ಸಾಗರದಲ್ಲಿ ವರದಿಯೊಂದಕ್ಕೆ ಸಂಬಂಧಿಸಿದಂತೆ ಶಾಸಕರು ಪತ್ರಕರ್ತರೊಬ್ಬರ ಜೊತೆ ನಡೆಸಿದ ಸಂಭಾಷಣೆ, ಅವಮಾನ, ಧಮ್ಕಿ ಹಾಕಿದಂತೆ ಇದ್ದು, ನಿರ್ಭಯವಾಗಿ ವರದಿ ಮಾಡಲು ಪತ್ರಕರ್ತರಿಗೆ ಸೂಕ್ತ ರಕ್ಷಣೆ ಮತ್ತು ವಾತಾವರಣ ನಿರ್ಮಿಸಬೇಕೆ ಆಗ್ರಹಿಸಿ ರಾಜ್ಯ ಕಾರ್ಯನಿರತ ಪತ್ರಕರ್ತ ಸಂಘ ಇಂದು ಸಾಗರ ಶಾಖೆ ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಿತು.
ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಸಾಗರ ಕಾರ್ಯ ನಿರತ ಪತ್ರಕರ್ತರ ಸಂಘ ಇಂದು ಸಾಗರದ ಉಪ ವಿಭಾಗಧಿಕಾರಿಗಳ ಕಛೇರಿ ಎದುರು ಮೌನ ಪ್ರತಿಭಟನೆ ನೆಡೆಸಿ ಮನವಿ ಸಲ್ಲಿಸಲಾಯಿತು. ನಂತರ ಶಾಸಕ ಹರತಾಳು ಹಾಲಪ್ಪ ಕೃತ್ಯದ ವಿರುದ್ಧ ಆಕ್ರೋಶ ಮತ್ತು ಎಚ್ಚರಿಕೆ ನೀಡಲಾಯಿತು.
ವರದಿ ಮಾಡಿದ ಪತ್ರಕರ್ತ ಮಹೇಶ ಹೆಗಡೆಯವರನ್ನ ಶಾಸಕ ಹರತಾಳು ಹಾಲಪ್ಪ ರವರು ಸಾರ್ವಜನಿಕವಾಗಿ ಆಕ್ಷೇಪ ವ್ಯಕ್ತಪಡಿಸಿ ಮನಸಿಗೆ ಘಾಸಿಗೊಳಿಸಿದ್ದರಿಂದ ಮಹೇಶ್ ನೊಂದು ಸಂಘದಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದರು. ದೂರು ನೀಡಿದ ಹಿನ್ನಲೆಯಲ್ಲಿ ಸಾಗರದ ಉಪವಿಭಾಗಾಧಿಕಾರಿಗಳಿಗೆ ಮನವಿ ನೀಡಿ ಪತ್ರಕರ ರಕ್ಷಣೆಗೆ ತಾಲೂಕು ಆಡಳಿತ ಮುಂದಾಗುವಂತೆ ಸಂಘಟನೆ ಆಗ್ರಹಿಸಿದೆ.
ಪತ್ರಕರ್ತರಿಗೆ ಸೂಕ್ತ ರಕ್ಷಣೆ ನೀಡುವಂತೆ ಉಪ ವಿಭಾಗಾಧಿಕಾರಿಗಳ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದ ಸಾಗರ ತಾಲ್ಲೂಕು ಕಾರ್ಯ ನಿರತ ಪತ್ರಕರ್ತರ ಸಂಘ, ಈ ವೇಳೆ ಸಂಘದ ದೀಪಕ್, ಗಣೇಶ್, ಇಮ್ರಾನ್, ಮೊದಲಾದವರು ಭಾಗಿಯಾಗಿದ್ದರು.
ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ Congress leaders in Sagar have hit…
ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ Summa S.…
ರಿಪ್ಪನ್ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in…
ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…
ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…
RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ - ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು…