ಶಿವಮೊಗ್ಗ ನಗರದ ವಿಮಾನ ನಿಲ್ದಾಣಕ್ಕೆ ಮತ್ತೊಮ್ಮೆ ಬರಲಿದ್ದಾರೆ ಪ್ರಧಾನಿ ಮೋದಿ. ಇದರಿಂದ ನಗರಕ್ಕೆ ಅವರ ಭೇಟಿ ಸರಿಸುಮಾರು ಒಂದು ತಿಂಗಳ ಅವಧಿಯ ಒಳಗೆ ಎರಡು ಬಾರಿ ಭೇಟಿಯಾಗಲಿದೆ.
ಈ ಹಿನ್ನಲೆಯಲ್ಲಿ ಬಿಜೆಪಿ ಮಾ.25 ರಂದು ಪ್ರಧಾನಿ ಮೋದಿ ದಾವಣಗೆರೆಗೆ ಆಗಮಿಸುತ್ತಿದ್ದು, ದೆಹಲಿಯಿಂದ ಬೆಂಗಳೂರಿಗೆ ವಿಮಾನದಲ್ಲಿ ಬೆಂಗಳೂರಿನಿಂದ ನೇರವಾಗಿ ದಾವಣಗೆರೆಗೆ ಹೆಲಿಕಾಪ್ಟರ್ ನಲ್ಲಿ ಆಗಮಿಸಲಿದ್ದಾರೆ. ದಾವಣಗೆರೆಯಲ್ಲಿ ಸಮಾರೋಪ ಸಮಾರಂಭದಲ್ಲಿ ಭಾಗಿಯಾದ ಪ್ರಧಾನಿ ಹೆಲಿಕಾಫ್ಟರ್ ಮೂಲಕ ಶಿವಮೊಗ್ಗಕ್ಕೆ ಬರಲಿದ್ದಾರೆ.
ಶಿವಮೊಗ್ಗದ ಏರ್ ಪೋರ್ಟ್ ಗೆ ಹೆಲಿಕಾಪ್ಟರ್ ನಿಂದ ಬರುವ ಪ್ರಧಾನಿ ಮೋದಿ ನಂತರ ದೆಹಲಿಗೆ ವಿಮಾನದಲ್ಲಿ ಪ್ರಯಾಣ ಬೆಳಸಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರು ದಾವಣಗೆರೆಯಿಂದ ಹುಬ್ಬಳ್ಳಿ ವಿಮಾನ ನಿಲ್ಧಾಣಕ್ಕೆ ತೆರಳಿ ಅಲ್ಲಿಂದ ದೆಹಲಿಗೆ ಹೋಗುವ ಅವಕಾಶವಿತ್ತು. ಆದಾಗ್ಯು ಅವರು, ಶಿವಮೊಗ್ಗ ಏರ್ಫೋರ್ಟ್ನ ಮೂಲಕ ದೆಹಲಿಗೆ ತೆರಳುತ್ತಿದ್ದಾರೆ. ಏರ್ಪೋರ್ಟ್ನಲ್ಲಿ ಪ್ರಧಾನಿ ನರೇಂದ್ರ ಮೋದಿಯುವರು ಯಾರನ್ನು ಭೇಟಿಯಾಗುವುದಿಲ್ಲ ಎನ್ನಲಾಗುತ್ತಿದೆ. ಇದರ ಹೊರತಾಗಿ ನರೇಂದ್ರ ಮೋದಿಯವರು ಶಿವಮೊಗ್ಗ ಏರ್ಫೋರ್ಟ್ಗೆ ಮತ್ತೊಮ್ಮೆ ಭೇಟಿಕೊಟ್ಟು ಅಲ್ಲಿಂದಲೇ ದೆಹಲಿಗೆ ಸಾಗುತ್ತಿರುವುದು ವಿಶೇಷ ಸಂದೇಶ ರವಾನೆ ಮಾಡಲಿದೆ.
ಇದೇ ಫೆಬ್ರವರಿ 27 ರಂದು ಪ್ರಧಾನಿ ನರೇಂದ್ರ ಮೋದಿ ಖುದ್ದು ವಿಮಾನದಲ್ಲಿ ಶಿವಮೊಗ್ಗ ಏರ್ಫೋರ್ಟ್ನಲ್ಲಿ ಲ್ಯಾಂಡ್ ಆಗಿ, ಉದ್ಘಾಟಿಸಿದ್ದರು. ಆ ಬಳಿಕ ಇದೀಗ ಮತ್ತೊಮ್ಮೆ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿರುವ ಪ್ರಧಾನಿ ನರೇಂದ್ರ ಮೋದಿ, ರಾಜ್ಯ ಹಾಗು ಶಿವಮೊಗ್ಗದ ಜನರಿಗೆ ಏರ್ಪೋರ್ಟ್ನ ವಿಶೇಷತೆಯನ್ನು ಪರೋಕ್ಷವಾಗಿ ಸಾರಲಿದ್ದಾರೆ.
ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…
RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ - ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು…
ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ Former Education Minister Kimmane Ratnakar…
ಪಟಗುಪ್ಪ ಸೇತುವೆ ಬಳಿಯ ಹಿನ್ನೀರಿನಲ್ಲಿ ಅನಾಮಧೇಯ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ An unidentified man’s partially decomposed…
ಬಸ್-ಬೈಕ್ ಭೀಕರ ಅಪಘಾತ; 27 ವರ್ಷದ ಮೆಕ್ಯಾನಿಕ್ ಸ್ಥಳದಲ್ಲೇ ಸಾವು A 27-year-old mechanic was killed in a…
ಅಕ್ರಮ ವಿದ್ಯುತ್ ಬೇಲಿಗೆ ಸಿಲುಕಿ ಮೂರು ವರ್ಷದ ಕರಡಿ ಸಾವು - ತೋಟದ ಮಾಲೀಕನ ಬಂಧನ A three-year-old male…