ರಿಪ್ಪನ್ಪೇಟೆ : ಇಲ್ಲಿನ ಹೊಸನಗರ ರಸ್ತೆಯ ಶ್ರೀರಾಮನಗರದ ಗ್ಯಾರೇಜ್ ನಲ್ಲಿ ಆಕಸ್ಮಿಕ ಬೆಂಕಿ ಹತ್ತಿಕೊಂಡು ಲಾರಿಯೊಂದು ಸಂಪೂರ್ಣ ಸುಟ್ಟು ಹೋಗಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ.
ಶ್ರೀರಾಮನಗರದ ಸುರೇಶ್ ಎಂಬುವವರಿಗೆ ಸೇರಿದ ಗ್ಯಾರೇಜ್ ನಲ್ಲಿ ತಡರಾತ್ರಿ ಏಕಾಏಕಿ ಬೆಂಕಿ ಹತ್ತಿಕೊಂಡಿದೆ.ಕೂಡಲೇ ಅಗ್ನಿಶಾಮಕ ಠಾಣೆ ಗೆ ಮಾಹಿತಿ ನೀಡಿ ಸ್ಥಳೀಯರ ಸಹಾಯದಿಂದ ಬೆಂಕಿ ಆರಿಸಲು ಪ್ರಯತ್ನಿಸಲಾಯಿತು,ನಂತರ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ಆರಿಸುವಲ್ಲಿ ಯಶಸ್ವಿಯಾದರು.ಲಾರಿ ಸಂಪೂರ್ಣ ಸುಟ್ಟು ಹೋಗಿದ್ದು, ಲಕ್ಷಾಂತರ ರೂ ನಷ್ಟವಾಗಿದೆ.
ಈ ಬಗ್ಗೆ ರಿಪ್ಪನ್ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಷಯ ತಿಳಿಯುತಿದ್ದಂತೆ ಸ್ಥಳಕ್ಕೆ ಆಗಮಿಸಿದ ಶಾಸಕ ಹರತಾಳು ಹಾಲಪ್ಪ ಗ್ಯಾರೇಜ್ ಮಾಲೀಕರಾದ ಸುರೇಶ್ ರವರಿಗೆ ಸಾಂತ್ವಾನ ಹೇಳಿ ವೈಯಕ್ತಿಕ ಧನ ಸಹಾಯ ಮಾಡಿದರು.
ಬಸವಾಪುರದಲ್ಲಿ ಅಡಿಕೆ ತೋಟ ಸುಟ್ಟು ಭಸ್ಮ
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅರಸಾಳು ಗ್ರಾಪಂ ವ್ಯಾಪ್ತಿಯ ಬಸವಾಪುರ ಗ್ರಾಮದ ನಾಗರಾಜ ಪಿ ಎಂಬುವವರಿಗೆ
ಸೇರಿದ ಅಡಿಕೆ ತೋಟಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ 200 ಕ್ಕೂ ಅಧಿಕ ಅಡಿಕೆ ಸಸಿಗಳು ಬೆಂಕಿಗಾಹುತಿಯಾದ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ.
ಆಕಸ್ಮಿಕವಾಗಿ ತಗುಲಿದ ಬೆಂಕಿಯಿಂದಾಗಿ ತೋಟದಲ್ಲಿದ್ದ ನೀರಿನ ಪೈಪ್ ಗಳು ಸೇರಿದಂತೆ 200 ಕ್ಕೂ ಅಧಿಕ ಅಡಿಕೆ ಸಸಿಗಳು ಸುಟ್ಟ ಕರಕಲಾಗಿದ್ದು ಅಪಾರ ನಷ್ಟ ಸಂಭವಿಸಿದೆ.
ಇಂದು ಸ್ಥಳಕ್ಕೆ ಆಗಮಿಸಿದ ಶಾಸಕ ಹರತಾಳು ಹಾಲಪ್ಪ ಬೆಂಕಿಗಾಹುತಿಯಾದ ತೋಟವನ್ನು ವೀಕ್ಷಿಸಿ ಸೂಕ್ತ ಪರಿಹಾರ ದೊರಕಿಸುವ ಭರವಸೆ ನೀಡಿ ವೈಯಕ್ತಿಕ ಧನ ಸಹಾಯ ಮಾಡಿದರು.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್