ರಂಜಾನ್ ಮಾಸದ ಚಂದ್ರ ದರ್ಶನವಾದ ಹಿನ್ನೆಲೆ ನಾಳೆಯಿಂದ ಕೇರಳ ಮತ್ತು ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ರಂಜಾನ್ ಉಪವಾಸ ಆರಂಭವಾಗಲಿದೆ.
ಇಂದು ರಂಝಾನ್ ತಿಂಗಳ ಚಂದ್ರ ದರ್ಶನ ವಾಗಿರುವುದರಿಂದ ಮಾರ್ಚ್ 23 (ಗುರುವಾರ) ರಂದು ರಂಝಾನ್ ಉಪವಾಸ ವ್ರತ ಪ್ರಾರಂಭವಾಗುತ್ತದೆ, ಮುಸ್ಲಿಮರ ಪವಿತ್ರ ರಮಝಾನ್ ಉಪವಾಸ ತಿಂಗಳ ಪ್ರಥಮ ಚಂದ್ರದರ್ಶನವು ಇಂದು ಕೇರಳದ ಕಲ್ಲಿಕೋಟೆಯ ಕಾಪಾಡ್ ಎಂಬಲ್ಲಿ ಆಗಿದೆ.
ಈ ಹಿನ್ನೆಲೆಯಲ್ಲಿ ಗುರುವಾರದಿಂದ ರಂಝಾನ್ ಉಪವಾಸ ಆಚರಿಸಲು ದಕ್ಷಿಣ ಕನ್ನಡ ಜಿಲ್ಲಾ ಖಾಝಿ ತ್ವಾಕಾ ಅಹ್ಮದ್ ಮುಸ್ಲಿಯಾರ್ ಪರವಾಗಿ ಕೇಂದ್ರ ಜುಮಾ ಮಸೀದಿಯ ಖತೀಬ್ ಹಾಜಿ ಅಬುಲ್ ಅಕ್ರಂ ಮುಹಮ್ಮದ್ ಬಾಖವಿ ಮತ್ತು ಉಡುಪಿ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಸಂಯುಕ್ತ ಖಾಝಿ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ಹಾಗೂ ಉಳ್ಳಾಲ ಖಾಝಿ ಸೈಯದ್ ಫಝಲ್ ಕೋಯಮ್ಮ ತಂಙಳ್ ಅಲ್ ಬುಖಾರಿ ಹಾಗೂ ಭಟ್ಕಳ ಚಂದ್ರದರ್ಶನ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಹಿನ್ನಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ರಿಪ್ಪನ್ಪೇಟೆ , ಹೊಸನಗರ ,ಕೋಣಂದೂರು ,ತೀರ್ಥಹಳ್ಳಿ ಪಟ್ಟಣಗಳಲ್ಲಿ ಇಂದಿನಿಂದ 30 ದಿನಗಳ ರಮಳಾನ್ ಉಪವಾಸ ವ್ರತ ಪ್ರಾರಂಭವಾಗಿದೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್