ಮಿಸ್ಟರ್ ಹಾಲಪ್ಪ ಸಾಗರ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ಬಹಿರಂಗ ಚರ್ಚೆಗೆ ಬನ್ನಿ – ಬೇಳೂರು ಸವಾಲ್|sagara

ಮಿಸ್ಟರ್ ಹಾಲಪ್ಪ ಸಾಗರ ಕ್ಷೇತ್ರದ ಅಭಿವೃದ್ಧಿಗೆ ನಿಮ್ಮ ಕೊಡುಗೆಯೇನು, ನಾನು ಮತ್ತು ಕಾಗೋಡು ನೀಡಿದ ಕೊಡುಗೆ ಏನು ಎನ್ನುವುದನ್ನು ಚರ್ಚೆ ಮಾಡಲು ಗಾಂಧಿ ಮೈದಾನಕ್ಕೆ ಬನ್ನಿ ಎಂದು ಸಾಗರ ವಿಧಾನಸಭಾ ಕ್ಷೇತ್ರದ ಘೋಷಿತ ಕಾಂಗ್ರೆಸ್ ಅಭ್ಯರ್ಥಿ ಗೋಪಾಲಕೃಷ್ಣ ಬೇಳೂರು ಸವಾಲು ಎಸೆದಿದ್ದಾರೆ.




ಇಲ್ಲಿನ ಮಹಿಳಾ ಸಮಾಜದ ಆವರಣದಲ್ಲಿ ಗುರುವಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸಾಗರಕ್ಕೆ ಕುಡಿಯುವ ನೀರು ತರಲು 70 ಕೋಟಿ ರೂ. ಬಂದದ್ದು ನನ್ನ ಕಾಗೋಡು ಅವಧಿಯಲ್ಲಿ, ತಹಶೀಲ್ದಾರ್ ಕಚೇರಿ ನಿರ್ಮಾಣಕ್ಕೆ ಹಣ ಬಂದಿದ್ದು ಕಾಗೋಡು ಅವಧಿಯಲ್ಲಿ ಎನ್ನುವುದು ಮರೆಯಬೇಡಿ. ತಹಶೀಲ್ದಾರ್ ಕಚೇರಿಯನ್ನು ಈತನಕ ಲೋಕಾರ್ಪಣೆ ಮಾಡಲು ಆಗದ ನೀವು ಮಾವ ಅಳಿಯ ಏನು ಅಭಿವೃದ್ಧಿ ಮಾಡಿಲ್ಲ ಎಂದು ಹೇಳುತ್ತಿರುವುದು ಹಾಸ್ಯಾಸ್ಪದವಾಗಿದ್ದು, ಚರ್ಚೆಗೆ ಬನ್ನಿ ಎಂದು ಸವಾಲು ಎಸೆದರು.

ನನಗೆ ಟಿಕೆಟ್ ಸಿಗುವುದಿಲ್ಲ ಎಂದು ಹಾಲಪ್ಪ ಹೋದಲ್ಲಿ ಬಂದಲ್ಲಿ ಹೇಳಿದ್ದರು. ಈಗ ನನಗೆ ಕಾಂಗ್ರೆಸ್ ಪಕ್ಷ ಟಿಕೆಟ್ ಕೊಟ್ಟಿದೆ. ಆದರೆ ಬಿಜೆಪಿಯಲ್ಲಿ ಹಾಲಪ್ಪ ಅವರಿಗೆ ಟಿಕೆಟ್ ಕೊಡಬೇಡಿ ಎಂದು ಸಭೆಗಳನ್ನು ನಡೆಸಲಾಗುತ್ತಿದೆ. ಒಂದೊಮ್ಮೆ ಹಾಲಪ್ಪ ಅವರಿಗೆ ಟಿಕೆಟ್ ಕೊಟ್ಟರೆ ಮತದಾರರ ಕೈಕಾಲು ಹಿಡಿದು ಅವರನ್ನು ಸೋಲಿಸುತ್ತೇವೆ ಎಂದು ಬಿಜೆಪಿ ಹಿರಿಯ ನಾಯಕರೇ ಸಭೆ ನಡೆಸಿ ಕರೆ ನೀಡುತ್ತಿದ್ದಾರೆ. ಎಂಡಿಎಫ್‌ನಲ್ಲಿ ಗಲಾಟೆ ಮಾಡಿಸಿ ಬ್ರಾಹ್ಮಣ ಸಮುದಾಯದ ಶ್ರೀಪಾದ ಹೆಗಡೆ, ಲಿಂಗಾಯಿತ ಸಮಾಜದ ಜಗದೀಶ್ ಗೌಡ ಅವರ ಮೇಲೆ ಹಲ್ಲೆ ನಡೆಸಿದ್ದೇ ಹಾಲಪ್ಪ ಅವರ ಸಾಧನೆಯಾಗಿದೆ. ಭ್ರಷ್ಟಾಚಾರದ ಹಣ, ಅಹಂಕಾರವನ್ನು ತುಂಬಿಕೊಂಡಿರುವ ಶಾಸಕ ಹಾಲಪ್ಪ ಅವರ ದಬ್ಬಾಳಿಕೆ ರಾಜಕಾರಣವನ್ನು ಸಾಗರ ಕ್ಷೇತ್ರದ ಜನರು ಸಹಿಸುವುದಿಲ್ಲ ಎಂದರು.




ಹಿಂದಿನ ಚುನಾವಣೆಯಲ್ಲಿ ಯಡಿಯೂರಪ್ಪ ಮುಖ್ಯಮಂತ್ರಿಯಾಗುತ್ತಾರೆ ಎನ್ನುವ ಕಾರಣಕ್ಕೆ ಜನರು ಹಾಲಪ್ಪ ಕೈ ಹಿಡಿದಿದ್ದಾರೆ. ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತಂದ ಯಡಿಯೂರಪ್ಪ ಅವರನ್ನು ಕಣ್ಣೀರು ಹಾಕಿಸಿ ಮುಖ್ಯಮಂತ್ರಿ ಸ್ಥಾನದಿಂದ ಇಳಿಸಿದ ಬಿಜೆಪಿ ವರ್ತನೆಯನ್ನು ರಾಜ್ಯದ ಜನರು ಯಾವತ್ತೂ ಕ್ಷಮಿಸುವುದಿಲ್ಲ. ಸಾಗರ ಕ್ಷೇತ್ರವ್ಯಾಪ್ತಿಯಲ್ಲಿ ಒಂದೂ ನಿವೇಶನ ಕೊಟ್ಟಿಲ್ಲ, ತಮ್ಮ ನೆಂಟರಿಗೆ ಬಗರ್‌ಹುಕುಂ ಭೂಮಿ ಕೊಟ್ಟಿದ್ದಾರೆ. ಎಲ್ಲೆಂದರಲ್ಲಿ ಮದ್ಯದಂಗಡಿ ತೆರೆದು ಸಾಗರವನ್ನು ಗೋವಾವನ್ನಾಗಿ ಮಾರ್ಪಡಿಸುತ್ತಿದ್ದಾರೆ. ರಾಜ್ಯದ ಬಿಜೆಪಿ ಸರ್ಕಾರ ಜನವಿರೋಧಿಯಾಗಿದೆ. ಪಕ್ಷದಲ್ಲಿ ಸಣ್ಣಪುಟ್ಟ ಭಿನ್ನಾಭಿಪ್ರಾಯವಿದ್ದರೂ ಕಾಗೋಡು ನೇತೃತ್ವದಲ್ಲಿ ಎಲ್ಲವನ್ನೂ ಸರಿಪಡಿಸಿಕೊಳ್ಳುತ್ತೇವೆ. ಮೇ 10 ರಂದು ನಡೆಯುವ ಚುನಾವಣೆಯಲ್ಲಿ ತಮ್ಮನ್ನು ಗೆಲ್ಲಿಸುವ ಮೂಲಕ ಎಲ್ಲ ವರ್ಗದ ಹಿತಕಾಯುವ ಕಾಂಗ್ರೇಸ್ ಪಕ್ಷವನ್ನು ಬೆಂಬಲಿಸಲು ಮನವಿ ಮಾಡಿದರು.

ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ರಾಜ್ಯದಲ್ಲಿ ಕಾಂಗ್ರೆಸ್ ಮಾತ್ರ ಎಲ್ಲ ವರ್ಗವನ್ನು ಒಟ್ಟಿಗೆ ತೆಗೆದುಕೊಂಡು ಹೋಗುವ, ಸಾಮಾಜಿಕ ನ್ಯಾಯ ಕಲ್ಪಿಸುವ ಪಕ್ಷವಾಗಿದೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಜನರಿಗೆ ಏನೆಲ್ಲಾ ಸೌಲಭ್ಯ ಕೊಡುತ್ತೇವೆ ಎಂದು ಗ್ಯಾರೆಂಟಿ ಕಾರ್ಡ್ ಮೂಲಕ ಭರವಸೆ ನೀಡಿದ್ದಾರೆ. ಸಾಗರ ಕ್ಷೇತ್ರವ್ಯಾಪ್ತಿಯಲ್ಲಿ ಅಭಿವೃದ್ಧಿ ನಿಂತ ನೀರಾಗಿದ್ದು, ಗೋಪಾಲಕೃಷ್ಣ ಬೇಳೂರು ಅವರನ್ನು ಗೆಲ್ಲಿಸುವ ಮೂಲಕ ರಾಜ್ಯದಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ತರಲು ಅವಕಾಶ ಕಲ್ಪಿಸಬೇಕು ಎಂದು ಮನವಿ ಮಾಡಿದರು.




ವಿಧಾನ ಪರಿಷತ್ ಮಾಜಿ ಸದಸ್ಯೆ ಪ್ರಫುಲ್ಲಾ ಮಧುಕರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಆರ್.ಜಯಂತ್, ಪ್ರಚಾರ ಸಮಿತಿ ಜಿಲ್ಲಾಧ್ಯಕ್ಷ ಎನ್.ರಮೇಶ್ ಮಾತನಾಡಿದರು. ವೇದಿಕೆಯಲ್ಲಿ ಸುರೇಶಬಾಬು, ಮಧುಮಾಲತಿ, ಸುಮಂಗಲಾ ರಾಮಕೃಷ್ಣ, ಜ್ಯೋತಿ ಕೋವಿ, ರವಿಕುಮಾರ್, ಕೆ.ಹೊಳೆಯಪ್ಪ, ಮಕ್ಬೂಲ್ ಅಹ್ಮದ್, ಎಲ್.ಟಿ.ತಿಮ್ಮಪ್ಪ, ಗಣಪತಿ ಮಂಡಗಳಲೆ, ಸಬೀನಾ ತನ್ವೀರ್, ಅಣ್ಣಪ್ಪ ಭೀಮನೇರಿ, ತಸ್ರೀಫ್ ಇಬ್ರಾಹಿಂ, ಎಲ್.ಚಂದ್ರಪ್ಪ ಇನ್ನಿತರರು ಹಾಜರಿದ್ದರು. ತಾರಾಮೂರ್ತಿ ಸ್ವಾಗತಿಸಿದರು. ಮೈಕೆಲ್ ಡಿಸೋಜ ವಂದಿಸಿದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ – ಕೆರೆಗೆ ಹಾರಿ ಸಾಗರದ ಯುವತಿ

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ - ಕೆರೆಗೆ ಹಾರಿ ಸಾಗರದ ಯುವತಿ A 22-year-old woman from Sagara…

3 hours ago

ಬೆದರಿಸಿ ಹಣ, ಮೊಬೈಲ್ ದೋಚಿದ್ದ ಮೂವರು ಆರೋಪಿಗಳು ಪೊಲೀಸರ ಬಲೆಗೆ

ಬೆದರಿಸಿ ಹಣ, ಮೊಬೈಲ್ ದೋಚಿದ್ದ ಆರೋಪಿಗಳು ಪೊಲೀಸರ ಬಲೆಗೆ Shivamogga Tunganaagar police arrested three accused in a…

1 day ago

ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ

ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ Six people were arrested for…

1 day ago

ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ

ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ South Western Railway extends temporary stoppages…

1 day ago

ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ

ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ Tourist bus and fish transport goods vehicle…

1 day ago

ಬೈಕ್ ಸವಾರನ ಮೇಲೆ ಮುಸಿಯ ದಾಳಿ; ಗಂಭೀರ ಗಾಯ

ಬೈಕ್ ಸವಾರನ ಮೇಲೆ ಮುಸಿಯ ದಾಳಿ; ಗಂಭೀರ ಗಾಯ A bike rider was seriously injured after a…

1 day ago