ಶಿವಮೊಗ್ಗ ನಗರದ ವಿಮಾನ ನಿಲ್ದಾಣಕ್ಕೆ ಮತ್ತೊಮ್ಮೆ ಬರಲಿದ್ದಾರೆ ಪ್ರಧಾನಿ ಮೋದಿ. ಇದರಿಂದ ನಗರಕ್ಕೆ ಅವರ ಭೇಟಿ ಸರಿಸುಮಾರು ಒಂದು ತಿಂಗಳ ಅವಧಿಯ ಒಳಗೆ ಎರಡು ಬಾರಿ ಭೇಟಿಯಾಗಲಿದೆ.
ಈ ಹಿನ್ನಲೆಯಲ್ಲಿ ಬಿಜೆಪಿ ಮಾ.25 ರಂದು ಪ್ರಧಾನಿ ಮೋದಿ ದಾವಣಗೆರೆಗೆ ಆಗಮಿಸುತ್ತಿದ್ದು, ದೆಹಲಿಯಿಂದ ಬೆಂಗಳೂರಿಗೆ ವಿಮಾನದಲ್ಲಿ ಬೆಂಗಳೂರಿನಿಂದ ನೇರವಾಗಿ ದಾವಣಗೆರೆಗೆ ಹೆಲಿಕಾಪ್ಟರ್ ನಲ್ಲಿ ಆಗಮಿಸಲಿದ್ದಾರೆ. ದಾವಣಗೆರೆಯಲ್ಲಿ ಸಮಾರೋಪ ಸಮಾರಂಭದಲ್ಲಿ ಭಾಗಿಯಾದ ಪ್ರಧಾನಿ ಹೆಲಿಕಾಫ್ಟರ್ ಮೂಲಕ ಶಿವಮೊಗ್ಗಕ್ಕೆ ಬರಲಿದ್ದಾರೆ.
ಶಿವಮೊಗ್ಗದ ಏರ್ ಪೋರ್ಟ್ ಗೆ ಹೆಲಿಕಾಪ್ಟರ್ ನಿಂದ ಬರುವ ಪ್ರಧಾನಿ ಮೋದಿ ನಂತರ ದೆಹಲಿಗೆ ವಿಮಾನದಲ್ಲಿ ಪ್ರಯಾಣ ಬೆಳಸಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರು ದಾವಣಗೆರೆಯಿಂದ ಹುಬ್ಬಳ್ಳಿ ವಿಮಾನ ನಿಲ್ಧಾಣಕ್ಕೆ ತೆರಳಿ ಅಲ್ಲಿಂದ ದೆಹಲಿಗೆ ಹೋಗುವ ಅವಕಾಶವಿತ್ತು. ಆದಾಗ್ಯು ಅವರು, ಶಿವಮೊಗ್ಗ ಏರ್ಫೋರ್ಟ್ನ ಮೂಲಕ ದೆಹಲಿಗೆ ತೆರಳುತ್ತಿದ್ದಾರೆ. ಏರ್ಪೋರ್ಟ್ನಲ್ಲಿ ಪ್ರಧಾನಿ ನರೇಂದ್ರ ಮೋದಿಯುವರು ಯಾರನ್ನು ಭೇಟಿಯಾಗುವುದಿಲ್ಲ ಎನ್ನಲಾಗುತ್ತಿದೆ. ಇದರ ಹೊರತಾಗಿ ನರೇಂದ್ರ ಮೋದಿಯವರು ಶಿವಮೊಗ್ಗ ಏರ್ಫೋರ್ಟ್ಗೆ ಮತ್ತೊಮ್ಮೆ ಭೇಟಿಕೊಟ್ಟು ಅಲ್ಲಿಂದಲೇ ದೆಹಲಿಗೆ ಸಾಗುತ್ತಿರುವುದು ವಿಶೇಷ ಸಂದೇಶ ರವಾನೆ ಮಾಡಲಿದೆ.
ಇದೇ ಫೆಬ್ರವರಿ 27 ರಂದು ಪ್ರಧಾನಿ ನರೇಂದ್ರ ಮೋದಿ ಖುದ್ದು ವಿಮಾನದಲ್ಲಿ ಶಿವಮೊಗ್ಗ ಏರ್ಫೋರ್ಟ್ನಲ್ಲಿ ಲ್ಯಾಂಡ್ ಆಗಿ, ಉದ್ಘಾಟಿಸಿದ್ದರು. ಆ ಬಳಿಕ ಇದೀಗ ಮತ್ತೊಮ್ಮೆ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿರುವ ಪ್ರಧಾನಿ ನರೇಂದ್ರ ಮೋದಿ, ರಾಜ್ಯ ಹಾಗು ಶಿವಮೊಗ್ಗದ ಜನರಿಗೆ ಏರ್ಪೋರ್ಟ್ನ ವಿಶೇಷತೆಯನ್ನು ಪರೋಕ್ಷವಾಗಿ ಸಾರಲಿದ್ದಾರೆ.
ಗರ್ತಿಕೆರೆಯಲ್ಲಿ ವ್ಯಕ್ತಿಯ ಮೇಲೆ ಕಬ್ಬಿಣದ ರಾಡ್ ನಿಂದ ಮಾರಣಾಂತಿಕ ಹಲ್ಲೆ; ತಲೆಯ ಮೇಲೆ ಕಾಲಿಟ್ಟು ಅಟ್ಟಹಾಸ ಮೆರೆದ ಭೂಫ A…
ಚುಂಚಾದ್ರಿ ಮಹಿಳಾ ಒಕ್ಕಲಿಗರ ವೇದಿಕೆಯಿಂದ ಸ್ವಾತಂತ್ರ್ಯ ದಿನಾಚರಣೆ Ripponpete Chunchadri Mahila Okkaligar Vedike celebrated the 80th Independence…
ಕೆಂಚನಾಲದಲ್ಲಿ ಮನೆ ಮೇಲೆ ಉರುಳಿದ ತೆಂಗಿನ ಮರ : ತಪ್ಪಿದ ಭಾರಿ ಅನಾಹುತ - ಸಂತ್ರಸ್ತ ಕುಟುಂಬಕ್ಕೆ ಶಾಸಕರ ಸೂಚನೆಯಂತೆ…
ತೋಟದ ಮಧ್ಯೆ ಅಕ್ರಮ ಗಾಂಜಾ ಬೆಳೆ: ಲಕ್ಷಾಂತರ ರೂ ಮೌಲ್ಯದ ಗಾಂಜಾ ಗಿಡಗಳು ವಶ, ಇಬ್ಬರ ಬಂಧನ Anandapura Police…
ಪೊಲೀಸ್ ಅಧಿಕಾರಿಗಳೆಂದು ನಂಬಿಸಿ ಮಹಿಳೆಯಿಂದ ಚಿನ್ನದ ಸರ ದೋಚಿದ್ದ ಆರೋಪ - ಇಬ್ಬರ ಬಂಧನ Two interstate thieves from…
ಹೊಸನಗರ ತಾಲೂಕಿನಾದ್ಯಂತ ಮಸೀದಿಗಳಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ Independence Day celebrations were held with patriotic fervour at…