ರಿಪ್ಪನ್‌ಪೇಟೆ : ಅಪ್ರಾಪ್ತೆಯನ್ನು ಗರ್ಭಿಣಿ ಮಾಡಿ ಯಾರು ಇಲ್ಲದ ದೇವಸ್ಥಾನದಲ್ಲಿ ತಾಳಿ ಕಟ್ಟಿದ ಯುವಕ – ಪೋಕ್ಸೋ ಪ್ರಕರಣ ದಾಖಲು|pocso

ರಿಪ್ಪನ್‌ಪೇಟೆ : ಇತ್ತೀಚೆಗೆ ಶಿವಮೊಗ್ಗ ಜಿಲ್ಲಾದ್ಯಂತ ಪೋಕ್ಸೋ ಪ್ರಕರಣಗಳು ಹೆಚ್ಚುತಿದ್ದು ಅದರಲ್ಲಿ ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಸಕ್ತ ವರ್ಷದಲ್ಲಿ ಹಲವಾರು ಪೋಕ್ಸೋ ಪ್ರಕರಣ ದಾಖಲಾಗುತ್ತಿರುವುದು ಆತಂಕಕಾರಿಯಾದ ಬೆಳವಣಿಗೆಯಾಗಿದೆ.




ಚಿಕ್ಕಜೇನಿ ಗ್ರಾಪಂ ವ್ಯಾಪ್ತಿಯ ಗ್ರಾಮವೊಂದರಲ್ಲಿ ಅಪ್ರಾಪ್ತೆಯನ್ನು ಮದುವೆಯಾಗುವುದಾಗಿ ಪುಸಲಾಯಿಸಿ ನಂತರ ಲೈಂಗಿಕ ಸಂಪರ್ಕ ಬೆಳೆಸಿ ಆಕೆಯನ್ನು ಗರ್ಭಿಣಿ ಮಾಡಿ ಮದುವೆಯಾದ ಯುವಕನ ಮೇಲೆ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾದ ಘಟನೆ ವರದಿಯಾಗಿದೆ.

ನೊಂದ ಬಾಲಕಿಯ ದೂರಿನ ವಿವರ :

ನನ್ನ ಊರಿನ ಪರಿಚಯಸ್ಥ ಯುವಕ ಸುಮಾರು ಮೂರ್ನಾಲ್ಕು ವರ್ಷಗಳಿಂದ ನನಗೆ ಪರಿಚಯವಿದ್ದು ಪರಸ್ಪರ ಪ್ರೀತಿಸುತ್ತಿದ್ದು, ಈ ವಿಚಾರ ನನ್ನ ಮನೆಯಲ್ಲಿ ಗೊತ್ತಿರುವುದಿಲ್ಲ.

2022 ರ ಆಗಸ್ಟ್ 22 ನೇ ತಾರೀಖಿನಂದು ಬೆಳಿಗ್ಗೆ ನನ್ನ ಮನೆಯ ಹತ್ತಿರವಿರುವ ಅಂಗನವಾಡಿ ಹಿಂಭಾಗದ ಕಾಡಿನಲ್ಲಿ ಆತ ಮೊದಲ ಬಾರಿಗೆ ಲೈಂಗಿಕ ಸಂಪರ್ಕ ಬೆಳೆಸಲು ಬಂದಾಗ ಆಗ ನನಗೆ ಇನ್ನು 18 ವರ್ಷ ಆಗಿರದೇ ಇದ್ದು, ನಾನು ಇನ್ನೂ ಚಿಕ್ಕವಳು ಲೈಂಗಿಕ ಸಂಪರ್ಕ ಮಾಡುವುದು ಬೇಡವೆಂದರೂ ನಾನು ನಿನ್ನನ್ನು ಮದುವೆಯಾಗುತ್ತೇನೆಂದು ಏನು ಆಗುವುದಿಲ್ಲವೆಂದು ಬಲವಂತಪಡಿಸಿ ನನ್ನನ್ನು ಒಪ್ಪಿಸಿ ಲೈಂಗಿಕ ಸಂಪರ್ಕ ಮಾಡಿದ್ದು ನಂತರ ಹಲವು ಬಾರಿ ಭೇಟಿಯಾದಾಗ ಅದೇ ಜಾಗದಲ್ಲಿ ಲೈಂಗಿಕ ಸಂಪರ್ಕ ಹೊಂದಿರುತ್ತಾರೆ.




ನಂತರ ನನ್ನ ದೇಹದಲ್ಲಾದ ಬದಲಾವಣೆಯಿಂದ ಅನುಮಾನಗೊಂಡು ಆತನ ಬಳಿಯೇ ಪ್ರೆಗ್ನೆನ್ಸಿ ಕಿಟ್ ತರಿಸಿಕೊಂಡು ಪರೀಕ್ಷೆ ಮಾಡಿದಾಗ ಗರ್ಭಿಣಿಯಾಗಿರುವ ವಿಚಾರ ತಿಳಿಯಿತು.

ನಂತರ ಪರಸ್ಪರ ಇಬ್ಬರೂ ಪ್ರೀತಿಸುತ್ತಿದ್ದರಿಂದ ಮದುವೆಯಾಗಲು ನಿರ್ಧರಿಸಿ ದಿನಾಂಕ: 14‌.03.2023 ರಂದು ರಾತ್ರಿ 10-00 ಗಂಟೆ ಸಮಯದಲ್ಲಿ ಮನೆಯಲ್ಲಿ ಎಲ್ಲರೂ ಮಲಗಿದ ಮೇಲೆ ನಾನು ಮತ್ತು ಪ್ರಿಯತಮನ ಬೈಕ್ ನಲ್ಲಿ ನನ್ನ ಬಟ್ಟೆ, ಆಧಾರ್ ಕಾರ್ಡ್ ಮತ್ತು ಶಾಲಾ ದಾಖಲಾತಿಗಳನ್ನು ತೆಗೆದುಕೊಂಡು ಪ್ರಿಯತಮನ ಸ್ನೇಹಿತನ ಮನೆಗೆ ಹೋಗಿ ರಾತ್ರಿ ಅಲ್ಲೆ ವಾಸವಿದ್ದು, ದಿನಾಂಕ: 15/03/2023 ರಂದು ಸಂಜೆ 4-00 ಗಂಟೆ ಸುಮಾರಿಗೆ ಪ್ರಿಯತಮನ ಮನೆಯ ದೇವರ ಗುಡಿಯ ಮುಂದೆ ಮದುವೆಯಾಗಿರುತ್ತೇವೆ.




ದೇವಸ್ಥಾನದ ಬಾಗಿಲು ಮುಚ್ಚಿದ್ದು ಈ ಸಮಯದಲ್ಲಿ ಯಾರೂ ಇರುವುದಿಲ್ಲ. ಫೋಟೋ ತೆಗೆದಿರುವುದಿಲ್ಲ. ಪ್ರಿಯತಮನ ಸ್ನೇಹಿತನಿಗೂ ಮದುವೆ ವಿಚಾರ ಗೊತ್ತಿದ್ದರೂ ಆತ ಬಂದಿರುವುದಿಲ್ಲ. ನಂತರ ಪ್ರಿಯತಮನ ಸ್ನೇಹಿತನ ಮನೆಗೆ ಮತ್ತೆ ಹೋದೆವು, ಆ ದಿವಸ ಅಲ್ಲಿಯೇ ಉಳಿದುಕೊಂಡು ಮಾರನೆ ದಿನ ದಿನಾಂಕ: 16/03/2023 ರಂದು ಮಧ್ಯಾಹ್ನದ ಸುಮಾರಿಗೆ ನನ್ನ ಪ್ರಿಯತಮ ಸ್ವಿಚ್ ಆಫ್ ಮಾಡಿದ ತನ್ನ ಫೋನನ್ನು ಸ್ವಿಚ್ ಆನ್ ಮಾಡಿದಾಗ ಅವನಿಗೆ ಯಾರೋ ಫೋನ್ ಮಾಡಿ ನಮ್ಮ ಊರಿನ ಅಂಗನವಾಡಿ ಕೇಂದ್ರಕ್ಕೆ ಬರುವಂತೆ ತಿಳಿಸಿದ್ದರಿಂದ ನಾನು ಮತ್ತು ಪ್ರಿಯತಮ ಅವನ ಬೈಕಿನಲ್ಲಿ ನೇರವಾಗಿ ಅಂಗನವಾಡಿ ಕೇಂದ್ರಕ್ಕೆ ಬಂದಿರುತ್ತೇವೆ. ನಂತರ ಅಲ್ಲಿ ಯಾರೋ ಆಶಾ ಕಾರ್ಯಕರ್ತೆ ಮತ್ತು ಇನ್ನೊಬ್ಬರು ಇದ್ದು, ಅವರು ಯಾರೆಂಬುದು ತಿಳಿದಿರುವುದಿಲ್ಲ ಅವರು ನನ್ನನ್ನು ವಿಚಾರಣೆ ಮಾಡಿ ಕರೆದುಕೊಂಡು ಬಂದು ಸಂಜೆ 6-00 ಗಂಟೆ ಸುಮಾರಿಗೆ ಸುರಭಿ ಕೇಂದ್ರ ಶಿವಮೊಗ್ಗಕ್ಕೆ ಬಿಟ್ಟಿರುತ್ತಾರೆ.

ನಾನು ಅಪ್ರಾಪ್ತೆ ಎಂದು ತಿಳಿದಿದ್ದರೂ ನನ್ನನು ಪುಸಲಾಯಿಸಿ ಜೊತೆ ಲೈಂಗಿಕ ಸಂಪರ್ಕ ಬೆಳೆಸಿದ ಆತನ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕೇಂದು ಕೋರಿ ಆಪ್ತ ಸಮಾಲೋಚಕಿ‌ ಮುಂದೆ ನೀಡಿದ ಹೇಳಿಕೆಯಲ್ಲಿ ನೊಂದ ಬಾಲಕಿ ತಿಳಿಸಿದ್ದಾರೆ.




ಈ ಘಟನೆ ಸಂಬಂಧ ರಿಪ್ಪನ್‌ಪೇಟೆ ಠಾಣೆಯಲ್ಲಿ ಕಲಂ 376(2)(ಎನ್) (ಎಫ್) ಐಪಿಸಿ, ಕಲಂ 6, ಪೋಕ್ಸೊ ಕಾಯ್ದೆ 2012 ಹಾಗೂ ಕಲಂ 09, ಚೈಲ್ಡ್ ಮ್ಯಾರೇಜ್ ಆಕ್ಟ್ ಅಡಿ ಪ್ರಕರಣ ದಾಖಲಾಗಿದೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

14 hours ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

1 day ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

1 day ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

1 day ago

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

1 day ago

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

2 days ago