೃಷ್ಣ ಬೇಳೂರು ಮುಂದೆ ಪ್ರಸ್ತಾಪಿಸಿದಾಗ ನನಗೆ ಅಭಿಮಾನಿಗಳ ಪ್ರೀತಿ ವಿಶ್ವಾಸವೇ ಮುಖ್ಯ ಹೊರತು ದೇಣಿಗೆ ಮುಖ್ಯವಲ್ಲ ಎಂದು ದೇಣಿಗೆ ಪ್ರಸ್ತಾಪವನ್ನು ನಯವಾಗಿ ತಿರಸ್ಕರಿಸಿದ್ದಾರೆ ಎಂದು ತಿಳಿದುಬಂದಿದೆ.
ತಾಳಗುಪ್ಪ ಗ್ರಾಮದ ವೆಂಕಟೇಶ್ ಎಂಬುವವರು ತಮ್ಮ 1 ಎಕರೆ ತೋಟವನ್ನು ಮಾರಿ 45 ಲಕ್ಷ ರೂ ಹಣವನ್ನು ಬೇಳೂರು ಚುನಾವಣೆಗೆ ನೀಡುತ್ತೇನೆ ಎಂದು ಹೇಳಿದ್ದು ಈಗಾಗಲೇ ಜಾಗ ಮಾರಾಟ ಮಾಡಲು ಗಿರಾಕಿಯನ್ನು ಕೂಡ ಹುಡುಕಿಕೊಂಡಿದ್ದಾರೆ.ಇದಕ್ಕೆ ಅವರ ಪತ್ನಿಯ ಸಮ್ಮತಿ ಕೂಡ ಇದೆ.
ಈ ಬಗ್ಗೆ ವೆಂಕಟೇಶ್ ಬಳಿ ಕೇಳಿದರೇ ಬೇಳೂರು ಗೋಪಾಲಕೃಷ್ಣ ರವರಿಗೆ ಅಧಿಕಾರದ ಮದ ಇಲ್ಲ, ಜನರೊಂದಿಗೆ ಪ್ರೀತಿಯಿಂದ ನಡೆದುಕೊಳ್ಳುತ್ತಾರೆ ಕಳೆದ ಬಾರಿ ಅವರಿಗೆ ಕೊನೆ ಕ್ಷಣದಲ್ಲಿ ಟಿಕೆಟ್ ನೀಡದೇ ಮೋಸ ಮಾಡಿದ್ದಾರೆ ಆದರೆ ಈ ಬಾರಿ ಅವರನ್ನು ಶಾಸಕರನ್ನಾಗಿ ನೋಡುವ ಹಂಬಲದಿಂದ ಈ ನಿರ್ಧಾರ ಕೈಗೊಂಡಿದ್ದೇನೆ ಎನ್ನುತ್ತಾರೆ.
ಒಟ್ಟಾರೆಯಾಗಿ ಅಧಿಕಾರವಿಲ್ಲದೇ ಕಳೆದ 10 ವರ್ಷಗಳಿಂದ ಕ್ಷೇತ್ರದಲೇ ಇದ್ದು ಅಪಾರ ಅಭಿಮಾನಿ ಬಳಗವನ್ನು ಹೊಂದಿರುವ ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ ವಿಧಾನಸಭಾ ಚುನಾವಣೆಯನ್ನು ಎದುರಿಸಲು ಅವರ ಅಭಿಮಾನಿಗಳು ಅವರ ಜೊತೆ ಟೊಂಕ ಕಟ್ಟಿ ನಿಂತಿದ್ದಾರೆ.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್