ಸಾಗರದಲ್ಲಿ ವರದಿಯೊಂದಕ್ಕೆ ಸಂಬಂಧಿಸಿದಂತೆ ಶಾಸಕರು ಪತ್ರಕರ್ತರೊಬ್ಬರ ಜೊತೆ ನಡೆಸಿದ ಸಂಭಾಷಣೆ, ಅವಮಾನ, ಧಮ್ಕಿ ಹಾಕಿದಂತೆ ಇದ್ದು, ನಿರ್ಭಯವಾಗಿ ವರದಿ ಮಾಡಲು ಪತ್ರಕರ್ತರಿಗೆ ಸೂಕ್ತ ರಕ್ಷಣೆ ಮತ್ತು ವಾತಾವರಣ ನಿರ್ಮಿಸಬೇಕೆ ಆಗ್ರಹಿಸಿ ರಾಜ್ಯ ಕಾರ್ಯನಿರತ ಪತ್ರಕರ್ತ ಸಂಘ ಇಂದು ಸಾಗರ ಶಾಖೆ ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಿತು.
ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಸಾಗರ ಕಾರ್ಯ ನಿರತ ಪತ್ರಕರ್ತರ ಸಂಘ ಇಂದು ಸಾಗರದ ಉಪ ವಿಭಾಗಧಿಕಾರಿಗಳ ಕಛೇರಿ ಎದುರು ಮೌನ ಪ್ರತಿಭಟನೆ ನೆಡೆಸಿ ಮನವಿ ಸಲ್ಲಿಸಲಾಯಿತು. ನಂತರ ಶಾಸಕ ಹರತಾಳು ಹಾಲಪ್ಪ ಕೃತ್ಯದ ವಿರುದ್ಧ ಆಕ್ರೋಶ ಮತ್ತು ಎಚ್ಚರಿಕೆ ನೀಡಲಾಯಿತು.
ವರದಿ ಮಾಡಿದ ಪತ್ರಕರ್ತ ಮಹೇಶ ಹೆಗಡೆಯವರನ್ನ ಶಾಸಕ ಹರತಾಳು ಹಾಲಪ್ಪ ರವರು ಸಾರ್ವಜನಿಕವಾಗಿ ಆಕ್ಷೇಪ ವ್ಯಕ್ತಪಡಿಸಿ ಮನಸಿಗೆ ಘಾಸಿಗೊಳಿಸಿದ್ದರಿಂದ ಮಹೇಶ್ ನೊಂದು ಸಂಘದಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದರು. ದೂರು ನೀಡಿದ ಹಿನ್ನಲೆಯಲ್ಲಿ ಸಾಗರದ ಉಪವಿಭಾಗಾಧಿಕಾರಿಗಳಿಗೆ ಮನವಿ ನೀಡಿ ಪತ್ರಕರ ರಕ್ಷಣೆಗೆ ತಾಲೂಕು ಆಡಳಿತ ಮುಂದಾಗುವಂತೆ ಸಂಘಟನೆ ಆಗ್ರಹಿಸಿದೆ.
ಪತ್ರಕರ್ತರಿಗೆ ಸೂಕ್ತ ರಕ್ಷಣೆ ನೀಡುವಂತೆ ಉಪ ವಿಭಾಗಾಧಿಕಾರಿಗಳ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದ ಸಾಗರ ತಾಲ್ಲೂಕು ಕಾರ್ಯ ನಿರತ ಪತ್ರಕರ್ತರ ಸಂಘ, ಈ ವೇಳೆ ಸಂಘದ ದೀಪಕ್, ಗಣೇಶ್, ಇಮ್ರಾನ್, ಮೊದಲಾದವರು ಭಾಗಿಯಾಗಿದ್ದರು.
ರ್ಯಾಂಕ್ಸ್ ಇನ್ಸ್ಟಿಟ್ಯೂಟ್–ಜೆಸಿಐ ಹೊಸನಗರ ಡೈಮಂಡ್ ಸಹಯೋಗದಲ್ಲಿ ‘Gen Z Connect’ ತರಬೇತಿ ಯಶಸ್ವಿ Ranks Institute–JCI Hosanagara Diamond Hosts…
ಬೆಳ್ಳೂರು GHPSನಲ್ಲಿ ಸ್ವಾತಂತ್ರ್ಯ ಸಂಭ್ರಮ: ಶಾಲೆಗೆ ಕೊಡುಗೆಗಳ ಮಹಾಪೂರ! Satish Ripponpete donated a TV to GHPS Bellur…
ಗರ್ತಿಕೆರೆಯಲ್ಲಿ ಮಾರಣಾಂತಿಕ ಹಲ್ಲೆ: ಅಟ್ಟಹಾಸ ಮೆರೆದಿದ್ದ ಆರೋಪಿಯ ಹೆಡೆಮುರಿ ಕಟ್ಟಿದ ಪೊಲೀಸರು Police arrest Raghavendra alias Apple Raghu…
ಅಕ್ರಮ ಗೋ ಸಾಗಾಟ ತಡೆಯಲು ಹೋದ ಬಜರಂಗದಳ ಕಾರ್ಯಕರ್ತರ ಮೇಲೆ ಭೀಕರ ಹಲ್ಲೆ - ಬಿ ವೈ ವಿಜಯೇಂದ್ರ ಆಕ್ರೋಶ…
ಗರ್ತಿಕೆರೆಯಲ್ಲಿ ವ್ಯಕ್ತಿಯ ಮೇಲೆ ಕಬ್ಬಿಣದ ರಾಡ್ ನಿಂದ ಮಾರಣಾಂತಿಕ ಹಲ್ಲೆ; ತಲೆಯ ಮೇಲೆ ಕಾಲಿಟ್ಟು ಅಟ್ಟಹಾಸ ಮೆರೆದ ಭೂಫ A…
ಚುಂಚಾದ್ರಿ ಮಹಿಳಾ ಒಕ್ಕಲಿಗರ ವೇದಿಕೆಯಿಂದ ಸ್ವಾತಂತ್ರ್ಯ ದಿನಾಚರಣೆ Ripponpete Chunchadri Mahila Okkaligar Vedike celebrated the 80th Independence…