ರಿಪ್ಪನ್ಪೇಟೆ : ಸಮೀಪದ ವಡಗೆರೆಯ ಪ್ರತಾಪ್ ಎಂಬಾತನು ಕ್ಷುಲ್ಲಕ ಕಾರಣಕ್ಕೆ ಮತ್ತೊಂದು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಘಟನೆಯ ಹಿನ್ನಲೆ:
ಶುಕ್ರವಾರ ತಡರಾತ್ರಿ ವಡಗೆರೆ ನಿವಾಸಿ ಭರತ್ ಸಿಂಗ್ ಎಂಬಾತನು
ಮನೆಯಲ್ಲಿ ಊಟಮಾಡಿಕೊಂಡು ತನ್ನ ಸ್ನೇಹಿತ ಬಾಲಾಜಿರವರ ಶುಂಠಿ ಕಾಯಲು ಮನೆಯ ಮುಂಭಾಗ ಹೋಗುತ್ತಿದ್ದಾಗ ಭರತ್ ಬೈಕ್ ಹತ್ತಿರ ಪ್ರತಾಪ್ ಸಿಂಗ್ ನಿಂತಿದ್ದು, ಯಾರು ಎಂದು ಕೇಳಿದ್ದಕೆ ಪ್ರತಾಪ್ ಸಿಂಗ್ ಏಕಾಏಕಿ ಭರತ್ ಮೇಲೆ ಅವಾಚ್ಯವಾಗಿ ನಿಂದಿಸಿ ಕೈಗಳಿಂದ ಹೊಡೆದು ನಂತರ ಅಲೆ ಇದ್ದ ದೊಣ್ಣೆಯಿಂದ ಭರತ್ ಸಿಂಗ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ.
ಭರತ್ ಸಿಂಗ್ ಜೋರಾಗಿ ಕೂಗಿ ಕೊಂಡಿದ್ದರಿಂದ ತಾಯಿ ಮತ್ತು ಸ್ಥಳೀಯರು ಬಂದಿದ್ದಾರೆ. ಈ ಸಂಧರ್ಭದಲ್ಲಿ ಭರತ್ ಸಿಂಗ್ ಗೆ ಜೀವಬೆದರಿಕೆ ಹಾಕಿ ಪ್ರತಾಪ್ ಓಡಿಹೋಗಿದ್ದಾನೆ.
ನಂತರ ಭರತ್ ಸಿಂಗ್ ತಾಯಿ ಮತ್ತು ಸ್ಥಳೀಯರು ಗಂಭೀರ ಗಾಯಗೊಂಡಿದ್ದ ಭರತ್ ನನ್ನು ರಿಪ್ಪನಪೇಟೆ ಆಸ್ಪತ್ರೆಗೆ ಕರೆದುಕೊಂಡು ಬಂದು ನಂತರ ಅಲ್ಲಿಂದ ವೈದ್ಯರ ಸಲಹೆ ಮೇರೆಗೆ ಹೆಚ್ಚಿನ ಚಿಕಿತ್ಸೆಗಾಗಿ 108 ಅಂಬುಲೆನ್ಸ್ ನಲ್ಲಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ಕರೆದುಕೊಂಡು ಬಂದು ಚಿಕಿತ್ಸೆ ಕೊಡಿಸಿ ಒಳರೋಗಿಯಾಗಿ ದಾಖಲಿಸಿರುತ್ತಾರೆ.
ಈ ಬಗ್ಗೆ ರಿಪ್ಪನ್ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್